ಮಂಡ್ಯ

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪಿಯುಸಿ ಪರೀಕ್ಷೆ-1 ಅನ್ನು ಸುವ್ಯವಸ್ಥಿತವಾಗಿ ನಡೆಸುವ ಕುರಿತು ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸದರಿ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 14,187 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 1096 ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದರು.

27 ಪರೀಕ್ಷಾ ಕೇಂದ್ರಗಳು:
27 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಸಮಯದಲ್ಲಿ ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ಜೆರಾಕ್ಸ್ ಹಾಗೂ ಸೈಬರ್ ಕೇಂದ್ರಗಳನ್ನು ಮುಚ್ಚಲಾಗುವುದು. ಜಿಲ್ಲಾ ಖಜಾನೆಯಿಂದ ಪ್ರಶ್ನಾ ಪತ್ರಿಕೆಯನ್ನು ತ್ರಿಸದಸ್ಯ ಸಮಿತಿಯಿಂದ ದೂರದ ಪರೀಕ್ಷಾ ಕೇಂದ್ರಗಳಾದ ಕೆ.ಆರ್ ಪೇಟೆ, ನಾಗಮಂಗಲ, ಪಾಂಡವಪುರಕ್ಕೆ ಮುಂಚಿತವಾಗಿ ತಲುಪಿಸಲಾಗುತ್ತದೆ. ಪ್ರಶ್ನಾ ಪತ್ರಿಕೆಯನ್ನು ಸಾಗಿಸುವಾಗ ಬಿಗಿ ಭದ್ರತೆಯನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ರೂಟ್ ಅಧಿಕಾರಿಗಳ ನೇಮಕ:
ಪ್ರಶ್ನಾ ಪತ್ರಿಕೆ ಸಾಗುವ ಮಾರ್ಗದಲ್ಲಿ ರೂಟ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರಶ್ನಾ ಪತ್ರಿಕೆ ಸಾಗಿಸುವ ವಾಹನಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್. ಅಳವಡಿಸಿರಬೇಕು. ಜಿಲ್ಲಾಧಿಕಾರಿ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ನಡೆಯಲಿದ್ದು, 10 ಜನ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಸಿಸಿಟಿವಿ ಕಣ್ಗಾವಲು:
ದ್ವಿತೀಯ ಪಿಯುಸಿ ಪರೀಕ್ಷೆ ಸಿಸಿ ಟಿವಿ ಕಣ್ಗಾವಲಿನಲ್ಲಿ ನಡೆಯಲಿದ್ದು, ಒಟ್ಟು 580ಕ್ಕೂ ಹೆಚ್ಚು ಕ್ಯಾಮೆರಾಗಳನ್ನು ಪರೀಕ್ಷಾ ಕೊಠಡಿಗಳಿಗೆ ಈಗಾಗಲೇ ಅಳವಡಿಸಲಾಗಿದೆ. ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಸಿಸಿ ಟಿವಿ ಕಡ್ಡಾಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಪರೀಕ್ಷೆ ಸಮಯದಲ್ಲಿ ಸಿಸಿ ಟಿವಿಗಳಲ್ಲಿ ತಾಂತ್ರಿಕ ದೋಷ ಉಂಟಾಗುತ್ತದಂತೆ ಕ್ರಮ ವಹಿಸಬೇಕು. ಪರೀಕ್ಷೆ ನಡೆಯುವ ಸಮಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ
ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಹಾಗೂ ಪರೀಕ್ಷಾ ಕೊಠಡಿಯಲ್ಲಿ ಗಡಿಯಾರದ ಜತೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ, ಪೊಲೀಸ್ ಬಂದೋಬಸ್ತ್ ಹಾಗೂ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು. ಗ್ರಾಮೀಣ ಭಾಗದಿಂದ ಮಕ್ಕಳು ಬರುವುದರಿಂದ ಬಸ್‌ಗಳು ಪರೀಕ್ಷಾ ದಿನದಂದು ವಿಳಂಬವಾಗದಂತೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಹೇಳಿದರು.

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸ್ಮಾರ್ಟ್ ಡಿವೈಸ್‌ಗಳನ್ನು ಕೊಠಡಿಗೆ ತರಲು ಬೀಡಬೇಡಿ. ಪರೀಕ್ಷೆ ಮೇಲ್ವಿಚಾರಣೆಗೆ ನೇಮಿಸಿರುವ ಶಿಕ್ಷಕರು ಮಾರ್ಗಸೂಚಿಗೆ ಬದ್ಧರಾಗಿ ಕರ್ತವ್ಯ ಪಾಲಿಸಬೇಕು. ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಚಿತ್ರೀಕರಣ ಮಾಡಲು ಯಾರಿಗೂ ಅನುಮತಿ ನೀಡಬಾರದು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ. ಚಲುವಯ್ಯ, ತಹಸಿಲ್ದಾರ್‌ಗಳಾದ ವಿಶ್ವನಾಥ್, ಆದರ್ಶ್, ಅಶೋಕ್, ಚೇತನ ಯಾದವ್, ನಗರಾಭಿವೃದ್ಧಿ ಕೋಶಾಧಿಕಾರಿ ನರಸಿಂಹಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago