ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಜೋರಾಗಿರುವ ಹಿನ್ನಲೆ ನದಿಪಾತ್ರದಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯ ಬಹುತೇಕ ಭರ್ತಿಯತ್ತ ತಲುಪಿದೆ. ಜಲಾಶಯದ ಭರ್ತಿಗೆ ಇನ್ನು ಎರಡು ಅಡಿ ಅಷ್ಟೇ ಬಾಕಿಯಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ.
ಜಲಾಶಯದಿಂದ ನದಿಗೆ ೨೫ ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಡ್ಯಾಂ ಬಹುತೇಕ ಭರ್ತಿಯಾಗಿರುವ ಹಿನ್ನೆಲೆ ಹೊರ ಹರಿವು ಹೆಚ್ಚಿಸಲಾಗಿದೆ. ಸದ್ಯ ಡ್ಯಾಂ ಒಳಹರಿವು ಹೆಚ್ಚಳವಾಗಿದೆ. ಡ್ಯಾಂನಲ್ಲಿ ಒಳಹರಿವು ೬೯೬೧೭ ಕ್ಯೂಸೆಕ್ ಏರಿಕೆಯಾಗಿತ್ತು. ನಿನ್ನೆ ೫೧ ಸಾವಿರ ಕ್ಯೂಸೆಕ್ ಒಳಹರಿವು ಇತ್ತು. ಈಗಾಗಲೇ ೧೨೪.೮೦ ಅಡಿ ಗರಿಷ್ಠ ಸಾಮರ್ಥ್ಯವಿರುವ ಜಲಾಶಯದಲ್ಲಿ ೧೨೨.೭೦ ಅಡಿ ಭರ್ತಿಯಾಗಿದೆ. ಮಧ್ಯಾಹ್ನದ ವೇಳೆಗೆ ಹೊರಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಿಸುವ ಸಾಧ್ಯತೆ ಇದೆ.
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…