ಮಂಡ್ಯ

ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರ ಸಬಲೀಕರಣ: ಎನ್ ಚಲುವರಾಯಸ್ವಾಮಿ

ಮಂಡ್ಯ: ಯಾವುದೇ ಜಾತಿ, ಧರ್ಮ, ಮೇಲು, ಕೀಳು ಎಂಬ ತಾರತಮ್ಯವಿಲ್ಲದೆ ಜನಸಮಾನ್ಯರಿಗೆ ಸಮಾನವಾಗಿ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ನೀಡಲಾಗುತ್ತಿದೆ. ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರನ್ನು ಸಬಲೀಕರಣಗೊಳಿಸುವ ಸರ್ಕಾರ ಸಿದ್ದರಾಮಯ್ಯನವರ ಸರ್ಕಾರವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ಇಂದು ನಾಗಮಂಗಲ ತಾಲೂಕಿನ ಸವಲತ್ತು ವಿತರಣಾ ಸಮಾವೇಶ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 35000 ಕೋಟಿ 5 ಗ್ಯಾರಂಟಿ ಯೋಜನೆಗಳ ಮೂಲಕ ಒಂದಲ್ಲ ಒಂದು ರೀತಿ ಎಲ್ಲರಿಗೂ ತಲುಪಿಸಲಾಗಿದೆ. ಪ್ರತಿ ಕುಟುಂಬಕ್ಕೆ ಪ್ರತಿ ಮಾಹೆ ಅಂದಾಜು 5000 ರೂ ಸೌಲಭ್ಯ ದೊರಕಿಸಲಾಗುತ್ತಿದೆ. ಮುಂದಿನ ಆರ್ಥಿಕ ಸಾಲಿನಲ್ಲಿ ಗ್ಯಾರಂಟಿ ಯೋಜನೆಗಳಿಗೆ 56000 ಕೋಟಿ ರೂ ಹಣವನ್ನು ಆಯವ್ಯಯದಲ್ಲಿ ಮೀಸಲಿಡಲಾಗಿದೆ‌ ಎಂದರು‌.

ನಾಗಮಂಗಲ ತಾಲೂಕಿನಲ್ಲಿ 35 ವರ್ಷಗಳಿಂದಲೂ ಇದ್ದ ಸಮಸ್ಯೆಯನ್ನು ಪರಿಹರಿಸಿ ಹಕ್ಕಿಪಿಕ್ಕಿ ಜನಾಂಗದವರಿಗೆ ಇಂದು ಹಕ್ಕು ಪತ್ರವನ್ನು ನೀಡಿಲಾಯಿತು ಎಂದರು

ಕೃಷಿ ಇಲಾಖೆಯಿಂದ ರಾಜ್ಯದಲ್ಲಿ ಸುಮಾರು 15 ರಿಂದ 20 ಲಕ್ಷ ರೈತರಿಗೆ ಬೆಳೆ ವಿಮೆ ಸೇರಿದಂತೆ ವಿವಿಧ ಯೋಜನೆಯಡಿ 2500 ಕೋಟಿ ರೂ ಹಣವನ್ನು ನೀಡಲಾಗಿದೆ ಎಂದರು.

ಕೃಷಿ ಇಲಾಖೆಯಲ್ಲಿ ಈ ಮೊದಲು ಕಳಪೆ ಬೀಜ, ಗೊಬ್ಬರ ಸರಿಯಾದ ರೀತಿ ಸೌಲಭ್ಯಗಳು ದೊರಕುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿತ್ತು. ಕೃಷಿ ಸಚಿವನಾಗಿ ಇವುಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಯಾವುದೇ ದೂರುಗಳು ಬಾರದಂತೆ ರೈತರಿಗೆ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಅಪಾರವಾದ ಕೊಡುಗೆಯನ್ನು ಜಯಚಾಮರಾಜೇಂದ್ರ ಒಡೆಯರ್ ರವರು ನೀಡಿದ್ದು, ಅವರನ್ನು ಬಿಟ್ಟರೆ 70 ವರ್ಷಗಳ ನಂತರ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಜಿಲ್ಲೆಯ ಪ್ರಗತಿಗೆ ಶ್ರಮಿಸಿದ್ದಾರೆ ಎಂದರು.

ಅಧಿಕಾರಕ್ಕೆ ಬಂದ ಹತ್ತು ತಿಂಗಳಲ್ಲಿಯೇ ಮೆಡಿಕಲ್ ಕಾಲೇಜು, ಕೆ ಎಸ್ ಆರ್ ಟಿ ಸಿ ಡಿವಿಸನ್, ಆರ್ ಟಿ ಓ ಆಫೀಸ್, ಪೊಲೀಸ್ ಸ್ಟೇಷನ್, ಮಿನಿ ವಿಧಾನಸೌಧವನ್ನು ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ. ಜಿಲ್ಲೆಯಲ್ಲಿ ಹೊಸ ಸಕ್ಕರೆ ಫ್ಯಾಕ್ಟರಿಯನ್ನು ನಿರ್ಮಾಣ ಮಾಡುವುದಾಗಿ ಘೋಷಿಸಲಾಗಿದೆ. ಜಿಲ್ಲೆಯ ಮುಖಂಡರು, ಶಾಸಕರು, ಅಭಿವೃದ್ಧಿಯ ಕಾರ್ಯಗಳು ಶೀಘ್ರವಾಗಿ ಪೂರ್ಣಗೊಳಿಸಲು ಕೈಜೋಡಿಸಬೇಕು ಎಂದರು.

ಜಿಲ್ಲಾ ಸಚಿವನಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕುಂದು ಕೊರತೆಗಳಿಗೆ ಸ್ಪಂದಿಸಿ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ಬೆಳೆ ವಿಮೆ ಈ ವರ್ಷ 25 ಲಕ್ಷ ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಸಿದ್ದು ಮಾರ್ಚಿ ಅಂತ್ಯದೊಳಗೆ ಒಟ್ಟಾರೆ 13 ಲಕ್ಷ ರೈತರಿಗೆ ರೂ.1400ಕೋಟಿಗಳ ವಿಮೆ ಹಣ ಪಾವತಿಯಾಗಲಿದೆ ಈಗಾಗಲೇ 8 ಲಕ್ಷ ರೈತರಿಗೆ ರೂ.600 ಕೋಟಿಗಳ ವಿಮೆ ಹಣ ಪಾವತಿಯಾಗಿದೆ. ಉಳಿದ 800 ಕೋಟಿ ರೂ ಅನುದಾನವು ಮಾರ್ಚ್ ತಿಂಗಳ ಕೊನೆಯಲ್ಲಿ ಬಿಡುಗಡೆಯಾಗುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಏಳುವರೆ ಸಾವಿರ ಕೃಷಿ ಹೋಂಡಾ ಗಳನ್ನು ನಿರ್ಮಾಣ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ 20 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡಗಳನ್ನು ನಿರ್ಮಿಸಲಾಗುವುದು ಎಂದರು.

andolanait

Recent Posts

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು : ಸಂಸದ ಯದುವೀರ್‌

ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು.…

37 mins ago

ಬಾಲವಿಕಾಸ ಅಕಾಡೆಮಿಯ ಬಾಲಗೌರವ ಪ್ರಶಸ್ತಿ : ಮೈಸೂರಿನ ತಬಲಾ ಬಾಲ ಪ್ರತಿಭೆ ಪಂಚಮಿ ಬಿದನೂರು ಸೇರಿದಂತೆ ಅನೇಕರಿಗೆ ಪ್ರಶಸ್ತಿ

ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…

39 mins ago

ಅಕ್ರಮ ಗಾಂಜಾ ಮಾರಾಟ : ಮಹಿಳೆ ಪೊಲೀಸ್ ವಶಕ್ಕೆ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…

2 hours ago

ಮತಗಳ್ಳತನದ ಹೋರಾಟದಲ್ಲಿ ರಾಜಕೀಯ ಉದ್ದೇಶವಿಲ್ಲ : ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…

3 hours ago

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

5 hours ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

5 hours ago