FIR filed Hindu leader
ಮಂಡ್ಯ: ಮದುವೆಯಾಗಲು ನಿರಾಕರಿಸಿದ ಪರಿಣಾಮ ಯುವತಿಯ ಹಿಂದೆ ಬಿದ್ದ ವ್ಯಕ್ತಿಯೋರ್ವ ನಾಲ್ಕು ವರ್ಷಗಳಿಂದ ಆಕೆಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಆಕೆಗೆ ನಿಶ್ಚಯವಾಗಿದ್ದ ಮದುವೆಯನ್ನೆಲ್ಲಾ ರದ್ದು ಮಾಡಿಸಿದ್ದಲ್ಲದೇ ಆಕೆಗೆ ಆಸಿಡ್ ದಾಳಿ ಮಾಡುವ ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಚಿಕ್ಕಬಳ್ಳಿ ಬಾಲಕೃಷ್ಣ ಎಂಬುವವನ ವಿರುದ್ಧ ಮಂಡ್ಯದ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
4 ವರ್ಷಗಳ ಹಿಂದೆ ಸಂತ್ರಸ್ತೆ ಹಾಗೂ ಬಾಲಕೃಷ್ಣಗೆ ಮದುವೆ ನಿಶ್ಚಯವಾಗಿತ್ತು. ಈ ವೇಳೆ ಸಂತ್ರಸ್ತೆಯು ಬಾಲಕೃಷ್ಣ ಜೊತೆಯಲ್ಲಿ ಹಲವಾರು ಫೋಟೋಗಳನ್ನು ತೆಗೆಸಿಕೊಂಡಿದ್ದಳು. ಆದರೆ ಬಾಲಕೃಷ್ಣ ಹಲವು ಸುಳ್ಳುಗಳನ್ನು ಹೇಳಿ ಮದುವೆ ನಿಶ್ಚಯ ಮಾಡಿಕೊಂಡಿದ್ದು ಗೊತ್ತಾಯಿತು. ಈ ವೇಳೆ ಸಂತ್ರಸ್ತೆ ನಾನು ಆತನ ಜೊತೆ ಮದುವೆ ಆಗಲ್ಲ ಎಂದು ಮದುವೆಗೆ ನಿರಾಕರಿಸಿದ್ದಳು. ಇದರಿಂದ ಕೆರಳಿದ್ದ ಬಾಲಕೃಷ್ಣ ಅಂದಿನಿಂದಲೇ ಯುವತಿಗೆ ಕಿರುಕುಳ ನೀಡುತ್ತಾ ಬಂದಿದ್ದ.
ಯುವತಿ ಜೊತೆ ಇದ್ದ ಹಳೆಯ ಫೋಟೋಗಳನ್ನು ತೋರಿಸಿ ನಿಶ್ಚಯವಾಗಿದ್ದ ಮದುವೆಯನ್ನೆಲ್ಲಾ ರದ್ದು ಮಾಡುತ್ತಾ ಬಂದಿದ್ದ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ನೀಡಿದ್ದ ದೂರಿನ ಮೇರೆಗೆ ಕೆರಗೋಡು ಪೊಲೀಸ್ ಠಾಣೆಯಲ್ಲಿ ಬಾಲಕೃಷ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…