ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತದ ಮೇಲೆ ವಿಶ್ವಾಸ ಕಳೆದುಕೊಂಡಿದೆ. ಹಾಗಾಗಿ ಅವರು ಯಾರನ್ನ ಮುಖ್ಯಮಂತ್ರಿ ಮಾಡುತ್ತಾರೋ, ಎಷ್ಟು ಜನ ಉಪಮುಖ್ಯಮಂತ್ರಿ ಮಾಡುತ್ತಾರೋ ನೋಡೋಣ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವ್ಯಂಗವಾಡಿದರು.
ನಗರದಲ್ಲಿ ಇಂದು(ಜೂ.28) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಹೆಚ್ಚಳ ಮಾಡಿದೆ. ರಾಜ್ಯದ ಅಭಿವೃದ್ಧಿ ಮರಿಚಿಕೆಯಾಗಿದೆ. ಜನರು ಗ್ಯಾರಂಟಿಗಳನ್ನು ಕೇಳಿಲ್ಲ. ಹಾಗಾಗಿ ಈ ಸರ್ಕಾರ ಹೆಚ್ಚು ದಿನ ಉಳಿಯೋದು ಕಷ್ಟ ಎಂದರು.
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಈಗ ರಾಜ್ಯ ಹಾಗೂ ದೇಶದ ಅಭಿವೃದ್ಧಿ ಪರ ಕೆಲಸ ಮಾಡಬೇಕಿದೆ. ವಾರದಲ್ಲಿ ಒಂದು ದಿನ ಮಂಡ್ಯ ಜಿಲ್ಲೆಯ ಪ್ರವಾಸ ಕೈಗೊಂಡು, ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವರು ಎಂದು ಹೇಳಿದರು.
ಜಿಲ್ಲೆಯ ವಿಸಿ ನಾಲೆಗಳಿಗೆ ಕೆಆರ್ಎಸ್ನಲ್ಲಿ 80 ಅಡಿ ನೀರಿದ್ದಾಗಲೂ ನೀರು ಹರಿಸಿರುವ ಉದಾಹರಣೆ ಇದೆ. ಆದರೆ, ಇದೀಗ ನೀರಿದ್ದರೂ ನಾಲೆಗಳಿಗೆ ನೀರು ಹರಿಸಿಲ್ಲ. ಆದರೆ, ನಾವು ರೈತರ ಪರ ಇರುತ್ತೇವೆ ಎಂದರು.
ಈ ವೇಳೆ ಮುಖಂಡರಾದ ಡಿ.ಸಿ ತಮ್ಮಣ್ಣ, ಡಿ.ರಮೇಶ್, ಕಾಳೇಗೌಡ, ಬಿ.ಆರ್ ಸುರೇಶ್ ಹಾಗೂ ಸಾದೊಳಲು ಸ್ವಾಮಿ ಹಾಜರಿದ್ದರು.
ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…
ಹೇಮಂತ್ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…
ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…
ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…