ಮಂಡ್ಯ

ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಸಂಚು: ಸಿ.ಟಿ ರವಿ

ಮಂಡ್ಯ: ದೇಶದಲ್ಲಿ ಅರಾಜಕತೆ ಉಂಟು ಮಾಡುವ ರೀತಿಯಲ್ಲಿ ಹೇಳಿಕೆ ನೀಡಿರುವ ಕೇಂದ್ರ ಮಾಜಿ ಸಚಿವ ಖುರ್ಷಿದ್ ಆಲಮ್ ಖಾನ್ ಹಾಗೂ ಕಾಂಗ್ರೆಸ್ ಮುಖಂಡ ಸಜ್ಜನ್ ಸಿಂಗ್ ವರ್ಮ ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ  ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹ ಪಡಿಸಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಾಂಗ್ಲಾದ ಪರಿಸ್ಥಿತಿ ಭಾರತದಲ್ಲಿಯೂ ಆಗಲಿದೆ ಎಂದು ಖುರ್ಷಿದ್ ಆಲಂ ಖಾನ್ ಮತ್ತು ಸಜ್ಜನ್ ಸಿಂಗ್ ವರ್ಮ ಅವರು ನೀಡಿರುವ ಹೇಳಿಕೆ ಅರಾಜಕತೆ ಸೃಷ್ಟಿಸಲು ಹೂಡಿರುವ ಸಂಚಾಗಿದೆ. ಹೀಗಾಗಿ ಇವರ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಪಡಿಸಿದರು.

ನೆರೆ ದೇಶವಾದ ಬಾಂಗ್ಲಾದಲ್ಲಿ ವಿದ್ಯಾರ್ಥಿಗಳು ಮೀಸಲಾತಿ ಬಗ್ಗೆ ಚಳುವಳಿ ನಡೆಸಿದ್ದಾರೆ. ಹೆಚ್ಚುವರಿ ಮೀಸಲಾತಿಯನ್ನು ನ್ಯಾಯಾಲಯ ರದ್ದು ಮಾಡಿದ್ದರೂ ಚಳುವಳಿ ಮುಂದುವರೆದಿದೆ ಎಂದರು. ಬಾಂಗ್ಲಾದ ಪ್ರಧಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಸಹ ಚಳುವಳಿ ನಿಲ್ಲದೆ ಹೊಸ ರೂಪ ಪಡೆದುಕೊಂಡಿದ್ದು ಆ ದೇಶದ ಅಲ್ಪಸಂಖ್ಯಾತರನ್ನೇ ಗುರಿ ಮಾಡಲಾಗಿದೆ. ಅಲ್ಪಸಂಖ್ಯಾತ ದೇವಾಲಯಗಳು ದ್ವಂಸಗೊಳಿಸಲಾಗುತ್ತಿದೆ ಎಂದು ತಿಳಿಸಿದರು .

ಬಾಂಗ್ಲಾದಲ್ಲಿ ನಡೆದಿರುವ ಘಟನೆಯ ಬಗ್ಗೆ ಕೇಂದ್ರ ಮಾಜಿ ಸಚಿವ ಖುರ್ಷಿದ್ ಆಲಂ ಖಾನ್ ಮತ್ತು ಕಾಂಗ್ರೆಸ್ ಮುಖಂಡ ಸಜ್ಜನ್ ಸಿಂಗ್ ವರ್ಮ ಅವರು ಬಾಂಗ್ಲಾ ರೀತಿಯಲ್ಲಿಯೇ ಭಾರತದಲ್ಲಿ ಕ್ಷೋಭೆ, ಸಂಘರ್ಷ ನಡೆಯುವ ಕಾಲ ದೂರವಿಲ್ಲ ಎಂದು ಹೇಳಿಕೆ ನೀಡಿದ್ದು ಇದು ಭಾರತದಲ್ಲಿ ಅರಾಜಕತೆ ಉಂಟುಮಾಡುವ ಅನುಮಾನಕ್ಕೆ ಕಾರಣವಾಗಿದೆ. ಆದಕಾರಣ ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಬಾಂಗ್ಲಾದ ಪ್ರಧಾನಿಗೆ ಆದ ಗತಿಯೇ ಭಾರತದ ಪ್ರಧಾನಿಗೆ ಆಗುತ್ತದೆ ಎಂದು ನೀಡಿರುವ ಹೇಳಿಕೆ ಕಾಕತಾಳೀಯವಲ್ಲ. ದೇಶದಲ್ಲಿ ಸಂಚು ರೂಪಿಸುತ್ತಿರುವ ಬಗ್ಗೆ ಅನುಮಾನವಿದೆ. ಸರ್ಕಾರವನ್ನು ಬೀಳಿಸುವ ಸಂಚನ್ನು ನಡೆಸಲಾಗುತ್ತಿದೆ ಎನ್ನುವ ಅನುಮಾನ ಕಾಡುತ್ತಿದೆ .ಆದ್ದರಿಂದ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಸಿಎಎ ಮತ್ತು ಕೃಷಿ ಕಾಯ್ದೆ ರೈತರು ಮತ್ತು ಇತರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತರಲಾಗಿದೆ. ಆದರೆ ಈ ಕಾಯ್ದೆಯನ್ನು ವಿರೋಧಿಸಿ ಕೆಂಪುಕೋಟೆಯಲ್ಲಿ ಬಾವುಟ ಹಾರಿಸಿದ್ದಾರೆ .ಆಗಲು ಸಂಚು ನಡೆದಿದ್ದು ಇದು ಹೊಸದೇನಲ್ಲ ಎಂದು ತಿಳಿಸಿದರು .

ಖುರ್ಷಿದ್ ಆಲಂ ಖಾನ್ , ಸಜ್ಜನ್ ಸಿಂಗ್ ವರ್ಮ ಅವರ ವಿರುದ್ಧ ಕೂಡಲೇ ಮೊಕದ್ದಮೆ ದಾಖಲಿಸಿ ತನಿಖೆ ನಡೆಸಬೇಕು. ರಾಹುಲ್ ಗಾಂಧಿ ಅವರು ಈ ಬಗ್ಗೆ ಸ್ಪಷ್ಟನೆ ನೀಡಬೇಕು .ಅಲ್ಲದೆ ಕೇಂದ್ರ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ನಾರಾಯಣಗೌಡ ,ಶಾಸಕ ರಾಜಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಡಾಕ್ಟರ್ ಇಂದ್ರೇಶ್, ಬಿಜೆಪಿ ವಕ್ತಾರಾ ಸಿಟಿ ಮಂಜು, ಪ್ರಧಾನ ಕಾರ್ಯದರ್ಶಿ ವಿವೇಕ್, ಮಾಧ್ಯಮ ಪ್ರಮುಖ್ ನಾಗನಂದ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago