ಮಂಡ್ಯ

ಕಾರ್ಪೊರೇಟ್, ಎಂಎನ್‌ಸಿ ಕಂಪೆನಿಗಳೇ ಭಾರತ ಬಿಟ್ಟು ತೊಲಗಿ

ರೈತ ಸಂಘ, ಪ್ರಾಂತ ರೈತ ಸಂಘ, ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ

ಮಂಡ್ಯ : ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ ಹಾಗೂ ಭಾರತ ಬಿಟ್ಟು ತೊಲಗಿ ಚಳವಳಿಯ ೮೩ನೇ ವಾರ್ಷಿಕೋತ್ಸವದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕದ ಸಹಯೋಗದಲ್ಲಿ ‘ಕಾರ್ಪೋರೇಟ್ ಮತ್ತು ಎಂಎನ್‌ಸಿ ಕಂಪೆನಿಗಳೇ ಭಾರತ ಬಿಟ್ಟು ತೊಲಗಿ’ ಎಂದು ಪ್ರತಿಭಟನೆ ನಡೆಸಲಾಯಿತು.

ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದು, ಮಾನವ ಸರಪಳಿ ನಿರ್ಮಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಬಹುರಾಷ್ಟ್ರೀಯ ಮತ್ತು ಕಾರ್ಪೋರೇಟ್ ಕಂಪೆನಿಗಳು ಕೃಷಿಯೆಡೆಗೆ ಮುಂದಾಗಿವೆ. ಇದರಿಂದ ಕೃಷಿ ಮತ್ತು ರೈತ, ಕಾರ್ಮಿಕ, ದಲಿತ, ಮಹಿಳೆ, ವಿದ್ಯಾರ್ಥಿ, ಯುವಜನರ ಬದುಕಿಗೆ ಮಾರವಾಗಿದೆ. ಆದ್ದರಿಂದ ಬಹುರಾಷ್ಟ್ರೀಯ ಮತ್ತು ಕಾರ್ಪೋರೇಟ್ ಕಂಪೆನಿಗಳನ್ನು ದೇಶದಿಂದ ಹೊರ ಹಾಕಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರನ್ನು ದೇಶದಿಂದ ತೊಲಗಿಸಲು ಭಾರತ ಬಿಟ್ಟು ತೊಲಗಿ ಹೋರಾಟ ಮಾಡಲಾಗಿತ್ತು. ಅದೇ ಮಾದರಿಯಲ್ಲಿ ಬಹುರಾಷ್ಟ್ರೀಯ ಮತ್ತು ಕಾರ್ಪೋರೇಟ್ ಕಂಪೆನಿಗಳನ್ನು ದೇಶದಿಂದ ಹೊರಗೆ ದೂಡಬೇಕೆಂದು ಆಗ್ರಹಿಸಿದರು.

ಬಹುರಾಷ್ಟ್ರೀಯ ಮತ್ತು ಕಾರ್ಪೋರೇಟ್ ಕಂಪೆನಿಗಳು ದೇಶದ ಆರ್ಥಿಕತೆಯನ್ನು ಖಾಸಗೀಕರಣಗೊಳಿಸುತ್ತಿವೆ. ಇದರೊಂದಿಗೆ ಎಲ್ಲ ಕೇತ್ರಕ್ಕೂ ಲಗ್ಗೆ ಹಾಕುತ್ತಿವೆ. ಇದರಿಂದ ದೇಶದ ಸ್ವಾವಲಂಬಿ ಹಾಗೂ ಸಾರ್ವಭೌಮತ್ವಕ್ಕೆ ತೊಂದರೆಯುಂಟಾಗಲಿದೆ. ಆದ್ದರಿಂದ ರೈತ, ಕಾರ್ಮಿಕ, ದಲಿತ, ಮಹಿಳೆ, ವಿದ್ಯಾರ್ಥಿ, ಯುವಜನ ಸಂಘಟನೆಗಳು ಒಟ್ಟಾಗಿ ಕೇಂದ್ರ ಸರ್ಕಾರದ ಕಾರ್ಪೋರೇಟ್ ನೀತಿಯ ವಿರುದ್ಧ ಹೋರಾಟ ಮಾಡಲಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಅಮೆರಿಕಾದೊಂದಿಗೆ ಆರ್ಥಿಕ, ವಾಣಿಜ್ಯ, ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳಬಾರದು, ವಿದೇಶಿ ನೇರ ಹೂಡಿಕೆಗೆ ಕಡಿವಾಣ ಹಾಕಬೇಕು. ಎನ್‌ಪಿಎಫ್‌ಎಎಂ ಹಾಗೂ ಎನ್‌ಸಿಪಿ ರದ್ದುಪಡಿಸಬೇಕು. ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮೂಲಕ ಖಾಸಗಿ ಬಂಡವಾಳ ಉತ್ತೇಜಿಸುವ ನೀತಿ ಕೈಬಿಡಬೇಕು. ಎಲ್ಲ ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಬೇಕು. ಸಮಗ್ರ ಸಾಲ ಮನ್ನಾ ನೀತಿ ಜಾರಿಯಾಗಬೇಕು. ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಸೇರಿದಂತೆ ೧೧ ಬೇಡಿಕೆ ಈಡೇರಿಕೆಗೆ ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಎನ್.ಎಲ್.ಭರತ್‌ರಾಜ್, ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಹನುಮೇಶ್, ಸಿಐಟಿಯು ಜಿಲ್ಲಾ ಮುಖಂಡ ಚಂದ್ರಶೇಖರ್, ಸಿಐಟಿಯು ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಹ ಕಾರ್ಯದರ್ಶಿ ಪ್ರೇಮಾ ಇತರರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

8 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

8 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

8 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

8 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

8 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

8 hours ago