ಮಂಡ್ಯ

ಕೋಮು ಗಲಭೆ: ಹಲ್ಲೆ ಮಾಡಿ ಮನೆಗಳಿಗೆ ನುಗ್ಗಿ ಬೆದರಿಕೆ ಹಾಕಿದ ಕಿಡಿಗೇಡಿಗಳು

ನಾಗಮಂಗಲ: ಯುವಕನ ಮೇಲೆ ಅನ್ಯ ಕೋಮಿನ ಗುಂಪು ಮಾರಣಾಂತಿಕ ಹಲ್ಲೆ ಮಾಡಿ, ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ತಾಲೂಕಿನ ಬೆಳ್ಳೂರಿನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಬೆಳ್ಳೂರಿನ ಅಭಿಲಾಶ್ ಮೇಲೆ ಮಾರಕಾಸ್ರದಿಂದ ಹಲ್ಲೆ ಮಾಡಿರುವ ಗುಂಪು ಇದೇ ವೇಳೆ ಇತರರ ಮೇಲೆ ಹಲ್ಲೆ ನಡಸಿ ಮನೆಗಳಿಗೆ ನುಗ್ಗಿ ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಲ್ಲದೆ ಮಹಿಳೆಯರಿಗೆ ಬೆದರಿಕೆಯೊಡ್ಡಿದೆ. ಸೋಮವಾರ ಸಂಜೆ ಅನ್ಯ ಕೋಮಿನ ಗುಂಪು ದುಷ್ಕೃತ್ಯ ಎಸಗಿದ್ದು, ಇದರಿಂದ ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದ್ದು, ಎಲ್ಲೆಡೆ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದೆ. ಗಾಯಾಳು ಅಭಿಲಾಶ್‌ನನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಳೆದ ಶುಕ್ರವಾರ ಸಂತೆ ಬೀದಿ ರಸ್ತೆಯಲ್ಲಿ ಅಭಿಲಾಶ್, ನಾಗೇಶ್ ಮತ್ತು ಅನ್ಯ ಕೋಮಿನ ಯುವಕರ ನಡುವೆ ಸಣ್ಣ ವಿಚಾರಕ್ಕೆ ಮಾತಿನ ಚಕಮಕಿ ನಡೆದಿತ್ತು. ಮಾರನೇ ದಿನ ಗಂಗಾ ಆರತಿ ಹಬ್ಬ ಆಚರಣೆಯಲ್ಲಿ ನಿರತರಾಗಿದ್ದಾಗ ತಡರಾತ್ರಿ ವೇಳೆ ಅಲ್ಲಿಗೆ ತೆರಳಿದ್ದ ಅನ್ಯ ಕೋಮಿನ ಗುಂಪು ಅವರಿಬ್ಬರನ್ನು ನಾವು ಬಿಡೋದಿಲ್ಲ, ನೀವು ಹಬ್ಬ ಮಾಡಿಕೊಳ್ಳಿ, ನಮ್ಮದು ಮದುವೆ ಇದೆ ಆಮೇಲೆ ಗತಿ ಕಾಣಿಸುತ್ತೇವೆ ಎಂದು ಮಹಿಳೆಯರನ್ನ ಬೆದರಿಸಿತ್ತು, ಇದರಿಂದ ಹೆದರಿದ ನಾಲ್ಕೈದು ಮಹಿಳೆಯರು ಬೆಳ್ಳೂರು ಪೊಲೀಸ್ ಠಾಣೆಗೆ ತೆರಳಿ ವಿಚಾರ ತಿಳಿಸಿ ದೂರು ನೀಡಲು ಮುಂದಾದಾಗ ಪೊಲೀಸರು ಬೆಳಿಗ್ಗೆ ಬನ್ನಿ ಎಂದಿದ್ದರು.

ಮತ್ತೆ ಯಾರು ಇತ್ತ ಸುಳಿಯದ ಹಿನ್ನೆಲೆಯಲ್ಲಿ ತೊಂದರೆ ಇಲ್ಲ ಎಂದು ಮಹಿಳೆಯರು ಸುಮ್ಮನಾಗಿದ್ದರು. ಆದರೆ ಸೋಮವಾರ ಸಂಜೆ ಅನ್ಯ ಕೋಮಿನ ಗುಂಪು ಯುವಕರನ್ನು ಹುಡುಕಾಡಿ ಅಭಿಲಾಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೆ ತಡೆಯಲು ಬಂದವರ ಮೇಲೆ ಹಲ್ಲೆ ನಡೆಸಿ ಮನೆಗಳ ಕಿಟಕಿ ಗಾಜು ಪುಡಿಪುಡಿ ಮಾಡಿ ಮಹಿಳೆಯರಿಗೆ ಜೀವ ಬೆದರಿಕೆ ಹಾಕಿದ್ದಾರೆ. ತಕ್ಷಣ ಸ್ಥಳೀಯರು ಗಾಯಾಳು ಅಭಿಲಾಷ್‌ನನ್ನು ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಾಂಧಲೆಗೂ ಮುನ್ನ ವಿದ್ಯುತ್ ತೆಗೆದಿರುವುದು ಹಾಗೂ ಹಲ್ಲೆ ಮಾಡಿದ ನಂತರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಮುಂದಾಗಿರುವುದು ಪೂರ್ವ ಯೋಜಿತ ಸಂಚು ಎಂದು ಹೇಳಲಾಗಿದೆ.

ಪ್ರಕರಣದ ಹಿನ್ನೆಲೆಯಲ್ಲಿ ಬೆಳ್ಳೂರು ಪಟ್ಟಣದಲ್ಲಿ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದ್ದು, ಪಟ್ಟಣದ ಆಯಾ ಕಟ್ಟಿನ ಪ್ರದೇಶ, ಪೊಲೀಸ್ ಠಾಣೆ ಹಾಗೂ ಆದಿಚುಂಚನಗಿರಿ ಆಸ್ಪತ್ರೆ ಬಳಿ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಬೆಳ್ಳೂರಿಗೆ ಭೇಟಿ ನೀಡಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಬೆಳ್ಳೂರಿನ ಘಟನಾಸ್ಥಳಕ್ಕೆ ಭೇಟಿ ನೀಡಿ ನೊಂದ ಮಹಿಳೆಯರನ್ನು ಭೇಟಿಯಾಗಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಮಾಜಿ ಶಾಸಕ ಸುರೇಶ ಗೌಡ ಮಾತನಾಡಿ, ಯುವಕರ ಗುಂಪೊಂದು ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಮಹಿಳೆಯರಿಗೆ ಬೆದರಿಕೆ ಹಾಕಿದ್ದಲ್ಲದೆ ಮನೆಗಳಿಗೆ ಹಾನಿ ಮಾಡಿದ್ದಾರೆ, ಘಟನೆ ನಂತರ ಪೊಲೀಸರು ಹಲವರನ್ನು ಬಂಧಿಸಿ ಠಾಣೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅವರನ್ನೆಲ್ಲ ಬಿಟ್ಟು ಕಳುಹಿಸಿದ್ದಾರೆ, ಇದರ ಹಿನ್ನೆಲೆ ಏನು ಎಂದು ಪ್ರಶ್ನಿಸಿದರು.

ಅಷ್ಟೇ ಅಲ್ಲದೆ ಸಿಸಿಟಿವಿ ಫುಟೇಜ್‌ಗಳನ್ನು ಯಾರೂ ಕೂಡ ನೀಡದಂತೆ ಬೆದರಿಕೆ ಹಾಕಲಾಗಿದೆ, ನಾವು ಯಾರ ಪರವೂ ಅಲ್ಲ, ನ್ಯಾಯದ ಪರ ಆದರೆ ಕಾಂಗ್ರೆಸ್ ಸರ್ಕಾರ ಒಂದು ಧರ್ಮವನ್ನು ಓಲೈಸುವ ರಾಜಕಾರಣ ಮಾಡುತ್ತ ಬೇರೆ ಧರ್ಮೀಯರ ಬಗ್ಗೆ ನಿರ್ಲಕ್ಷ ತೋರಿದೆ ಎಂದು ಆರೋಪಿಸಿದರು. ಬೆಳ್ಳೂರು ಪ್ರಕರಣದಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ, ಮುನ್ನೆಚ್ಚರಿಕೆ ವಹಿಸಿದ್ದರೆ ಘಟನೆ ತಡೆಯಬಹುದಾಗಿತ್ತು, ದುಷ್ಕೃತ್ಯ ಮಾಡಿರುವವರನ್ನು ರಕ್ಷಿಸಲು ಮುಂದಾಗಬಾರದು, ಪೊಲೀಸರು ತಾರತಮ್ಯ ಮಾಡದೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಬೆಳ್ಳೂರಿನ ಎಲ್ಲಾ ಧರ್ಮದ ಜನತೆ ಶಾಂತಿ ಕಾಪಾಡಲು ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

2 mins ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

21 mins ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

56 mins ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

1 hour ago

ಐಪಿಎಲ್‌ ಪಂದ್ಯ : ಏಪ್ರಿಲ್‌ 15, 24ರಂದು ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್‌ ಪಂದ್ಯಗಳು ಏಪ್ರಿಲ್ ‌15 ಹಾಗೂ ಏಪ್ರಿಲ್ ‌24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.…

1 hour ago

ನಿತೀಶ್ ಕುಮಾರ್ ರಾಜೀನಾಮೆ; ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಹಾರದ ಹೊಸ…

1 hour ago