ಮಂಡ್ಯ

ಮಂಡ್ಯ | ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಮಂಡ್ಯ : ಜಿಲ್ಲೆಯ ಡಿಸಿಸಿ ಬ್ಯಾಂಕ್ ನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿಯವರು ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರು.

ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ತಾಲೂಕಿನ ಅಭ್ಯರ್ಥಿ ಸತೀಶ್, ಮಳವಳ್ಳಿ ಅಭ್ಯರ್ಥಿ ಶಾಸಕ ಪಿಎಂ ನರೇಂದ್ರಸ್ವಾಮಿ, ನಾಗಮಂಗಲ ಕ್ಷೇತ್ರದಿಂದ ಸಚಿನ್ ಚಲುವರಾಯಸ್ವಾಮಿ, ಕೆ.ಆರ್ ಪೇಟೆಯಿಂದ ಅಂಬರೀಶ್, ಮದ್ದೂರು ತಾಲ್ಲೂಕು ವಿಎಸ್ಎಸ್ಎನ್ ಕ್ಷೇತ್ರದಿಂದ ಪಿ.ಸಂದರ್ಸ, ಹಾಲು ಉತ್ಪಾದಕರ ಸಹಕಾರ ಸಂಘಗಳ ಮದ್ದೂರು, ಮಳವಳ್ಳಿ ಮತ್ತು ಮಂಡ್ಯ ತಾಲೂಕು ವ್ಯಾಪ್ತಿಯ ಕ್ಷೇತ್ರ ಕ್ಕೆ ತೈಲೂರು ಚಲುವರಾಜು, ಜಿಲ್ಲೆಯ ಬಳಕೆದಾರರ ಕ್ಷೇತ್ರದಿಂದ ಹಾಲಹಳ್ಳಿ ಅಶೋಕ್, ಜಿಲ್ಲೆಯ ಕೈಗಾರಿಕಾ ಕ್ಷೇತ್ರದಿಂದ ಜೋಗಿಗೌಡ, ಜಿಲ್ಲೆಯ ಟಿಎಪಿಸಿಎಂಎಸ್ ಕ್ಷೇತ್ರದಿಂದ ದಿನೇಶ್, ಹಾಗೂ ಮನಮುಲ್ ಮಿಲ್ಕ್ ಡಿವಿಜನ್ ಕ್ಷೇತ್ರದಿಂದ ಚೆಲುವರಾಜು, ಮಿಲ್ಕ್ ಸಬ್ ಡಿವಿಷನ್ ಕ್ಷೇತ್ರದಿಂದ ವಿಜಯಾನಂದ ಮೂರ್ತಿ, ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಪಾಂಡವಪುರ ಮತ್ತು ಶ್ರೀರಂಗಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಮದ್ದೂರು ಶಾಸಕ ಕದಲೂರು ಉದಯ್ ಹಾಗೂ ಮೈಶುಗರ್ ಕಾರ್ಖಾನೆಯ ಅಧ್ಯಕ್ಷ ಸಿಡಿ ಗಂಗಾಧರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಡಿಎಂಕೆಗೆ ಆರಂಭಿಕ ಮುನ್ನಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ 71ಕ್ಕೂ ಹೆಚ್ಚು…

20 mins ago

ಸೊಳ್ಳೆಗಳ ಕಾಟ; ಸಾಂಕ್ರಾಮಿಕ ರೋಗದ ಭೀತಿ

ಪ್ರಶಾಂತ್ ಎಸ್. ಮನೆಗಳ ಮುಂದೆ ನಿಲ್ಲುವ ಚರಂಡಿ ನೀರು! ವಾರ್ಡ್ ಸಂಖ್ಯೆ ೬೫ರ ನಿವಾಸಿಗಳಿಗೆ ತಪ್ಪದ ಸಂಕಷ್ಟ  ಮೈಸೂರು: ಸಣ್ಣ…

21 mins ago

ಹಳ್ಳದಲ್ಲಿ ಸಿಗುವ ಕಲುಷಿತ ನೀರೇ ಇವರಿಗೆ ಆಸರೆ!

ಮಂಜು ಕೋಟೆ ಎಚ್.ಡಿ.ಕೋಟೆ ತಾಲ್ಲೂಕಿನ ಗೂಳೂರು ಹಾಡಿ ಜನರು ಪ್ರತಿನಿತ್ಯ ಎದುರಿಸುತ್ತಿರುವ ದಯನೀಯ ಸ್ಥಿತಿಯಿದು ಎಚ್.ಡಿ.ಕೋಟೆ: ರಾಜ್ಯದಲ್ಲಿ ಯಾವುದೇ ಸರ್ಕಾರ…

31 mins ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ

ಕೋಲ್ಕತ್ತಾ: ತೀವ್ರ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.…

39 mins ago

ಸಿಎಂ ತವರಲ್ಲಿ ಬೇಸಿಗೆ ಕಾಲದಲ್ಲೂ ಕ್ಷೀರ ಕ್ರಾಂತಿ

ಕೆ.ಬಿ.ರಮೇಶನಾಯಕ ಪ್ರತಿನಿತ್ಯ ೯.೨೭ ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಸಕ್ತ ಸಾಲಿನಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ  ಮೈಸೂರು: ಹೈನುಗಾರಿಕೆಯನ್ನು ನಂಬಿರುವ…

45 mins ago

ರಾಜ್ಯದ 2 ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಶುರು

ಬೆಂಗಳೂರು: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದೆ. ಅದೇ ರೀತಿ…

53 mins ago