ಕೆ.ಎಂ.ದೊಡ್ಡಿ : ತಾಲೂಕಿನ ಕೆರೆಗಳ ಸಮಗ್ರ ಅಭಿವೃದ್ಧಿ ಮಾಡಿ, ನೀರು ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ ಉದಯ್ ತಿಳಿಸಿದ್ದಾರೆ.
ಭಾರತಿನಗರ ಸಮೀಪದ ಕೂಳಗೆರೆ ಏತ ನೀರಾವರಿ ಬಿಂದುವಿನ ಉನ್ನತೀಕರಣ ಮತ್ತು ಪುನರುಜ್ಜೀವನಗೊಳಿಸುವ ಕಾಮಗಾರಿ ಉದ್ಘಾಟನೆ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೆರೆ ತುಂಬಿಸುವುದರಿಂದ ಅಂತರ್ಜಲ ವೃದ್ಧಿಗೆ ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಮದ್ದೂರು ತಾಲೂಕಿನ ನೀರಾವರಿ ಯೋಜನೆಗಳ ಅಭಿವೃದ್ಧಿಗೆ ಹೆಚ್ಚಿನ ಶ್ರಮವನ್ನು ವಹಿಸಲಾಗುವುದು ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ಮಳೆ ಹಾಗೂ ಕಾಲುವೆ ನೀರಾವರಿಗಳಿಂದ ಕೆರೆಗಳಿಗೆ ನೀರು ತುಂಬುವುದರಿಂದ ಅಂತರ್ಜಲ ವೃದ್ಧಿಯಾಗಿ ರೈತರ ಬೋರ್ವೆಲ್ಗಳಲ್ಲಿ ನೀರು ಹೆಚ್ಚು ವೃದ್ಧಿಸಲಿದರೆ, ಉತ್ತಮ ಬೆಳೆದು ಹೆಚ್ಚಿನ ಆದಾಯ ಪಡೆಯಲು ವರದಾನವಾಗಲಿದೆ ಎಂದು ತಿಳಿಸಿದರು
ಶಿಂಷಾ ನದಿ ತೀರದ ಕೂಳಗೆರೆಯಿಂದ ಮಲ್ಲನಕುಪ್ಪೆವರೆಗೆ ಮಳೆ ಹಾಗೂ ಬೋರ್ ವೆಲ್ ಆಶ್ರಿತ ಪ್ರದೇಶವಾಗಿರುವುದರಿಂದ ಈ ಭಾಗದ ಕೆರೆಗಳ ಅಭಿವೃದ್ಧಿ ಹಾಗೂ ನೀರು ತುಂಬಿಸುವ ಮೂಲಕ ಅಂತರ್ಜಲ ಹೆಚ್ಚಿಸುವ ಜತೆಗೆ ಮುಂದೆ ಈ ಭಾಗದಲ್ಲಿ ಎಂದಿಗೂ ಕುಡಿಯಲು ಮತ್ತು ಬೇಸಾಯ ಮಾಡಲು ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
ಬೇಸಿಗೆ ಆರಂಭವಾಗಿದೆ. ನೀರಿನ ಭವಣೆ ನೀಗಿಸಲು ಈಗಾಗಲೇ ಅಧಿಕಾರಿಗಳ ಜತೆಯಲ್ಲಿ ಹಲವಾರು ಬಾರಿ ಸಭೆ ನಡೆಸಿ ಚರ್ಚಿಸಲಾಗಿದ್ದು, ಶಾಶ್ವತವಾಗಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೂಳಗೆರೆ ಏತ ನೀರಾವರಿಗೆ 1977ರಲ್ಲಿ ಚಾಲನೆ ಆಗಿತ್ತು. ಆದರೆ ಅಲ್ಲಿಂದ ಇಲ್ಲಿಯವರೆಗೆ ರೈತರಿಗೆ ಈ ಯೋಜನೆಯಿಂದ ಸಮರ್ಪಕವಾಗಿ ಅನುಕೂಲವಾಗುತ್ತಿರಲಿಲ್ಲ. ಈ ಬಗ್ಗೆ ಗ್ರಾಮಸ್ಥರು ನನ್ನ ಗಮನಕ್ಕೆ ತಂದ ಕಾರಣ ಯೋಜನೆಗೆ ಎರಡೂವರೆ ಕೋಟಿ ರೂ ವೆಚ್ಚದಲ್ಲಿ ಪುನರುಜ್ಜೀವನ ಗೊಳಿಸಿ ಸುಮಾರು ೨೧೦೦ ಎಕೆರೆ ಜಮೀನಿಗೆ ನೀರುಣಿಸುವ ಕಾಮಗಾರಿ ಆಗಿದ್ದು ಇದರ ಉಪಯೋಗವನ್ನು ರೈತರು ಸಮರ್ಪಕವಾಗಿ ಉಪಯೋಗಿಸಿಕೊಂಡು ಆರ್ಥಿಕವಾಗಿ ಸಧೃಡವಾಗಬಹುದೆಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೆ ಸಂದರ್ಭದಲ್ಲಿ ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ಚಲುವರಾಜು, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರಾದ ಮೋಹನ್, ನವೀನ್, ಸಹಾಯಕ ಅಭಿಯಂತರ ಚೈತ್ರ, ಪಿಡಿಒ ರಾಜಣ್ಣ, ಮುಖಂಡರಾದ ಶ್ರೀನಿವಾಸ , ಕೃಷ್ಣ, ಜಯರಾಮು, ಕೆಂಪರಾಜು, ಗುತ್ತಿಗೆದಾರ ರಮಣರೆಡ್ಡಿ ಸೇರಿದಂತೆ ಹಲವರು ಮತ್ತಿತರಿದ್ದರು.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…