ಮಂಡ್ಯ: ವಿಸಿ ನಾಲೆಗೆ ಕಡೆಗೂ ತಡೆಗೋಡೆ ನಿರ್ಮಾಣ ಭಾಗ್ಯ ಒದಗಿಬಂದಿದ್ದು, ಈಗ ವಾಹನ ಸವಾರರು ನಿರಾಳರಾಗಿದ್ದಾರೆ.
ವಿಸಿ ನಾಲೆಯಲ್ಲಿ ಕಳೆದ ಆರು ವರ್ಷಗಳಿಂದ ನಡೆದ ಸಾಲು ಸಾಲು ದುರಂತಗಳಿಂದ ಜನರು ಈ ನಾಲೆಗೆ ಸಾವಿನ ನಾಲೆ ಎಂಬ ಪಟ್ಟ ಕಟ್ಟಿದ್ದರು.
ವಿಸಿ ನಾಲೆಯ ದಡದ ರಸ್ತೆ ಅತೀ ಕಿರಿದಾಗಿರುವುದರಿಂದ ಇಲ್ಲಿ ವಾಹನ ಸವಾರರು ಸ್ವಲ್ಪ ಯಾಮಾರಿದರೂ ವಾಹನ ಸಮೇತ ನಾಲೆಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದರು.
ನಾಲೆಗೆ ತಡೆಗೋಡೆ ಇಲ್ಲದಿರುವುದೇ ಈ ಅವಘಡಕ್ಕೆ ಪ್ರಮುಖ ಕಾರಣವಾಗಿತ್ತು. ಈ ಎಲ್ಲಾ ಅವಘಡಗಳು ಸಂಭವಿಸಿದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ಹುಲಿಕೆರೆಯಿಂದ ಜೈಪುರದವರೆಗೆ ಎರಡೂವರೆ ಕಿ.ಮೀ ತಡೆಗೋಡೆ ನಿರ್ಮಾಣ ಮಾಡಿದೆ.
ಇದಲ್ಲದೇ ಡೇಂಜರ್ ಝೋನ್ಗಳಲ್ಲೂ ತಡೆಗೋಡೆ ಹಾಕಲು ಜಿಲ್ಲಾಡಳಿತ ಮುಂದಾಗಿದ್ದು, ಇನ್ನು ಮುಂದೆ ಯಾವುದೇ ಆತಂಕವಿಲ್ಲದೇ ವಾಹನ ಸವಾರರು ವಿಸಿ ನಾಲೆಯ ರಸ್ತೆಯಲ್ಲಿ ಸಂಚರಿಸಬಹುದಾಗಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…
ಮೈಸೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…
ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…
ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಪ್ರಕರಣ ರದ್ದು…