ಮಂಡ್ಯ

ಮಂಡ್ಯ | ದಲಿತ ಸಂಘಟನೆಗಳ ಬಗ್ಗೆ ಅನ್ನದಾನಿ ಹೇಳಿಕೆಗೆ ಖಂಡನೆ

ಮಂಡ್ಯ: ದಲಿತ ಸಂಘಟನೆಗಳ ಪ್ರತಿಭಟನೆ ಕಾಂಗ್ರೆಸ್ ಪ್ರೇರಿತ, ಕಾಂಗ್ರೆಸ್‌ನಿಂದ ಹಣ ಪಡೆದು ಪ್ರತಿಭಟನೆ ನಡೆಸಲಾಗುತ್ತಿದೆ ಎಂಬ ಮಾಜಿ ಶಾಸಕ ಕೆ.ಅನ್ನದಾನಿ ಅವರ ಹೇಳಿಕೆಯನ್ನು ದಲಿತ, ರೈತ, ಅಲ್ಪಸಂಖ್ಯಾತ, ಕಾರ್ಮಿಕ ಹಿಂದುಳಿದ ವರ್ಗಗಳ ಮಹಾಒಕ್ಕೂಟ ಖಂಡಿಸುತ್ತದೆ ಎಂದು ಸಮಾನ ಮನಸ್ಕರ ವೇದಿಕೆಯ ಸಂಚಾಲಕ ಲಕ್ಷ್ಮಣ್ ಚೀರನಹಳ್ಳಿ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಕುರಿತು ಆಡಿದ ಅಪಮಾನದ ಮಾತುಗಳ ವಿರುದ್ಧ ದಲಿತ ಸಂಘಟನೆಗಳು ನಡೆಸಿದ ಪ್ರತಿಭಟನೆಯ ಬಗ್ಗೆ ಈ ರೀತಿ ಮಾತನಾಡಿರುವುದು ಸರಿಯಲ್ಲ ಎಂದು ಖಂಡನೆ ವ್ಯಕ್ತಪಡಿಸಿದರು.

ಸಾಹಿತ್ಯ ಸಮ್ಮೇಳನದಂತ ಸಾರ್ವಜನಿಕ ಕಾರ್ಯಕ್ರಮದಲ್ಲಿ ಬಹುಜನರ ಆಹಾರದ ಹಕ್ಕನ್ನು ನಿರಾಕರಿಸುವ ಅನ್ನದಾನಿ ಯಾವ ಮನುವಾದಿಗೂ ಕಡಿಮೆಯಿಲ್ಲ,ಅಧಿಕಾರಕ್ಕಾಗಿ ಆತ ಯಾರ ಮನೆ ಬಾಗಿಲಾದರೂ ಕಾಯಲಿ. ಆದರೆ ದಲಿತರ ಸ್ವಾಭಿಮಾನಿ ಹೋರಾಟವನ್ನು ಅಪಮಾನಗೊಳಿಸುವ ಹೀನ ಪ್ರಯತ್ನ ನಿಲ್ಲಿಸಬೇಕು. ತಮ್ಮಹೇಳಿಕೆಗೆ ಸಾಕ್ಷ್ಯಾ ಒದಗಿಸಬೇಕು ಇಲ್ಲವೆ ಜಿಲ್ಲೆಯ ದಲಿತ ಸಮುದಾಯವನ್ನು ಬೇಷರತ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಜನವರಿ ೦೭ರಂದು ಮಂಡ್ಯ ಬಂದ್‌ಗೆ ಸ್ವಯಂ ಪ್ರೇರಿತವಾಗಿ ಬೆಂಬಲ ನೀಡಿದ ವರ್ತಕರಿಗೆ, ನಾಗರೀಕರಿಗೆ ಹಾಗೂ ಸಂಘ ಸಂಸ್ಥೆಗಳಿಗೆ ಮಹಾ ಒಕ್ಕೂಟದ ವತಿಯಿಂದ ಅಭಿನಂದನೆ ಸಲ್ಲಿಸುತ್ತಿರುವುದಾಗಿ ಅವರು ಇದೇ ವೇಳೆ ತಿಳಿಸಿದರು.

ಕದಸಂಸದ ಸೋಮನಹಳ್ಳಿ ಅಂದಾನಿ ಮಾತನಾಡಿ ಮಳವಳ್ಳಿ ಕ್ಷೇತ್ರದ ಶಾಸಕ ನರೇಂದ್ರ ಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಓಲೈಸುವ ಭರಾಟೆಯಲ್ಲಿ ಸಿದ್ದರಾಮಯ್ಯನವರ ಸಿದ್ದಾಂತವೆ ಈ ರಾಜ್ಯದಲ್ಲಿ ಅಂತಿಮ ಎಂದಿದ್ದಾರೆ ಆದರೆ ರಾಜ್ಯ ಮಾತ್ರವಲ್ಲ ದೇಶದ ಒಕ್ಕೂಟ ವ್ಯವಸ್ಥೆಗೆ ಸಂವಿಧಾನ ಕೊಟ್ಟ ಅಂಬೇಡ್ಕರ್ ರವರ ಸಿದ್ದಾಂತ ಗೌರವಾರ್ಹವಾಗಿದೆ.ಆದರೆ ಅಧಿಕಾರದ ಹಪಾಹಪಿಯಿಂದ ಶಾಸಕರು ಇಂತಹ ಬಾಲಬಡುಕ ಹೇಳಿಕೆಗಳನ್ನು ಕೊಡಬಾರದು ಅದೇ ರೀತಿ ತಮ್ಮನ್ನು ಅಧಿಕಾರಕ್ಕೇರಿಸಿದ ಸಿದ್ದಾಂತಕ್ಕೆ ನಿಷ್ಠೆಯಿಂದ ಇರಬೇಕು ಎಂದು ಆಗ್ರಹಿಸಿದರು.

ಮಾಜಿ ಶಾಸಕ ಅನ್ನದಾನಿ ಮತ್ತು ಹಾಲಿ ಶಾಸಕ ನರೇಂದ್ರ ಸ್ವಾಮಿ ಬಹಿರಂಗವಾಗಿ ಕ್ಷಮೆ ಯಾಚಿಸದಿದ್ದರೆ ಅವರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಕರ್ನಾಟಕ ಸಮ ಸಮಾಜ ಸಂಘಟನೆಯ ನರಸಿಂಹಮೂರ್ತಿ, ಅಂಬೇಡ್ಕರ್ ವಾರಿಯರ್ಸ್ ಸಂಘಟನೆ ಅಧ್ಯಕ್ಷ ಗಂಗರಾಜು, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಂ ವಿ ಕೃಷ್ಣ, ಸಂವಿಧಾನ ಬಳಗದ ಅನಿಲ್ ಕಿರುಗಾವಲು ಇತರರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago