ಮಂಡ್ಯ

ಶೀಘ್ರ ನ್ಯಾಯದಾಯಕ್ಕೆ ವಕೀಲರ ಸಹಕಾರ ಮುಖ್ಯ: ನ್ಯಾ.ಮಹೇಶ್‌

ಮಂಡ್ಯ/ಕೆ.ಆರ್‌ ಪೇಟೆ: ಶೀಘ್ರ ನ್ಯಾಯದಾನಕ್ಕೆ ವಕೀಲರು ನ್ಯಾಯಾಧೀಶರಿಗೆ ಪೂರಕವಾಗಿ ಸಹಕಾರ ನೀಡಿ ಕೆಲಸ ಮಾಡಬೇಕು ಎಂದು ಪಾಂಡವಪುರದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಮಹೇಶ್ ಮನವಿ ಮಾಡಿದರು.

ಅವರು ಕೃಷ್ಣರಾಜಪೇಟೆ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯಕ್ಕೆ ನೂತನವಾಗಿ ವರ್ಗಾವಣೆಗೊಂಡು ಆಗಮಿಸಿರುವ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಸುಧೀರ್ ಮತ್ತು ಅಪರ ಸಿವಿಲ್ ನ್ಯಾಯಾಧೀಶ ದೇವರಾಜ್ ಅವರನ್ನು ಸ್ವಾಗತಿಸಿ ನೂತನ ನ್ಯಾಯಾಂಗಣವನ್ನು ಉದ್ಘಾಟಿಸಿ ಮಾತನಾಡಿದರು.

ಕೃಷ್ಣರಾಜಪೇಟೆ ನ್ಯಾಯಾಲಯದಲ್ಲಿ 4500ಕ್ಕೂ ಹೆಚ್ಚಿನ ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ, ಈ ದಿಕ್ಕಿನಲ್ಲಿ ಶೀಘ್ರವಾಗಿ ಕಕ್ಷೀದಾರರಿಗೆ ನ್ಯಾಯವನ್ನು ಒದಗಿಸಿಕೊಡುವ ದಿಕ್ಕಿನಲ್ಲಿ ವಕೀಲರು ಬದ್ಧತೆಯಿಂದ ವಾದ ಮಂಡಿಸಿ ಶೀಘ್ರ ನ್ಯಾಯದಾನಕ್ಕೆ ನ್ಯಾಯಧೀಶರಿಗೆ ಪೂರಕ ಸಹಕಾರವನ್ನು ನೀಡಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ರಾಜ್ಯ ಉಚ್ಚ ನ್ಯಾಯಾಲಯವು ಅತಿ ಶೀಘ್ರದಲ್ಲಿಯೇ ಕೆ.ಆರ್.ಪೇಟೆ ಪಟ್ಟಣದಲ್ಲಿ ಜಿಲ್ಲಾ ಸತ್ರ ನ್ಯಾಯಾಲಯವನ್ನು ಆರಂಭ ಮಾಡುವ ಸಾಧ್ಯತೆ ಇದೆ. ನೀವು ಶ್ರೀರಂಗಪಟ್ಟಣದ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಕ್ರಿಮಿನಲ್ ಕೇಸುಗಳಿಗಾಗಿ ಅಲೆದಾಡುವ ಅಗತ್ಯವು ಸದ್ಯದಲ್ಲೇ ನಿಲ್ಲಲಿದೆ. ಆದ್ದರಿಂದ ವಕೀಲರು ನ್ಯಾಯವನ್ನು ಅರಸಿ ನ್ಯಾಯಾಲಯಕ್ಕೆ ಬರುವ ಬಡ ಕಕ್ಷಿದಾರರಿಗೆ ಶೀಘ್ರವೇ ನ್ಯಾಯ ದೊರಕುವ ದಿಕ್ಕಿನಲ್ಲಿ ಕೆಲಸ ಮಾಡಬೇಕು ಎಂದು ನ್ಯಾಯಾಧೀಶರಾದ ಮಹೇಶ್ ಕಿವಿಮಾತು ಹೇಳಿದರು.

ಕೆ.ಆರ್.ಪೇಟೆ ನ್ಯಾಯಾಲಯಕ್ಕೆ ವರ್ಗಾವಣೆಗೊಂಡು ಆಗಮಿಸಿರುವ ನ್ಯಾಯಾಧೀಶರಾದ ಸುಧೀರ್ ಮತ್ತು ದೇವರಾಜು ಮಾತನಾಡಿ ಈವರೆಗೆ ನ್ಯಾಯಾಧೀಶರಾಗಿ ಕೆಲಸ ಮಾಡಿರುವ ನ್ಯಾಯಾಧೀಶರುಗಳಿಗೆ ನೀಡಿರುವಂತೆ ತಮಗೂ ಕೆಲಸ ಮಾಡಲು ವಕೀಲರ ಸಂಘ ಹಾಗೂ ವಕೀಲರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕೃಷ್ಣರಾಜಪೇಟೆ ತಾಲೂಕು ವಕೀಲರ ಸಂಘದ ಅಧ್ಯಕ್ಷ ಎನ್.ಆರ್.ರವಿಶಂಕರ್ ಮಾತನಾಡಿ, ಕೆ.ಆರ್.ಪೇಟೆ ನ್ಯಾಯಾಲಯದಲ್ಲಿ ಕೆಲಸ ಮಾಡುತ್ತಿರುವ ವಕೀಲರೆಲ್ಲರೂ ಗ್ರಾಮೀಣ ಪ್ರದೇಶದ ರೈತಾಪಿ ಕುಟುಂಬದಿಂದ ಬಂದಿರುವ ಯುವಕರಾಗಿದ್ದಾರೆ, ವಾದ ಮಂಡನೆ ಹಾಗೂ ಪ್ರಕರಣಗಳ ಇತ್ಯರ್ಥದ ಸಂದರ್ಭದಲ್ಲಿ ವಕೀಲರುಗಳಿಂದ ಸಣ್ಣಪುಟ್ಟ ಲೋಪ ದೋಷಗಳಾದರೆ, ಅವರನ್ನು ತಿದ್ದಿ ತೀಡಿ ಪೂರಕವಾದ ಸಹಕಾರ ನೀಡಿ ಕೆಲಸ ಮಾಡಲು ಮಾರ್ಗದರ್ಶನ ನೀಡಬೇಕು ಎಂದು ಮನವಿ ಮಾಡಿದರು.

ಅಪರ ಸಿವಿಲ್ ನ್ಯಾಯಾಧಿಶರಾದ ಶಕುಂತಲಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಕೀಲರು ನೂತನವಾಗಿ ವರ್ಗಾವಣೆಗೊಂಡು ಆಗಮಿಸಿರುವ ನ್ಯಾಯಾಧೀಶರಿಗೆ ಪೂರಕವಾಗಿ ಸಹಕಾರ ನೀಡಿ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದು ಕಾನೂನು ಬದ್ಧವಾಗಿ ಕೆಲಸ ಮಾಡಿ ನ್ಯಾಯ ಬದ್ಧವಾಗಿ ತೀರ್ಪು ನೀಡಲು ವಕೀಲರ ಸಂಘವು ಮುಂದಾಗಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ವಕೀಲರು ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ವರ್ಗಾವಣೆಗೊಂಡು ಆಗಮಿಸಿರುವ ನೂತನ ನ್ಯಾಯಾಧೀಶರುಗಳಿಗೆ ತಮ್ಮನ್ನು ಪರಸ್ಪರ ಪರಿಚಯ ಮಾಡಿಕೊಂಡರು.

ಸರ್ಕಾರಿ ಅಭಿಯೋಜಕ ಸುರೇಂದ್ರ, ಹಿರಿಯ ವಕೀಲರಾದ ಎಸ್.ಸಿ. ವಿಜಯಕುಮಾರ್, ಜಿ.ಆರ್. ಅನಂತರಾಮಯ್ಯ, ವಕೀಲರ ಸಂಘದ ಕಾರ್ಯದರ್ಶಿ ರಾಜೇಗೌಡ ಸಭೆಯಲ್ಲಿ ಮಾತನಾಡಿದರು. ವಕೀಲರ ಸಂಘದ ಪದಾಧಿಕಾರಿಗಳಾದ ದಿನೇಶ್, ಡಿ.ಆರ್.ಜಗಧೀಶ್, ನಿರಂಜನ, ಸುಜಾತ, ಹಿರಿಯ ವಕೀಲರರಾದ ಎಂ. ಆರ್.ಪ್ರಸನ್ನಕುಮಾರ್, ಕೆ. ಎನ್.ನಾಗರಾಜು, ಕೆರೆಮೇಗಳ ಕೊಪ್ಪಲು ಶಂಕರೇಗೌಡ, ಬಂಡಿಹೊಳೆ ಗಣೇಶ್, ಗಂಜಿಗೆರೆ ಲೋಕೇಶ್, ಎಂ.ಎಲ್. ಸುರೇಶ್, ಸಿ.ಎನ್.ಮೋಹನ್, ಕೆ.ಆರ್.ಮಹೇಶ್, ನಯಾಜ್ ಪಾಷ, ಮಂಜುನಾಥ್ ಸೇರಿದಂತೆ ವಕೀಲರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

2 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

3 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

6 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

6 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago