ಮಂಡ್ಯ : ರಾಜ್ಯ ಸರ್ಕಾರದ ಗಮನ ಐದು ಗ್ಯಾರಂಟಿ, ಲೋಕಸಭಾ ಚುನಾವಣೆ ಮೇಲೆ ಮಾತ್ರ ಇದೆ. ಕಾವೇರಿ ವಿಚಾರದ ಬಗ್ಗೆ ಸರ್ಕಾರಕ್ಕೆ ಗಮನ ಇಲ್ಲ. ಇವರು ಈವರೆಗೆ ಏನು ಮಾತನಾಡಿಲ್ಲ, ಬರೀ ಗ್ಯಾರಂಟಿ ಜಾತ್ರೆಯನ್ನು ಮಾಡುತ್ತಿದ್ದಾರೆ ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದ ಬಗ್ಗೆ ಗಮನ ಇದ್ದಿದ್ದರೆ ಪ್ರಾಧಿಕಾರದ ಮುಂದೆ ವಸ್ತುಸ್ಥಿತಿಯನ್ನು ಸರಿಯಾಗಿ ವಿವರಿಸುತ್ತಿದ್ದರು. ಕೊಳ್ಳೆ ಹೊಡೆದ ಮೇಲೆ ಬಾಗಿಲು ಹಾಕಿದ ಹಾಗೆ ಮಾಡಿದ್ದಾರೆ. ಎಲ್ಲರೂ ವಿರೋಧ ಮಾಡಿದ ಬಳಿಕ ಸರ್ವಪಕ್ಷ ಸಭೆ ಕರೆದರು. ಸಭೆಯಲ್ಲಿ ನೀರು ಬಿಡಲ್ಲ ಎಂದು ಹೇಳಿ ಈಗ ನೀರು ಬಿಡುತ್ತಿದ್ದಾರೆ. ಮೋದಿ ಅವರನ್ನು ವಿರೋಧ ಮಾಡಲು ಕರ್ನಾಟಕದ ಜನರನ್ನು ರಾಜ್ಯ ಸರ್ಕಾರ ಬಲಿ ಕೊಡುತ್ತಿದೆ. ಜನರ ಬಗ್ಗೆ ಇವರಿಗೆ ಸ್ವಲ್ಪವೂ ಕಾಳಜಿ ಇಲ್ಲ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಅವರು ಸಿಎಂ ಆದ ಬಳಿಕ ಕೇಂದ್ರಕ್ಕೆ ಹೋಗುವ ಯೋಚನೆ ಮಾಡುತ್ತಿರಬಹುದು. ಅದಕ್ಕೆ ಐದು ಗ್ಯಾರಂಟಿ ಗ್ಯಾರಂಟಿ ಎಂದು ನಿಂತಿದ್ದಾರೆ. ವರ್ಗಾವಣೆ, ಲಂಚ ದಂಧೆ ಬಿಟ್ಟು ಇವರಿಗೆ ಏನು ಗೊತ್ತಿಲ್ಲ. ಬಿಜೆಪಿ ಸರ್ಕಾರವನ್ನು 40% ಕಮಿಷನ್ ಸರ್ಕಾರ ಎಂದು ಹೇಳುತ್ತಿದ್ದರು. ಇವರು 80% ಕಮಿಷನ್ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆಯುತ್ತಲೇ ಇದೆ ಎಂದು ಆರೋಪಿಸಿದರು.
ಕಾವೇರಿ ವಿಚಾರದಲ್ಲಿ ಸಂಕಷ್ಟ ಸೂತ್ರವನ್ನು ಸಿದ್ದಪಡಿಸುವ ಬದಲು, ಗ್ಯಾರಂಟಿ ಅಂತಾ ಕುಳಿತಿದ್ದಾರೆ. ಜಲಾಶಯದ ವಸ್ತುಸ್ಥಿತಿ ಬಗ್ಗೆ ಗಮನ ಹರಿಸಬೇಕಾಗಿತ್ತು. ಇದನ್ನು ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡಬೇಕಿತ್ತು. ಜೆಡಿಎಸ್ ನಾಯಕರು ಅಮಿತ್ ಶಾ, ಜೆಪಿ ನಡ್ಡಾ ಜೊತೆಗೆ ಕಾವೇರಿ ವಿಚಾರ ಮಾತಾಡಿದ್ದಾರೆ. ಇವರು ಈವರೆಗೆ ಏನು ಮಾತಾಡಿಲ್ಲ, ಬರಿ ಗ್ಯಾರಂಟಿ ಜಾತ್ರೆಯನ್ನು ಮಾಡುತ್ತಿದ್ದಾರೆ. ದೇವೇಗೌಡರು ಪ್ರಧಾನಿ ಅವರಿಗೆ ಮನವಿ ಮಾಡಿದ್ದಾರೆ. ಇವರು ಮಾತ್ರ ರಾಜಕೀಯ ಮಾಡುತ್ತಾ ಕೂತಿದ್ದಾರೆ ಎಂದು ಹೇಳಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…