ಮಂಡ್ಯ

KRS ಭರ್ತಿಗೆ ಕ್ಷಣಗಣನೆ: ಜುಲೈ 27ರಂದು ಬಾಗಿನ ಸಮರ್ಪಣೆ

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಭರ್ತಿಗೆ ದಿನಗಣನೆ ಆರಂಭವಾಗಿದ್ದು, ಇನ್ನು ಎರಡು ಮೂರು ದಿನಗಳಲ್ಲಿ ಡ್ಯಾಮ್‌ ತನ್ನಗರಿಷ್ಠ ಮಟ್ಟ 124 ಅಡಿ ತಲುಪಲಿದೆ.

124 ಅಡಿ ಎತ್ತರದ ಜಲಾಶಯದಲ್ಲಿ ಈಗ 122 ಅಡಿ ನೀರು ಸಂಗ್ರಹವಾಗಿದ್ದು, 69,617 ಕ್ಯೂಸೆಕ್‌ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ.

ಜಲಾಶಯ ಭರ್ತಿಯಾಗುತ್ತಿರುವ ಹಿನ್ನೆಲೆ ನಾಳೆ ಅಂದರೆ ಜುಲೈ 22 ರಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್‌ ಚಲುವರಾಯಸ್ವಾಮಿ ಕೆಆರ್‌ಎಸ್‌ ವಿಕ್ಷಣೆ ಮಾಡಲಿದ್ದಾರೆ.

ಕಳೆದ ಬಾರಿ ಮಳೆಯಿಲ್ಲದೆ ಕೆಆರ್‌ಎಸ್‌ ತುಂಬದೆ ಕಾವೇರಿಗೆ ಭಾಗಿನ ಅರ್ಪಿಸಿರಲಿಲ್ಲ. ಆದರೆ ಈ ಬಾರಿ ಡ್ಯಾಮ್‌ ಹಲ್ನೋರೆಯಂತೆ ಉಕ್ಕುತ್ತಿದ್ದು, ಭರ್ತಿಗೆ ಕೇವಲ ಇನ್ನು 2 ಅಡಿ ಬಾಕಿ ಮಾತ್ರ ಉಳಿದಿದೆ. ಹೀಗಾಗಿ ಜುಲೈ27 ರಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಸಂಸದರು ಹಾಗೂ ಶಾಸಕರು ಕಾವೇರಿ ನದಿಗೆ ಬಾಗಿನ ಅರ್ಪಿಸಲಿದ್ದಾರೆ.

ಕೆಆರ್‌ಎಸ್‌ ಡ್ಯಾಮ್‌ನ ಒಳ ಹರಿವಿನ ಪ್ರಮಾಣ ನೋಡಿಕೊಂಡು ಹೊರಹರಿವು ಹೆಚ್ಚು ಮಾಡಲು ಕಾವೇರಿ ನಿರಾವರಿ ನಿಗಮ ನಿರ್ಧಾರ ಮಾಡಿದ್ದು, ಇಂದು ಮತ್ತೆ 50ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಹರಿಬಿಡಲಾಗಿದೆ. ಈ ಹಿನ್ನೆಲೆ ಕಾವೇರಿ ಕೊಳ್ಳದ ಜಲಪಾತಗಳು ಭೋರ್ಗರೆಯುತ್ತಿವೆ.

ಕಾವೇರಿ ನದಿ ಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ ಸಂದೇಶವನ್ನು ಜಿಲ್ಲಾಡಳಿತ ರವಾನಿಸಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಆಗುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ತಗ್ಗು ಪ್ರದೇಶಗದ ಜನರು ಮುಂಜಾಗ್ರತಾ ಕ್ರಮವಾಗಿ ಜನಜಾನುವಾರುಗಳು ನದಿಗೆ ಇಳಿಸದಂತೆ ಆದೇಶ ನೀಡಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…

60 mins ago

ಮೈಸೂರಿನಲ್ಲಿ ನಾಳೆ ಇಂದ ಮೂರು ದಿನ ದೇಸಿ ಎಣ್ಣೆ ಮೇಳ : ಮೇಳೈಸಲಿದೆ ಸಾಂಪ್ರದಾಯಿಕ ಎಣ್ಣೆ

ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…

3 hours ago

ಬಿ-ಖಾತಾಗಳಿಗೂ ʼಎ-ಖಾತಾʼ ಭಾಗ್ಯ ; ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…

4 hours ago

ಮಂಡ್ಯದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ : ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಕೆತ್ತನೆ ಜವಾಬ್ದಾರಿ

ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…

4 hours ago

ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಚಿಂತನೆ : ಸಂಸದ ಯದುವೀರ್‌

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…

5 hours ago

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…

5 hours ago