ಮಂಡ್ಯ

ಯುವತಿಗೆ ನಿರಂತರ ಕಿರುಕುಳ: ವ್ಯಕ್ತಿಯ ವಿರುದ್ಧ ಮಂಡ್ಯದಲ್ಲಿ ಎಫ್‌ಐಆರ್‌

ಮಂಡ್ಯ: ಮದುವೆಯಾಗಲು ನಿರಾಕರಿಸಿದ ಪರಿಣಾಮ ಯುವತಿಯ ಹಿಂದೆ ಬಿದ್ದ ವ್ಯಕ್ತಿಯೋರ್ವ  ನಾಲ್ಕು ವರ್ಷಗಳಿಂದ ಆಕೆಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

ಆಕೆಗೆ ನಿಶ್ಚಯವಾಗಿದ್ದ ಮದುವೆಯನ್ನೆಲ್ಲಾ ರದ್ದು ಮಾಡಿಸಿದ್ದಲ್ಲದೇ ಆಕೆಗೆ ಆಸಿಡ್‌ ದಾಳಿ ಮಾಡುವ ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಚಿಕ್ಕಬಳ್ಳಿ ಬಾಲಕೃಷ್ಣ ಎಂಬುವವನ ವಿರುದ್ಧ ಮಂಡ್ಯದ ಕೆರಗೋಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

4 ವರ್ಷಗಳ ಹಿಂದೆ ಸಂತ್ರಸ್ತೆ ಹಾಗೂ ಬಾಲಕೃಷ್ಣಗೆ ಮದುವೆ ನಿಶ್ಚಯವಾಗಿತ್ತು. ಈ ವೇಳೆ ಸಂತ್ರಸ್ತೆಯು ಬಾಲಕೃಷ್ಣ ಜೊತೆಯಲ್ಲಿ ಹಲವಾರು ಫೋಟೋಗಳನ್ನು ತೆಗೆಸಿಕೊಂಡಿದ್ದಳು. ಆದರೆ ಬಾಲಕೃಷ್ಣ ಹಲವು ಸುಳ್ಳುಗಳನ್ನು ಹೇಳಿ ಮದುವೆ ನಿಶ್ಚಯ ಮಾಡಿಕೊಂಡಿದ್ದು ಗೊತ್ತಾಯಿತು. ಈ ವೇಳೆ ಸಂತ್ರಸ್ತೆ ನಾನು ಆತನ ಜೊತೆ ಮದುವೆ ಆಗಲ್ಲ ಎಂದು ಮದುವೆಗೆ ನಿರಾಕರಿಸಿದ್ದಳು. ಇದರಿಂದ ಕೆರಳಿದ್ದ ಬಾಲಕೃಷ್ಣ ಅಂದಿನಿಂದಲೇ ಯುವತಿಗೆ ಕಿರುಕುಳ ನೀಡುತ್ತಾ ಬಂದಿದ್ದ.

ಯುವತಿ ಜೊತೆ ಇದ್ದ ಹಳೆಯ ಫೋಟೋಗಳನ್ನು ತೋರಿಸಿ ನಿಶ್ಚಯವಾಗಿದ್ದ ಮದುವೆಯನ್ನೆಲ್ಲಾ ರದ್ದು ಮಾಡುತ್ತಾ ಬಂದಿದ್ದ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ನೀಡಿದ್ದ ದೂರಿನ ಮೇರೆಗೆ ಕೆರಗೋಡು ಪೊಲೀಸ್‌ ಠಾಣೆಯಲ್ಲಿ ಬಾಲಕೃಷ್ಣ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

12 mins ago

ರಾಜ್ಯಪಾಲರು-ಸರ್ಕಾರದ ಸಂಘರ್ಷದ ನಡುವೆಯೇ ವಿಧಾನಸೌಧದಲ್ಲಿ ಅಧಿವೇಶನ: ಪೊಲೀಸರಿಂದ ಭದ್ರತೆ

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…

41 mins ago

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

4 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

4 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

4 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

4 hours ago