ಮಂಡ್ಯ

ಮಂಡ್ಯ | ಜಲ್-ಜೀವನ್‌ ಕಾಮಗಾರಿಯಲ್ಲಿ ಭಾರಿ ಭ್ರಷ್ಟಾಚಾರ ಆರೋಪ

ಮಂಡ್ಯ : ಜಿಲ್ಲೆಯಲ್ಲಿ ಜಲ್-ಜೀವನ್ ಮಿಷನ್ ಯೋಜನೆಯಡಿ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಗಳಲ್ಲಿ ಭಾರಿ ಭ್ರಷ್ಟಾಚಾರವೆಸಗಲಾಗುತ್ತಿದ್ದು, ಸಂಬಂಧಿತ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕೋಟ್ಯಾಂತರ ರೂ ಲೂಟಿ ಹೊಡೆಯುತ್ತಿದ್ದಾರೆ ಎಂದು ಕಿರಣ್‌ಕುಮಾರ್ ಆರೋಪಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸದರಿ ಯೋಜನೆ ಜಾರಿಯಾಗುವ ಮುನ್ನವೇ ಜಿಲ್ಲೆಯ ಶೇ95 ರಷ್ಟು ಕುಟುಂಬಗಳಿಗೆ ನಳ ಸಂಪರ್ಕವಿದ್ದರೂ ಶೇ.53ರಷ್ಟು ಮಾತ್ರ ಸಳ ಸಂಪರ್ಕವಿದೆಯೆಂದು ಸುಳ್ಳು ಮಾಹಿತಿ ನೀಡಿ ಸುಮಾರು 1100 ರಿಂದ 1200 ಕೋಟಿ ರೂ ವರೆಗೆ ಹಣ ಮಂಜೂರು ಮಾಡಿಸಿ ಲೂಟಿ ಮಾಡುವ ದಂಧೆ ಮಾಡಲಾಗುತ್ತಿದೆ ಎಂದು ದೂರಿದರು.

ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಮನಸೋ ಇಚ್ಛೆ ಅಂದಾಜು ಪಟ್ಟಿ ತಯಾರಿಸಿ 46 ಪಂಚಾಯಿತಿಗಳ ಪೈಕಿ ಇರುವ 175 ಜನವಸತಿ ಪ್ರದೇಶಗಳಿಗೆ 287 ಕಾಮಗಾರಿಗಳನ್ನು ದಾಖಲಿಸಿಕೊಂಡಿದ್ದು, ಇದುವರೆಗೆ ಯಾವುದೇ ರೀತಿ ಜಿಎಸ್‌ಟಿ ಕಡಿತ ಮಾಡಲಾಗದೆ ಗುತ್ತಿಗೆದಾರರಿಗೆ ಹಣ ಪಾವತಿ ಮಾಡಲಾಗಿದೆ ಎಂದು ದೂರಿದರು.

ನಳ ಸಂಪರ್ಕ ಇಲ್ಲದ ಮಾಹಿತಿ ಯಾವ ಅಧಿಕಾರಿಗಳ ಬಳಿಯೂ ಇಲ್ಲವಾಗಿದ್ದು, ಬೇಡಿಕೆಗೆ ಅನುಗುಣವಾಗಿ ಅಂದಾಜು ಪಟ್ಟಿ ಮಾಡಿರುವುದಿಲ್ಲ, ಮೂರನೇ ವ್ಯಕ್ತಿ ತಪಾಸಣೆ ಸಂಸ್ಥೆಯು ಗ್ರಾಮಗಳಿಗೆ ಭೇಟಿ ನೀಡಿ ಸಮೀಕ್ಷೆ ಮಾಡದೇ ಏಕಾಏಕಿ ವರದಿ ನೀಡಿದ್ದು, ಸದರಿ ಸಮೀಕ್ಷೆಗೆ 20 ಕೋಟಿ ರೂ.ಗಿಂತಲು ಹೆಚ್ಚು ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಿದ್ದಾರೆ ಎಂದು ಹೇಳಿದರು.

ಗುತ್ತಿಗೆದಾರರು ಕಾಮಗಾರಿ ಮಾಡದೇ ಅರ್ಹತೆ ಇಲ್ಲದವರಿಗೆ ಮತ್ತು ರಾಜಕಾರಣಿಗಳ ಹಿಂಬಾಲಕರಿಗೆ ಅಲ್ಲದೇ ಸ್ವತಃ ಇಂಜಿನಿಯರ್‌ಗಳೇ ಉಪಗುತ್ತಿಗೆ ಪಡೆದು ಕೆಲಸ ಮಾಡಿಸುವ ಮೂಲಕ ಕಳಪೆ ಕಾಮಗಾರಿ, ಕಮಿಷನ್ ದಂಧೆ ನಡೆಯಲು ಕಾರಣವಾಗಿದ್ದು, ಸಮರ್ಪಕವಾಗಿ ಯೋಜನೆಯ ಅನುಷ್ಠಾನ ಮಾಡಲಾಗುತ್ತಿಲ್ಲವೆಂದು ಗಂಭೀರ ಆರೋಪ ಮಾಡಿದರು.

ಈ ಸಂಬಂಧ ಜಿಲ್ಲಾ ಪಂಚಾಯಿತಿ ಸಿಇಓ ಅವರಿಗೆ ದೂರಿದ ಹಿನ್ನಲೆ, ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದು ತನಿಖಾ ತಂಡ ರಚಿಸಲು ಮನವಿ ಮಾಡಿದ್ದಾರೆ, ಒಂದು ವೇಳೆ ತನಿಖಾ ತಂಡ ರಚಿಸಿ, ಕ್ರಮ ವಹಿಸದೇ ಇದ್ದರೆ, ಲೋಕಾಯುಕ್ತ ಹಾಗೂ ಸಿಬಿಐಗೆ ದಾಖಲೆ ಸಮೇತ ದೂರು ನೀಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಜಣ್ಣ, ಸಿವರಾಮ್, ಆನಂದ್ ಕೊಮ್ಮೇರಹಳ್ಳಿ ಇದ್ದರು.

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

1 hour ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

1 hour ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

2 hours ago