ಮಂಡ್ಯ

ಶೀಘ್ರ ನ್ಯಾಯದಾಯಕ್ಕೆ ವಕೀಲರ ಸಹಕಾರ ಮುಖ್ಯ: ನ್ಯಾ.ಮಹೇಶ್‌

ಮಂಡ್ಯ/ಕೆ.ಆರ್‌ ಪೇಟೆ: ಶೀಘ್ರ ನ್ಯಾಯದಾನಕ್ಕೆ ವಕೀಲರು ನ್ಯಾಯಾಧೀಶರಿಗೆ ಪೂರಕವಾಗಿ ಸಹಕಾರ ನೀಡಿ ಕೆಲಸ ಮಾಡಬೇಕು ಎಂದು ಪಾಂಡವಪುರದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಮಹೇಶ್ ಮನವಿ ಮಾಡಿದರು.

ಅವರು ಕೃಷ್ಣರಾಜಪೇಟೆ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯಕ್ಕೆ ನೂತನವಾಗಿ ವರ್ಗಾವಣೆಗೊಂಡು ಆಗಮಿಸಿರುವ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಸುಧೀರ್ ಮತ್ತು ಅಪರ ಸಿವಿಲ್ ನ್ಯಾಯಾಧೀಶ ದೇವರಾಜ್ ಅವರನ್ನು ಸ್ವಾಗತಿಸಿ ನೂತನ ನ್ಯಾಯಾಂಗಣವನ್ನು ಉದ್ಘಾಟಿಸಿ ಮಾತನಾಡಿದರು.

ಕೃಷ್ಣರಾಜಪೇಟೆ ನ್ಯಾಯಾಲಯದಲ್ಲಿ 4500ಕ್ಕೂ ಹೆಚ್ಚಿನ ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ, ಈ ದಿಕ್ಕಿನಲ್ಲಿ ಶೀಘ್ರವಾಗಿ ಕಕ್ಷೀದಾರರಿಗೆ ನ್ಯಾಯವನ್ನು ಒದಗಿಸಿಕೊಡುವ ದಿಕ್ಕಿನಲ್ಲಿ ವಕೀಲರು ಬದ್ಧತೆಯಿಂದ ವಾದ ಮಂಡಿಸಿ ಶೀಘ್ರ ನ್ಯಾಯದಾನಕ್ಕೆ ನ್ಯಾಯಧೀಶರಿಗೆ ಪೂರಕ ಸಹಕಾರವನ್ನು ನೀಡಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ರಾಜ್ಯ ಉಚ್ಚ ನ್ಯಾಯಾಲಯವು ಅತಿ ಶೀಘ್ರದಲ್ಲಿಯೇ ಕೆ.ಆರ್.ಪೇಟೆ ಪಟ್ಟಣದಲ್ಲಿ ಜಿಲ್ಲಾ ಸತ್ರ ನ್ಯಾಯಾಲಯವನ್ನು ಆರಂಭ ಮಾಡುವ ಸಾಧ್ಯತೆ ಇದೆ. ನೀವು ಶ್ರೀರಂಗಪಟ್ಟಣದ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಕ್ರಿಮಿನಲ್ ಕೇಸುಗಳಿಗಾಗಿ ಅಲೆದಾಡುವ ಅಗತ್ಯವು ಸದ್ಯದಲ್ಲೇ ನಿಲ್ಲಲಿದೆ. ಆದ್ದರಿಂದ ವಕೀಲರು ನ್ಯಾಯವನ್ನು ಅರಸಿ ನ್ಯಾಯಾಲಯಕ್ಕೆ ಬರುವ ಬಡ ಕಕ್ಷಿದಾರರಿಗೆ ಶೀಘ್ರವೇ ನ್ಯಾಯ ದೊರಕುವ ದಿಕ್ಕಿನಲ್ಲಿ ಕೆಲಸ ಮಾಡಬೇಕು ಎಂದು ನ್ಯಾಯಾಧೀಶರಾದ ಮಹೇಶ್ ಕಿವಿಮಾತು ಹೇಳಿದರು.

ಕೆ.ಆರ್.ಪೇಟೆ ನ್ಯಾಯಾಲಯಕ್ಕೆ ವರ್ಗಾವಣೆಗೊಂಡು ಆಗಮಿಸಿರುವ ನ್ಯಾಯಾಧೀಶರಾದ ಸುಧೀರ್ ಮತ್ತು ದೇವರಾಜು ಮಾತನಾಡಿ ಈವರೆಗೆ ನ್ಯಾಯಾಧೀಶರಾಗಿ ಕೆಲಸ ಮಾಡಿರುವ ನ್ಯಾಯಾಧೀಶರುಗಳಿಗೆ ನೀಡಿರುವಂತೆ ತಮಗೂ ಕೆಲಸ ಮಾಡಲು ವಕೀಲರ ಸಂಘ ಹಾಗೂ ವಕೀಲರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕೃಷ್ಣರಾಜಪೇಟೆ ತಾಲೂಕು ವಕೀಲರ ಸಂಘದ ಅಧ್ಯಕ್ಷ ಎನ್.ಆರ್.ರವಿಶಂಕರ್ ಮಾತನಾಡಿ, ಕೆ.ಆರ್.ಪೇಟೆ ನ್ಯಾಯಾಲಯದಲ್ಲಿ ಕೆಲಸ ಮಾಡುತ್ತಿರುವ ವಕೀಲರೆಲ್ಲರೂ ಗ್ರಾಮೀಣ ಪ್ರದೇಶದ ರೈತಾಪಿ ಕುಟುಂಬದಿಂದ ಬಂದಿರುವ ಯುವಕರಾಗಿದ್ದಾರೆ, ವಾದ ಮಂಡನೆ ಹಾಗೂ ಪ್ರಕರಣಗಳ ಇತ್ಯರ್ಥದ ಸಂದರ್ಭದಲ್ಲಿ ವಕೀಲರುಗಳಿಂದ ಸಣ್ಣಪುಟ್ಟ ಲೋಪ ದೋಷಗಳಾದರೆ, ಅವರನ್ನು ತಿದ್ದಿ ತೀಡಿ ಪೂರಕವಾದ ಸಹಕಾರ ನೀಡಿ ಕೆಲಸ ಮಾಡಲು ಮಾರ್ಗದರ್ಶನ ನೀಡಬೇಕು ಎಂದು ಮನವಿ ಮಾಡಿದರು.

ಅಪರ ಸಿವಿಲ್ ನ್ಯಾಯಾಧಿಶರಾದ ಶಕುಂತಲಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಕೀಲರು ನೂತನವಾಗಿ ವರ್ಗಾವಣೆಗೊಂಡು ಆಗಮಿಸಿರುವ ನ್ಯಾಯಾಧೀಶರಿಗೆ ಪೂರಕವಾಗಿ ಸಹಕಾರ ನೀಡಿ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದು ಕಾನೂನು ಬದ್ಧವಾಗಿ ಕೆಲಸ ಮಾಡಿ ನ್ಯಾಯ ಬದ್ಧವಾಗಿ ತೀರ್ಪು ನೀಡಲು ವಕೀಲರ ಸಂಘವು ಮುಂದಾಗಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ವಕೀಲರು ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ವರ್ಗಾವಣೆಗೊಂಡು ಆಗಮಿಸಿರುವ ನೂತನ ನ್ಯಾಯಾಧೀಶರುಗಳಿಗೆ ತಮ್ಮನ್ನು ಪರಸ್ಪರ ಪರಿಚಯ ಮಾಡಿಕೊಂಡರು.

ಸರ್ಕಾರಿ ಅಭಿಯೋಜಕ ಸುರೇಂದ್ರ, ಹಿರಿಯ ವಕೀಲರಾದ ಎಸ್.ಸಿ. ವಿಜಯಕುಮಾರ್, ಜಿ.ಆರ್. ಅನಂತರಾಮಯ್ಯ, ವಕೀಲರ ಸಂಘದ ಕಾರ್ಯದರ್ಶಿ ರಾಜೇಗೌಡ ಸಭೆಯಲ್ಲಿ ಮಾತನಾಡಿದರು. ವಕೀಲರ ಸಂಘದ ಪದಾಧಿಕಾರಿಗಳಾದ ದಿನೇಶ್, ಡಿ.ಆರ್.ಜಗಧೀಶ್, ನಿರಂಜನ, ಸುಜಾತ, ಹಿರಿಯ ವಕೀಲರರಾದ ಎಂ. ಆರ್.ಪ್ರಸನ್ನಕುಮಾರ್, ಕೆ. ಎನ್.ನಾಗರಾಜು, ಕೆರೆಮೇಗಳ ಕೊಪ್ಪಲು ಶಂಕರೇಗೌಡ, ಬಂಡಿಹೊಳೆ ಗಣೇಶ್, ಗಂಜಿಗೆರೆ ಲೋಕೇಶ್, ಎಂ.ಎಲ್. ಸುರೇಶ್, ಸಿ.ಎನ್.ಮೋಹನ್, ಕೆ.ಆರ್.ಮಹೇಶ್, ನಯಾಜ್ ಪಾಷ, ಮಂಜುನಾಥ್ ಸೇರಿದಂತೆ ವಕೀಲರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

7 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

7 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

8 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

9 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

9 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

9 hours ago