ಮಂಡ್ಯ

ಮಲ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಜಿ.ಪಂ ಸಿಇಒ ಸೂಚನೆ

ಮಂಡ್ಯ : ಶೌಚಾಲಯದ ಗುಂಡಿಗಳನ್ನು ಯಾಂತ್ರೀಕೃತ ವಿಧಾನದ ಮೂಲಕ ಸ್ವಚ್ಛಗೊಳಿಸಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ವಿಲೆ ಮಾಡುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಮಲ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಆರ್.ಐ.ಡಿ.ಎಲ್ ನ ಕಾರ್ಯಪಾಲಕ ಅಭಿಯಂತರರಿಗೆ ಜಿ.ಪಂ. ಸಿಇಓ ಕೆ.ಆರ್‌ ನಂದಿನಿ ಸೂಚನೆ ನೀಡಿದರು.

ಪಾಂಡವಪುರ ತಾಲ್ಲೂಕಿನ ಕೆ.ಬೆಟ್ಟಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮಲ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿಯನ್ನು ವೀಕ್ಷಿಸಿದ ಅವರು, ಮಲ ತ್ಯಾಜ್ಯವನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದಿದ್ದಲ್ಲಿ ಅದು ಪರಿಸರ ಮತ್ತು ಆರೋಗ್ಯದ ಮೇಲೆ ತೀವ್ರವಾದ ಪರಿಣಾಮ ಬೀರುತ್ತದೆ. ಆದ್ದರಿಂದ, ವೈಜ್ಞಾನಿಕವಾಗಿ ಮಲ ತ್ಯಾಜ್ಯವನ್ನು ನಿರ್ವಹಣೆ ಮಾಡಬೇಕಾಗಿದೆ ಎಂದು ತಿಳಿಸಿದರು.

ಸಕ್ಕಿಂಗ್ ಯಂತ್ರವನ್ನು ಮರುಚಾಲನೆಗೊಳಿಸಲು ಸೂಚನೆ ಪಾಂಡವಪುರ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಈ ಹಿಂದೆ 13ನೇ ಹಣಕಾಸು ಯೋಜನೆಯಡಿ ಶೌಚಾಲಯದ ಗುಂಡಿಗಳನ್ನು ಯಾಂತ್ರೀಕೃತ ವಿಧಾನದ ಮೂಲಕ ಸ್ವಚ್ಛಗೊಳಿಸಲು ಸಕ್ಕಿಂಗ್ ಯಂತ್ರ ಖರೀದಿಸಲಾಗಿದ್ದು, ಸದರಿ ಯಂತ್ರಕ್ಕೆ ವಾಹನ ಚಾಲಕರು ಮತ್ತು ಸಹಾಯಕರಿಲ್ಲದೇ ಚಾಲನೆಯಲ್ಲಿಲ್ಲ. ಆದ್ದರಿಂದ ಸದರಿ ಸಕ್ಕಿಂಗ್ ಯಂತ್ರವನ್ನು ಆಸಕ್ತ ಮತ್ತು ಸಶಕ್ತ ಸ್ವ-ಸಹಾಯ ಸಂಘದ ಮೂಲಕ ನಿರ್ವಹಣೆ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದರು.

ಉದ್ದಿಮೆ ಮಾದರಿಯಲ್ಲಿ ಸ್ವ-ಸಹಾಯ ಸಂಘ ಅಥವಾ ಜಿ.ಪಿ.ಎಲ್.ಎಫ್ ಮೂಲಕ ಕರಾರು ಒಪ್ಪಂದ ಮಾಡಿಕೊಂಡು ಮಲ ತ್ಯಾಜ್ಯ ನಿರ್ವಹಣಾ ಘಟಕ ಮತ್ತು ಸಕ್ಕಿಂಗ್ ಯಂತ್ರವನ್ನು ಕಾರ್ಯಾಚರಣೆ ಮತ್ತು ನಿರ್ವಹಣೆ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಕಾಂಪೌಂಡ್ ನಿರ್ಮಾಣ ತ್ಯಾಜ್ಯ ನಿರ್ವಹಣೆಗಾಗಿ ಕಂದಾಯ ಇಲಾಖೆಯಿಂದ ಮಂಜೂರಾಗಿರುವ ಒಂದು ಎಕರೆ ಜಮೀನಿಗೆ ಗ್ರಾ.ಪಂ. ಲಭ್ಯ ಅನುದಾನದಲ್ಲಿ ಕಾಂಪೌಂಡ್ ನಿರ್ಮಾಣ ಮಾಡುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಒಣ ತ್ಯಾಜ್ಯವನ್ನು ಸಂಗ್ರಹಿಸಿ, ಕೇಂದ್ರೀಕೃತ ಮಾದರಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಸಾಗಾಣೆ ಮಾಡಿ ವೈಜ್ಞಾನಿಕವಾಗಿ ನಿರ್ವಹಣೆ ಮಾಡಲು ಅಗತ್ಯವಿರುವ ಕ್ರಮಗಳನ್ನು ಆಯಾ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತೆಗೆದುಕೊಂಡು ತಗಲುವ ವೆಚ್ಚದ ಪ್ರಸ್ತಾವನೆಯನ್ನು ಜಿಲ್ಲಾ ಪಂಚಾಯತ್ ಗೆ ಸಲ್ಲಿಸಲು ಸೂಚಿಸಿದರು.

ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿನ ಸ್ವಚ್ಛ ವಾಹಿನಿಗಳ ವಿಮೆಯನ್ನು ನವೀಕರಣಗೊಳಿಸಬೇಕು, ಸ್ವಚ್ಛ ವಾಹಿನಿಯ ಚಾಲಕಿಯರಿಗೆ ಡ್ರೈವಿಂಗ್ ಲೈಸೆನ್ಸ್ ವಿತರಣೆ ಮಾಡಬೇಕು, ಜಿ.ಪಿ.ಎಲ್.ಎಫ್.ಗಳ ಕರಾರು ಒಪ್ಪಂದವನ್ನು ನವೀಕರಣಗೊಳಿಸಬೇಕು ಹಾಗೂ ವಾಹನಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿ.ಪಂ. ಉಪಕಾರ್ಯದರ್ಶಿ ಲಕ್ಷ್ಮಿ, ಕೆ.ಆರ್.ಐ.ಡಿ.ಎಲ್. ಕಾರ್ಯಪಾಲಕ ಅಭಿಯಂತರ ಸೋಮಶೇಖರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವೀಣಾ, ಪಿಡಿಓ ಪೂರ್ಣಿಮಾ ಸೇರಿದಂತೆ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

4 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

6 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

6 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

6 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

7 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

7 hours ago