ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಈ ಬಾರಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನದ ಆರಂಭಕ್ಕೂ ಮುನ್ನ ವಿಚಾರ ಸಂಕಿರಣದ ವಿವಾದ ಸೃಷ್ಟಿಯಾಗಿದೆ.
ಬರುವ ಡಿಸೆಂಬರ್.20ರಿಂದ ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಇದಕ್ಕಾಗಿ ಸರ್ವ ರೀತಿಯಲ್ಲೂ ತಯಾರಿಕೆ ಮಾಡಿಕೊಳ್ಳಲಾಗಿದೆ.
ಈ ಬೆನ್ನಲ್ಲೇ ಮಂಡ್ಯದಲ್ಲಿ ವಿಚಾರ ಸಂಕಿರಣದ ವಿವಾದವೊಂದು ಸೃಷ್ಟಿಯಾಗಿದ್ದು, ಸಮ್ಮೇಳನದಲ್ಲಿ ಟಿಪ್ಪು ಸುಲ್ತಾನ್ ವಿಚಾರ ಸಂಕಿರಣವನ್ನು ನಡೆಸಬೇಕೆಂದು ಪ್ರಗತಿಪರರು ಆಗ್ರಹಿಸುತ್ತಿದ್ದಾರೆ. ಇದಕ್ಕೆ ಹಲವರಿಂದ ವಿರೋಧ ವ್ಯಕ್ತವಾಗಿದೆ.
ಈ ಸಮ್ಮೇಳನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್, ವಿಶ್ವೇಶ್ವರಯ್ಯ ಹಾಗೂ ಮಿರ್ಜಾ ಇಸ್ಮಾಯಿಲ್ ಅವರನ್ನು ನೆನೆಯಬೇಕು. ಇವರಿಗಿಂತ ಹೆಚ್ಚಾಗಿ ಟಿಪ್ಪು ಸುಲ್ತಾನ್ ಅವರನ್ನು ಕೂಡ ನೆನೆಯಬೇಕು ಎಂದು ಪ್ರಗತಿಪರರು ಪಟ್ಟು ಹಿಡಿದಿದ್ದಾರೆ.
ಇದಕ್ಕೆ ಹಿಂದೂ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಟಿಪ್ಪು ಸುಲ್ತಾನ್ ವಿಚಾರ ಸಂಕಿರಣ ಮಾಡಲು ಮುಂದಾದರೆ ತಡೆಯುವ ಕೆಲಸ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿವೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…