ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ ಹಾಗೂ ಸಂವಿಧಾನ ವಿರೋಧಿ ನೀತಿಗಳನ್ನೇ ಅನುಸರಿಸಿ, ಸಂವಿಧಾನ ವಿರೋಧಿಯಾಗಿದೆ ಎಂದು ಮಾಜಿ ಸಚಿವ ಬಿಜೆಪಿ ಮುಖಂಡ ಎನ್.ಮಹೇಶ್ ಆರೋಪಿಸಿದರು.
ನಗರದದಲ್ಲಿ ಮಂಗಳವಾರ(ಜು.16) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಏಳು ಡಿ ಕಾಯ್ದೆಯನ್ನು ರದ್ದುಗೊಳಿಸಿದೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬರಲು ಗ್ಯಾರಂಟಿ ತಂತ್ರವನ್ನು ಬಳಸಿದ್ದಾರೆ. ಈ ಗ್ಯಾರಂಟಿ ಯೋಜನೆಗೆ ಸಂಪನ್ಮೂಲ ಕ್ರೂಡೀಕರಣದ ಬಗ್ಗೆ ತಿಳಿಸಿಲ್ಲ. 40,000 ಕೊಟ್ಟಿ ಆದಾಯವನ್ನು ಸಂಗ್ರಹಿಸುತ್ತೇವೆ ಎಂದು ತಿಳಿಸಿದ್ದರು. ಆದರೆ ಎಸ್ ಸಿಸಿ, ಎಸ್ ಟಿ ಅಭಿವೃದ್ಧಿ ಯೋಜನೆಯ ಅನುದಾನದಲ್ಲಿ 11,444ಕೋಟಿ ರೂಪಾಯಿಗಳನ್ನು ಬೇರೆ ಯೋಜನೆಗಳಿಗೆ ಬಳಸಿಕೊಂಡಿದೆ ಎಂದು ಕಿಡಿಕಾರಿದರು.
ಎರಡು ವರ್ಷದಲ್ಲಿ ದಲಿತರ 25,000 ಕೋಟಿ ರೂಪಾಯಿ ಅನುದಾನವನ್ನು ಬಳಕೆ ಮಾಡಿಕೊಳ್ಳಲಾಗಿದೆ ಎಂದು ಕಿಡಿಕಾರಿದ ಅವರು, 7 ಡಿ ಕಾಯ್ದೆ ತೆಗೆಯಲು ನಾನು ಹೋರಾಟ ಮಾಡಿದ್ದೆ. ಅದನ್ನು ತೆಗೆದು 7 ಸಿ ಕಾಯ್ದೆ ಬಳಸಿ ಹಣ ಬಳಕೆ ಮಾಡಿಕೊಂಡಿದ್ದಾರೆ. ಇದನ್ನು ಸಮರ್ಥಿಸಿಕೊಳ್ಳಲು ಸಿದ್ದರಾಮಯ್ಯ ಅವರು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಕೂಡ ದುರ್ಬಳಕೆ ಮಾಡಿಕೊಳ್ಳಲಾಗಿದೆ .ಹಣವನ್ನು ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಕಿಡಿ ಕಾರಿದರು.
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…