ಮಂಡ್ಯ

ರಾಜಕೀಯ ಸ್ವಾರ್ಥಕ್ಕಾಗಿ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್: ಎಚ್‌.ಡಿ ಕುಮಾರಸ್ವಾಮಿ

ಮಂಡ್ಯ: ರಾಜ್ಯ ಕಾಂಗ್ರೆಸ್‌ ಸರ್ಕಾರ ಕಾವೇರಿ ನೀರನ್ನು ತನ್ನ ರಾಜಕೀಯ ರಾಜಕೀಯ ಸ್ವಾರ್ಥಕ್ಕಾಗಿ ನೆರೆಯ ತಮಿಳುನಾಡು ರಾಜ್ಯಕ್ಕೆ ಮಾರಾಟ ಮಾರಿಕೊಂಡಿದೆ. ಇಲ್ಲಿ ಮೇಕೆದಾಟು ಯೋಜನೆ ಕೈಗೊಳ್ಳುತ್ತೇವೆ ಎನ್ನುತ್ತಾರೆ, ಕಾವೇರಿಯನ್ನು ಕಾಪಾಡುತ್ತೇವೆ ಎಂದು ಹೇಳುತ್ತಾರೆ. ಆದರೆ, ತಮಿಳುನಾಡಿನಲ್ಲಿ ಮೇಕೆದಾಟು ಯೋಜನೆಯ ವಿರೋಧಿ ಆಗಿರುವ ಡಿಎಂಕೆ ಪಕ್ಷದ ಜೊತೆ ಮೈತ್ರಿ ಮಾಡಿ ಕೊಂಡು ರಾಜಕೀಯ ಸ್ವಾರ್ಥಕ್ಕಾಗಿ ಸ್ಟಾಲಿನ್ ಅವರನ್ನು ಓಲೈಕೆ ಮಾಡುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ಜಿಲ್ಲೆಯ ಮಂಡ್ಯ ವಿಶ್ವವಿದ್ಯಾಲಯದ ಎದುರಿನಿಂದ ರಾಜ್ಯ ಯುವ ಜಾ.ದಳ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕ ಜಿ.ಬಿ.ಶಿವಕುಮಾರ್, ಜಾದಳ ಮುಖಂಡರಾದ ಬಿ.ಆರ್. ರಾಮಚಂದ್ರು, ಅಮರಾವತಿ ಚಂದ್ರಶೇಖರ್, ಸುರೇಶ್, ಬಿಜೆಪಿ ಮುಖಂಡರಾದ ಅಶೋಕ್ ಜಯರಾಮ್, ಚಂದಗಾಲು ಶಿವಣ್ಣ, ಸಿ.ಟಿ.ಮಂಜುನಾಥ್ ಸೇರಿದಂತೆ ಹಲವು ಮುಖಂಡರ ನೇತೃತ್ವದಲ್ಲಿ ಬೃಹತ್ ರೋಡ್ ಶೋ ನಡೆಸಿದರು.

ಕೆಆರ್ ಎಸ್ ನಲ್ಲಿ 92 ಅಡಿ ನೀರಿದ್ದರೂ ಭತ್ತ ನಾಟಿ ಮಾಡಬೇಡಿ ಎಂದು ಸರ್ಕಾರ ಫರ್ಮಾನು ಹೊರಡಿಸಿತು. ಇಂದು 86 ಅಡಿ ನೀರಿದ್ದರೂ ನಾಲೆಗಳಿಗೆ ನೀರು ಹರಿಸದೆ ಮಂಡ್ಯ ಜಿಲ್ಲಾ ರೈತರು ಪರಿತಪಿಸುವಂತೆ ಮಾಡಿದೆ. ಮಂಡ್ಯ ನೆಲಕ್ಕೆ ಪ್ರವೇಶ ಮಾಡುವಾಗ ‘ಸಕ್ಕರೆ ನಾಡಿಗೆ ಸ್ವಾಗತ’ ಎಂದು ನಾಮಫಲಕ ಇರುತ್ತದೆ. ಆದರೆ, ಈ ಸರ್ಕಾರ ಮಂಡ್ಯವನ್ನು ಬರಡು ಜಿಲ್ಲೆ ಮಾಡಿದೆ. ಈ ಸರ್ಕಾರ ಬಂದ ಮೇಲೆ ಎಲ್ಲ ಕಡೆ ಕಬ್ಬು ಒಣಗಿದೆ. ಇನ್ನು ಅದಕ್ಕೆ ಬೆಂಕಿ ಹಾಕೋದು ಮಾತ್ರ ಬಾಕಿ ಇದೆ. ಕೋಟ್ಯಂತರ ರೂ. ನಾಶವಾಗಿದೆ. ಆದರೆ, ಕಾಂಗ್ರೆಸ್ 2 ಸಾವಿರ ಪರಿಹಾರ ಕೊಟ್ಟರೆ ಉಪಯೋಗ ಏನು ಎಂದು ಪ್ರಶ್ನಿಸಿದರು.

ಇನ್ನು ದೇವೇಗೌಡರು ಈ ಜಿಲ್ಲೆಗೆ ಏನು ಮಾಡಿದ್ದಾರೆ ಎಂದು ಕೆಲವರು ಕೇಳಿದ್ದಾರೆ. ಅವರು ಕೊಟ್ಟಿರುವ ಕೊಡುಗೆ ಏನು ಎನ್ನುವುದು ಜನರಿಗೆ ಗೊತ್ತಿದೆ. ಗೊತ್ತಿಲ್ಲ ಎಂದರೆ ತಿಳಿದುಕೊಳ್ಳಿ, ಮೇಕೆದಾಟು, ಕಾವೇರಿ ನೀರಿನ ವಿಷಯದಲ್ಲಿ ರಾಜ್ಯಸಭೆಯಲ್ಲಿ ದೇವೇಗೌಡರು ಪರಿಪರಿಯಾಗಿ ಬೇಡಿಕೊಂಡರೂ ಸದನದಲ್ಲಿಯೇ ಕೂತಿದ್ದ ಮಲ್ಲಿಕಾರ್ಜುನಖರ್ಗೆ, ಇತರೆ ಕಾಂಗ್ರೆಸ್ ಸದಸ್ಯರು ಮೌನವಾಗಿ ಕೂತಿದ್ದರು. ಅವರು ಒಂದು ಮಾತನ್ನೂ ಆಡಲಿಲ್ಲ ಯಾಕೆ? ಎಂದು ಖಾರವಾಗಿ ಪ್ರಶ್ನಿಸಿದರು.

ಮೊದಲು ಸ್ಟಾಲಿನ್ ಮನವೊಲಿಸಿ, ಅಥವಾ ಡಿಎಂಕೆ ಬೆದರಿಕೆಗೆ ಸೊಪ್ಪು ಹಾಕಲ್ಲ, ನಮಗೆ ಮೇಕೆದಾಟು ಯೋಜನೆ ಬೇಕು ಎಂದು ಹೇಳಿ, ಮೇಕೆದಾಟು ಯೋಜನೆಗೆ ನಾವು ಐದು ನಿಮಿಷಗಳಲ್ಲಿ ಅನುಮತಿ ಕೊಡಿಸುತ್ತೇವೆ. ನಿಮ್ಮ ಮಿತ್ರಪಕ್ಷ ಡಿಎಂಕೆ ಸರ್ಕಾರದ ಮನವೊಲಿಸಿ ತಮಿಳುನಾಡು ಸಲ್ಲಿಸಿರುವ ತಕರಾರು ಅರ್ಜಿಗಳನ್ನು ಹಿಂಪಡೆ ಯುವಂತೆ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಚಾಟಿ ಬೀಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

10 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

10 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

13 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago