ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತದ ಮೇಲೆ ವಿಶ್ವಾಸ ಕಳೆದುಕೊಂಡಿದೆ. ಹಾಗಾಗಿ ಅವರು ಯಾರನ್ನ ಮುಖ್ಯಮಂತ್ರಿ ಮಾಡುತ್ತಾರೋ, ಎಷ್ಟು ಜನ ಉಪಮುಖ್ಯಮಂತ್ರಿ ಮಾಡುತ್ತಾರೋ ನೋಡೋಣ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವ್ಯಂಗವಾಡಿದರು.
ನಗರದಲ್ಲಿ ಇಂದು(ಜೂ.28) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಹೆಚ್ಚಳ ಮಾಡಿದೆ. ರಾಜ್ಯದ ಅಭಿವೃದ್ಧಿ ಮರಿಚಿಕೆಯಾಗಿದೆ. ಜನರು ಗ್ಯಾರಂಟಿಗಳನ್ನು ಕೇಳಿಲ್ಲ. ಹಾಗಾಗಿ ಈ ಸರ್ಕಾರ ಹೆಚ್ಚು ದಿನ ಉಳಿಯೋದು ಕಷ್ಟ ಎಂದರು.
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಈಗ ರಾಜ್ಯ ಹಾಗೂ ದೇಶದ ಅಭಿವೃದ್ಧಿ ಪರ ಕೆಲಸ ಮಾಡಬೇಕಿದೆ. ವಾರದಲ್ಲಿ ಒಂದು ದಿನ ಮಂಡ್ಯ ಜಿಲ್ಲೆಯ ಪ್ರವಾಸ ಕೈಗೊಂಡು, ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವರು ಎಂದು ಹೇಳಿದರು.
ಜಿಲ್ಲೆಯ ವಿಸಿ ನಾಲೆಗಳಿಗೆ ಕೆಆರ್ಎಸ್ನಲ್ಲಿ 80 ಅಡಿ ನೀರಿದ್ದಾಗಲೂ ನೀರು ಹರಿಸಿರುವ ಉದಾಹರಣೆ ಇದೆ. ಆದರೆ, ಇದೀಗ ನೀರಿದ್ದರೂ ನಾಲೆಗಳಿಗೆ ನೀರು ಹರಿಸಿಲ್ಲ. ಆದರೆ, ನಾವು ರೈತರ ಪರ ಇರುತ್ತೇವೆ ಎಂದರು.
ಈ ವೇಳೆ ಮುಖಂಡರಾದ ಡಿ.ಸಿ ತಮ್ಮಣ್ಣ, ಡಿ.ರಮೇಶ್, ಕಾಳೇಗೌಡ, ಬಿ.ಆರ್ ಸುರೇಶ್ ಹಾಗೂ ಸಾದೊಳಲು ಸ್ವಾಮಿ ಹಾಜರಿದ್ದರು.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…