ಮಂಡ್ಯ: ವಿಸಿ ನಾಲೆಗೆ ಕಡೆಗೂ ತಡೆಗೋಡೆ ನಿರ್ಮಾಣ ಭಾಗ್ಯ ಒದಗಿಬಂದಿದ್ದು, ಈಗ ವಾಹನ ಸವಾರರು ನಿರಾಳರಾಗಿದ್ದಾರೆ.
ವಿಸಿ ನಾಲೆಯಲ್ಲಿ ಕಳೆದ ಆರು ವರ್ಷಗಳಿಂದ ನಡೆದ ಸಾಲು ಸಾಲು ದುರಂತಗಳಿಂದ ಜನರು ಈ ನಾಲೆಗೆ ಸಾವಿನ ನಾಲೆ ಎಂಬ ಪಟ್ಟ ಕಟ್ಟಿದ್ದರು.
ವಿಸಿ ನಾಲೆಯ ದಡದ ರಸ್ತೆ ಅತೀ ಕಿರಿದಾಗಿರುವುದರಿಂದ ಇಲ್ಲಿ ವಾಹನ ಸವಾರರು ಸ್ವಲ್ಪ ಯಾಮಾರಿದರೂ ವಾಹನ ಸಮೇತ ನಾಲೆಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದರು.
ನಾಲೆಗೆ ತಡೆಗೋಡೆ ಇಲ್ಲದಿರುವುದೇ ಈ ಅವಘಡಕ್ಕೆ ಪ್ರಮುಖ ಕಾರಣವಾಗಿತ್ತು. ಈ ಎಲ್ಲಾ ಅವಘಡಗಳು ಸಂಭವಿಸಿದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ಹುಲಿಕೆರೆಯಿಂದ ಜೈಪುರದವರೆಗೆ ಎರಡೂವರೆ ಕಿ.ಮೀ ತಡೆಗೋಡೆ ನಿರ್ಮಾಣ ಮಾಡಿದೆ.
ಇದಲ್ಲದೇ ಡೇಂಜರ್ ಝೋನ್ಗಳಲ್ಲೂ ತಡೆಗೋಡೆ ಹಾಕಲು ಜಿಲ್ಲಾಡಳಿತ ಮುಂದಾಗಿದ್ದು, ಇನ್ನು ಮುಂದೆ ಯಾವುದೇ ಆತಂಕವಿಲ್ಲದೇ ವಾಹನ ಸವಾರರು ವಿಸಿ ನಾಲೆಯ ರಸ್ತೆಯಲ್ಲಿ ಸಂಚರಿಸಬಹುದಾಗಿದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…