ಮಂಡ್ಯ

ಕಾರ್ಪೊರೇಟ್, ಎಂಎನ್‌ಸಿ ಕಂಪೆನಿಗಳೇ ಭಾರತ ಬಿಟ್ಟು ತೊಲಗಿ

ರೈತ ಸಂಘ, ಪ್ರಾಂತ ರೈತ ಸಂಘ, ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ

ಮಂಡ್ಯ : ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ ಹಾಗೂ ಭಾರತ ಬಿಟ್ಟು ತೊಲಗಿ ಚಳವಳಿಯ ೮೩ನೇ ವಾರ್ಷಿಕೋತ್ಸವದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕದ ಸಹಯೋಗದಲ್ಲಿ ‘ಕಾರ್ಪೋರೇಟ್ ಮತ್ತು ಎಂಎನ್‌ಸಿ ಕಂಪೆನಿಗಳೇ ಭಾರತ ಬಿಟ್ಟು ತೊಲಗಿ’ ಎಂದು ಪ್ರತಿಭಟನೆ ನಡೆಸಲಾಯಿತು.

ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದು, ಮಾನವ ಸರಪಳಿ ನಿರ್ಮಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಬಹುರಾಷ್ಟ್ರೀಯ ಮತ್ತು ಕಾರ್ಪೋರೇಟ್ ಕಂಪೆನಿಗಳು ಕೃಷಿಯೆಡೆಗೆ ಮುಂದಾಗಿವೆ. ಇದರಿಂದ ಕೃಷಿ ಮತ್ತು ರೈತ, ಕಾರ್ಮಿಕ, ದಲಿತ, ಮಹಿಳೆ, ವಿದ್ಯಾರ್ಥಿ, ಯುವಜನರ ಬದುಕಿಗೆ ಮಾರವಾಗಿದೆ. ಆದ್ದರಿಂದ ಬಹುರಾಷ್ಟ್ರೀಯ ಮತ್ತು ಕಾರ್ಪೋರೇಟ್ ಕಂಪೆನಿಗಳನ್ನು ದೇಶದಿಂದ ಹೊರ ಹಾಕಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರನ್ನು ದೇಶದಿಂದ ತೊಲಗಿಸಲು ಭಾರತ ಬಿಟ್ಟು ತೊಲಗಿ ಹೋರಾಟ ಮಾಡಲಾಗಿತ್ತು. ಅದೇ ಮಾದರಿಯಲ್ಲಿ ಬಹುರಾಷ್ಟ್ರೀಯ ಮತ್ತು ಕಾರ್ಪೋರೇಟ್ ಕಂಪೆನಿಗಳನ್ನು ದೇಶದಿಂದ ಹೊರಗೆ ದೂಡಬೇಕೆಂದು ಆಗ್ರಹಿಸಿದರು.

ಬಹುರಾಷ್ಟ್ರೀಯ ಮತ್ತು ಕಾರ್ಪೋರೇಟ್ ಕಂಪೆನಿಗಳು ದೇಶದ ಆರ್ಥಿಕತೆಯನ್ನು ಖಾಸಗೀಕರಣಗೊಳಿಸುತ್ತಿವೆ. ಇದರೊಂದಿಗೆ ಎಲ್ಲ ಕೇತ್ರಕ್ಕೂ ಲಗ್ಗೆ ಹಾಕುತ್ತಿವೆ. ಇದರಿಂದ ದೇಶದ ಸ್ವಾವಲಂಬಿ ಹಾಗೂ ಸಾರ್ವಭೌಮತ್ವಕ್ಕೆ ತೊಂದರೆಯುಂಟಾಗಲಿದೆ. ಆದ್ದರಿಂದ ರೈತ, ಕಾರ್ಮಿಕ, ದಲಿತ, ಮಹಿಳೆ, ವಿದ್ಯಾರ್ಥಿ, ಯುವಜನ ಸಂಘಟನೆಗಳು ಒಟ್ಟಾಗಿ ಕೇಂದ್ರ ಸರ್ಕಾರದ ಕಾರ್ಪೋರೇಟ್ ನೀತಿಯ ವಿರುದ್ಧ ಹೋರಾಟ ಮಾಡಲಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಅಮೆರಿಕಾದೊಂದಿಗೆ ಆರ್ಥಿಕ, ವಾಣಿಜ್ಯ, ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳಬಾರದು, ವಿದೇಶಿ ನೇರ ಹೂಡಿಕೆಗೆ ಕಡಿವಾಣ ಹಾಕಬೇಕು. ಎನ್‌ಪಿಎಫ್‌ಎಎಂ ಹಾಗೂ ಎನ್‌ಸಿಪಿ ರದ್ದುಪಡಿಸಬೇಕು. ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮೂಲಕ ಖಾಸಗಿ ಬಂಡವಾಳ ಉತ್ತೇಜಿಸುವ ನೀತಿ ಕೈಬಿಡಬೇಕು. ಎಲ್ಲ ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಬೇಕು. ಸಮಗ್ರ ಸಾಲ ಮನ್ನಾ ನೀತಿ ಜಾರಿಯಾಗಬೇಕು. ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಸೇರಿದಂತೆ ೧೧ ಬೇಡಿಕೆ ಈಡೇರಿಕೆಗೆ ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಎನ್.ಎಲ್.ಭರತ್‌ರಾಜ್, ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಹನುಮೇಶ್, ಸಿಐಟಿಯು ಜಿಲ್ಲಾ ಮುಖಂಡ ಚಂದ್ರಶೇಖರ್, ಸಿಐಟಿಯು ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಹ ಕಾರ್ಯದರ್ಶಿ ಪ್ರೇಮಾ ಇತರರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

6 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

6 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

6 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

6 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

6 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

7 hours ago