ಮಂಡ್ಯ

ಕಾವೇರಿ ಆರತಿಗೆ ಸಮಿತಿ ರಚನೆ ; ಡಿಸಿಎಂ ಡಿ.ಕೆ ಶಿವಕುಮಾರ್‌

ಮಂಡ್ಯ : ಗಂಗಾರತಿ ರೀತಿ ದಕ್ಷಿಣ ಕರ್ನಾಟಕದ ಜೀವನಾಡಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲು ಸಮಿತಿ ರಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದರು.

ಕೆ.ಆರ್.ಎಸ್ ಅಣೆಕಟ್ಟೆಯ ಸುತ್ತ ಡಿ. ಕೆ. ಶಿವಕುಮಾರ್ ಸ್ಥಳೀಯ ಜನಪ್ರತಿನಿದಿಗಳು ಹಾಗೂ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿ., ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ. ಕೆ. ಶಿವಕುಮಾರ್, ಸರ್ಕಾರದ ವತಿಯಿಂದ 98 ಕೋಟಿ ಹಣವನ್ನು ಕಾವೇರಿ ಆರತಿ ಮಾಡುವ ಸಲುವಾಗಿ ಈ ಬಾರಿಯ ಬಜೆಟ್ ನಲ್ಲಿ ಅನುದಾನ ಮೀಸಲಿಡಲಾಗಿದೆ. ಈ ಭಾಗದ ಪವಿತ್ರ ನದಿಯಾಗಿ ಜೀವನಾಡಿಯಾಗಿರುವ ಕಾವೇರಿ ಮಾತೆಗೆ ಪೂಜೆ ಸಲ್ಲಿಸುವ ಸಲುವಾಗಿ ಅನೇಕ ಸಲಹೆಯನ್ನು ಪಡೆಯಲಾಗಿದೆ ಎಂದರು.

ಕಂದಾಯ, ಮುಜರಾಯಿ, ಪ್ರವಾಸೋದ್ಯಮ, ನೀರಾವರಿ, ಚೆಸ್ಕಂ ಸೇರಿದಂತೆ ಹಲವು ಇಲಾಖೆಗಳ ಜೊತೆಗೂಡಿ ಸಮಿತಿಯನ್ನು ರಚಿಸಲಾಗಿದೆ. ಇನ್ನೆರಡು ದಿನದಲ್ಲಿ ನೀಲಿ ನಕ್ಷೆ ತಯಾರಿಸಲಾಗುವುದು ಎಂದರು.

98 ಕೋಟಿ ಸೇರಿದಂತೆ ವಿವಿಧ ಇಲಾಖೆಗಳಿಂದ ಅನುದಾನ ಪಡೆದು ವಿಶೇಷ ರೀತಿಯಲ್ಲಿ ಗಂಗಾರತಿ‌ ಮಾಡಲಾಗುವುದು. ವಿದ್ಯುತ್ ಅಲಂಕಾರ ಸೇರಿದಂತೆ ಇದರ ಜೊತೆಗೆ ಹಲವು ಇಲಾಖೆಯಿಂದಲೂ ಹಣವನ್ನು ಬಳಸಿಕೊಳ್ಳಲಾಗುವುದು. ಸಮರ್ಪಕ ರಸ್ತೆ ನಿರ್ಮಿಸಿ ಧಾರ್ಮಿಕವಾಗಿ ಕುಟುಂಬ ಸಮೇತವಾಗಿ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು ಕೆ ಆರ್ ಎಸ್ ವ್ಯಾಪ್ತಿಗೆ ಬರುವ 4 ಪಂಚಾಯತಿಗಳ ಅಭಿವೃದ್ದಿಗೆ ಯೋಜನೆ ರೂಪಿಸಬೇಕು. ಯೋಜನೆ ವಿವರವನ್ನು ನೀಡಲಾಗುವುದು ಉಳಿದ ವ್ಯವಸ್ಥೆ ಆಯಾ ನಿವಾಸಿಗಳೇ ಮಾಡಿಕೊಳ್ಳಬೇಕು. ಇದರಿಂದ ಇಲ್ಲಿನ ಸ್ಥಳೀಯ ಯುವ ಜನರಿಗೆ ಹೆಚ್ಚು ಉದ್ಯೋಗವಕಾಶವನ್ನು ನೀಡಲಾಗುವುದು ಕಾವೇರಿ ಆರತಿಯನ್ನು ಒಂದೇ ಬಾರಿಗೆ 10ಸಾವಿರ ಜನರು ನೋಡುವ ವ್ಯವಸ್ಥೆಯನ್ನು ಮಾಡಲಾಗುವುದು ವಾರದಲ್ಲಿ ಎಷ್ಟು ದಿನ ಕಾವೇರಿ ಆರತಿ ಮಾಡಬೇಕು ಎಂಬುದರ ಬಗ್ಗೆ ಮುಂದಿನ ದಿನದಲ್ಲಿ ಬೆಂಗಳೂರಿನಲ್ಲೂ ಮತ್ತೊಂದು ಸಭೆ ಮಾಡಿ ತೀರ್ಮಾನ ಮಾಡಲಾಗುವುದು ಎಂದರು.

ಈ ಬಾರಿ ವಿನೂತನ ದಸರಾ; ಕಂಬಳ ಸೇರ್ಪಡೆ:
ನಾಡ ಹಬ್ಬ ದಸರಾವನ್ನು ಸಹ ವಿನೂತನವಾಗಿ ಆಚರಿಸಲು ಚರ್ಚೆ ನಡೆಸಲಾಗಿದೆ. ಹಳೆಯ ಒಂದಷ್ಟು ಪದ್ದತಿಗಳನ್ನು ಕೈಬಿಟ್ಟು ಹೊಸ ಪೀಳಿಗೆಯನ್ನು ಸೆಳೆಯುವಂತೆ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿಗಳು ಶೀಘ್ರದಲ್ಲಿಯೇ ಸಭೆ ನಡೆಸೋಣ ಎಂದು ಹೇಳಿದ್ದಾರೆ. ಕಂಬಳ ನಮ್ಮ ರಾಜ್ಯದ ಕರಾವಳಿ ಭಾಗ ವಿಶೇಷವಾದ ಆಚರಣೆ, ಹೀಗಾಗಿ ಕಂಬಳವನ್ನು ದಸರಾದಲ್ಲಿ ಸೇರಿಸಲಾಗುವುದು. ಇದಕ್ಕೆ ಸ್ಥಳ ಹುಡುಕಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಶಾಸಕ ರಮೇಶ್ ಬಾಬು ಬಂಡಿ ಸಿದ್ದೇಗೌಡ, ದರ್ಶನ ಪುಟ್ಟಣ್ಣಯ್ಯ, ದಿನೇಶ್ ಗೂಳಿಗೌಡ, ಮಂಡ್ಯ ಜಿಲ್ಲಾಧಿಕಾರಿ ಕುಮಾರ್, ಸಿ ಇ ಒ ನಂದಿನಿ, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಬಿ.ಡಬ್ಲ್ಯೂ.ಎಸ್.ಎಸ್.ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್, ಕಾವೇರಿ ನೀರಾವರಿ ನಿಗಮದ ಎಂ.ಡಿ. ಮಹೇಶ್ ಮತ್ತಿತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

8 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

9 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

9 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

9 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

10 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

10 hours ago