ಮಂಡ್ಯ

ಮಂಡ್ಯ | ಜಲ್-ಜೀವನ್‌ ಕಾಮಗಾರಿಯಲ್ಲಿ ಭಾರಿ ಭ್ರಷ್ಟಾಚಾರ ಆರೋಪ

ಮಂಡ್ಯ : ಜಿಲ್ಲೆಯಲ್ಲಿ ಜಲ್-ಜೀವನ್ ಮಿಷನ್ ಯೋಜನೆಯಡಿ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಗಳಲ್ಲಿ ಭಾರಿ ಭ್ರಷ್ಟಾಚಾರವೆಸಗಲಾಗುತ್ತಿದ್ದು, ಸಂಬಂಧಿತ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕೋಟ್ಯಾಂತರ ರೂ ಲೂಟಿ ಹೊಡೆಯುತ್ತಿದ್ದಾರೆ ಎಂದು ಕಿರಣ್‌ಕುಮಾರ್ ಆರೋಪಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸದರಿ ಯೋಜನೆ ಜಾರಿಯಾಗುವ ಮುನ್ನವೇ ಜಿಲ್ಲೆಯ ಶೇ95 ರಷ್ಟು ಕುಟುಂಬಗಳಿಗೆ ನಳ ಸಂಪರ್ಕವಿದ್ದರೂ ಶೇ.53ರಷ್ಟು ಮಾತ್ರ ಸಳ ಸಂಪರ್ಕವಿದೆಯೆಂದು ಸುಳ್ಳು ಮಾಹಿತಿ ನೀಡಿ ಸುಮಾರು 1100 ರಿಂದ 1200 ಕೋಟಿ ರೂ ವರೆಗೆ ಹಣ ಮಂಜೂರು ಮಾಡಿಸಿ ಲೂಟಿ ಮಾಡುವ ದಂಧೆ ಮಾಡಲಾಗುತ್ತಿದೆ ಎಂದು ದೂರಿದರು.

ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಮನಸೋ ಇಚ್ಛೆ ಅಂದಾಜು ಪಟ್ಟಿ ತಯಾರಿಸಿ 46 ಪಂಚಾಯಿತಿಗಳ ಪೈಕಿ ಇರುವ 175 ಜನವಸತಿ ಪ್ರದೇಶಗಳಿಗೆ 287 ಕಾಮಗಾರಿಗಳನ್ನು ದಾಖಲಿಸಿಕೊಂಡಿದ್ದು, ಇದುವರೆಗೆ ಯಾವುದೇ ರೀತಿ ಜಿಎಸ್‌ಟಿ ಕಡಿತ ಮಾಡಲಾಗದೆ ಗುತ್ತಿಗೆದಾರರಿಗೆ ಹಣ ಪಾವತಿ ಮಾಡಲಾಗಿದೆ ಎಂದು ದೂರಿದರು.

ನಳ ಸಂಪರ್ಕ ಇಲ್ಲದ ಮಾಹಿತಿ ಯಾವ ಅಧಿಕಾರಿಗಳ ಬಳಿಯೂ ಇಲ್ಲವಾಗಿದ್ದು, ಬೇಡಿಕೆಗೆ ಅನುಗುಣವಾಗಿ ಅಂದಾಜು ಪಟ್ಟಿ ಮಾಡಿರುವುದಿಲ್ಲ, ಮೂರನೇ ವ್ಯಕ್ತಿ ತಪಾಸಣೆ ಸಂಸ್ಥೆಯು ಗ್ರಾಮಗಳಿಗೆ ಭೇಟಿ ನೀಡಿ ಸಮೀಕ್ಷೆ ಮಾಡದೇ ಏಕಾಏಕಿ ವರದಿ ನೀಡಿದ್ದು, ಸದರಿ ಸಮೀಕ್ಷೆಗೆ 20 ಕೋಟಿ ರೂ.ಗಿಂತಲು ಹೆಚ್ಚು ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಿದ್ದಾರೆ ಎಂದು ಹೇಳಿದರು.

ಗುತ್ತಿಗೆದಾರರು ಕಾಮಗಾರಿ ಮಾಡದೇ ಅರ್ಹತೆ ಇಲ್ಲದವರಿಗೆ ಮತ್ತು ರಾಜಕಾರಣಿಗಳ ಹಿಂಬಾಲಕರಿಗೆ ಅಲ್ಲದೇ ಸ್ವತಃ ಇಂಜಿನಿಯರ್‌ಗಳೇ ಉಪಗುತ್ತಿಗೆ ಪಡೆದು ಕೆಲಸ ಮಾಡಿಸುವ ಮೂಲಕ ಕಳಪೆ ಕಾಮಗಾರಿ, ಕಮಿಷನ್ ದಂಧೆ ನಡೆಯಲು ಕಾರಣವಾಗಿದ್ದು, ಸಮರ್ಪಕವಾಗಿ ಯೋಜನೆಯ ಅನುಷ್ಠಾನ ಮಾಡಲಾಗುತ್ತಿಲ್ಲವೆಂದು ಗಂಭೀರ ಆರೋಪ ಮಾಡಿದರು.

ಈ ಸಂಬಂಧ ಜಿಲ್ಲಾ ಪಂಚಾಯಿತಿ ಸಿಇಓ ಅವರಿಗೆ ದೂರಿದ ಹಿನ್ನಲೆ, ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದು ತನಿಖಾ ತಂಡ ರಚಿಸಲು ಮನವಿ ಮಾಡಿದ್ದಾರೆ, ಒಂದು ವೇಳೆ ತನಿಖಾ ತಂಡ ರಚಿಸಿ, ಕ್ರಮ ವಹಿಸದೇ ಇದ್ದರೆ, ಲೋಕಾಯುಕ್ತ ಹಾಗೂ ಸಿಬಿಐಗೆ ದಾಖಲೆ ಸಮೇತ ದೂರು ನೀಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಜಣ್ಣ, ಸಿವರಾಮ್, ಆನಂದ್ ಕೊಮ್ಮೇರಹಳ್ಳಿ ಇದ್ದರು.

ಆಂದೋಲನ ಡೆಸ್ಕ್

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

8 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

11 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

12 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

12 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

12 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

12 hours ago