ಮಂಡ್ಯ : ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯನ್ನು ವಿಸ್ತರಣೆ ಮಾಡಿ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಾಗೆಯೇ ಗ್ರಾಮ ಪಂಚಾಯಿತಿಗಳ ಅಧೀನದಲ್ಲಿರುವ ಹೊಸ ಬಡಾವಣೆಗಳನ್ನು ಸೇರಿಸಿಕೊಂಡು ಮಂಡ್ಯ ನಗರಸಭೆಯನ್ನು ಮಹಾನಗರ ಪಾಲಿಕೆ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ಪಿ.ರವಿಕುಮಾರ್ಗೌಡ ಗಣಿಗ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಸಭೆ ವ್ಯಾಪ್ತಿ ವಿಸ್ತರಣೆ ಬಗ್ಗೆ ಹಿಂದಿನಿಂದಲೂ ಚರ್ಚೆಗಳು ನಡೆಯುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಜಿಲ್ಲಾ ಯೋಜನಾ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸಿ ಚರ್ಚೆಸಿರುವುದು ಗಮನಕ್ಕೆ ಬಂದಿದೆ. ಈ ವಿಚಾರವಾಗಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಽಕಾರಿಗಳೊಂದಿಗೆ ಸಮಾಲೋಚಿಸಲಾಗುವುದು ಎಂದು ಹೇಳಿದರು.
ಮಂಡ್ಯ ನಗರಸಭೆಯ ವ್ಯಾಪ್ತಿ ದೊಡ್ಡದಾದರೆ ಅಥವಾ ನಗರಸಭೆಯು ಮಹಾನಗರಪಾಲಿಕೆಯಾಗಿ ಮೇಲ್ದರ್ಜೆಗೇರಿದರೆ ಅಭಿವೃದ್ಧಿ ದೃಷ್ಟಿಯಿಂದಲೂ ಅನುಕೂಲವಾಗಲಿದೆ. ಈ ವಿಚಾರವಾಗಿ ಈಗಾಗಲೇ ಹೊಸ ಬಡಾವಣೆಗಳ ನಿವಾಸಿಗಳಿಂದ ಮನವಿಗಳೂ ಬಂದಿವೆ. ಹೀಗಾಗಿ ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ಸೂಕ್ತ ತೀರ್ಮಾನದೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…