FIR filed Hindu leader
ಮಂಡ್ಯ: ಮದುವೆಯಾಗಲು ನಿರಾಕರಿಸಿದ ಪರಿಣಾಮ ಯುವತಿಯ ಹಿಂದೆ ಬಿದ್ದ ವ್ಯಕ್ತಿಯೋರ್ವ ನಾಲ್ಕು ವರ್ಷಗಳಿಂದ ಆಕೆಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಆಕೆಗೆ ನಿಶ್ಚಯವಾಗಿದ್ದ ಮದುವೆಯನ್ನೆಲ್ಲಾ ರದ್ದು ಮಾಡಿಸಿದ್ದಲ್ಲದೇ ಆಕೆಗೆ ಆಸಿಡ್ ದಾಳಿ ಮಾಡುವ ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಚಿಕ್ಕಬಳ್ಳಿ ಬಾಲಕೃಷ್ಣ ಎಂಬುವವನ ವಿರುದ್ಧ ಮಂಡ್ಯದ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
4 ವರ್ಷಗಳ ಹಿಂದೆ ಸಂತ್ರಸ್ತೆ ಹಾಗೂ ಬಾಲಕೃಷ್ಣಗೆ ಮದುವೆ ನಿಶ್ಚಯವಾಗಿತ್ತು. ಈ ವೇಳೆ ಸಂತ್ರಸ್ತೆಯು ಬಾಲಕೃಷ್ಣ ಜೊತೆಯಲ್ಲಿ ಹಲವಾರು ಫೋಟೋಗಳನ್ನು ತೆಗೆಸಿಕೊಂಡಿದ್ದಳು. ಆದರೆ ಬಾಲಕೃಷ್ಣ ಹಲವು ಸುಳ್ಳುಗಳನ್ನು ಹೇಳಿ ಮದುವೆ ನಿಶ್ಚಯ ಮಾಡಿಕೊಂಡಿದ್ದು ಗೊತ್ತಾಯಿತು. ಈ ವೇಳೆ ಸಂತ್ರಸ್ತೆ ನಾನು ಆತನ ಜೊತೆ ಮದುವೆ ಆಗಲ್ಲ ಎಂದು ಮದುವೆಗೆ ನಿರಾಕರಿಸಿದ್ದಳು. ಇದರಿಂದ ಕೆರಳಿದ್ದ ಬಾಲಕೃಷ್ಣ ಅಂದಿನಿಂದಲೇ ಯುವತಿಗೆ ಕಿರುಕುಳ ನೀಡುತ್ತಾ ಬಂದಿದ್ದ.
ಯುವತಿ ಜೊತೆ ಇದ್ದ ಹಳೆಯ ಫೋಟೋಗಳನ್ನು ತೋರಿಸಿ ನಿಶ್ಚಯವಾಗಿದ್ದ ಮದುವೆಯನ್ನೆಲ್ಲಾ ರದ್ದು ಮಾಡುತ್ತಾ ಬಂದಿದ್ದ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ನೀಡಿದ್ದ ದೂರಿನ ಮೇರೆಗೆ ಕೆರಗೋಡು ಪೊಲೀಸ್ ಠಾಣೆಯಲ್ಲಿ ಬಾಲಕೃಷ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…