ಮಂಡ್ಯ: ರೈತರ ಜೀವನಾಡಿ ಕೆಆರ್ಎಸ್ ಭರ್ತಿಗೆ ದಿನಗಣನೆ ಆರಂಭವಾಗಿದ್ದು, ಇನ್ನು ಎರಡು ಮೂರು ದಿನಗಳಲ್ಲಿ ಡ್ಯಾಮ್ ತನ್ನಗರಿಷ್ಠ ಮಟ್ಟ 124 ಅಡಿ ತಲುಪಲಿದೆ.
124 ಅಡಿ ಎತ್ತರದ ಜಲಾಶಯದಲ್ಲಿ ಈಗ 122 ಅಡಿ ನೀರು ಸಂಗ್ರಹವಾಗಿದ್ದು, 69,617 ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ.
ಜಲಾಶಯ ಭರ್ತಿಯಾಗುತ್ತಿರುವ ಹಿನ್ನೆಲೆ ನಾಳೆ ಅಂದರೆ ಜುಲೈ 22 ರಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಕೆಆರ್ಎಸ್ ವಿಕ್ಷಣೆ ಮಾಡಲಿದ್ದಾರೆ.
ಕಳೆದ ಬಾರಿ ಮಳೆಯಿಲ್ಲದೆ ಕೆಆರ್ಎಸ್ ತುಂಬದೆ ಕಾವೇರಿಗೆ ಭಾಗಿನ ಅರ್ಪಿಸಿರಲಿಲ್ಲ. ಆದರೆ ಈ ಬಾರಿ ಡ್ಯಾಮ್ ಹಲ್ನೋರೆಯಂತೆ ಉಕ್ಕುತ್ತಿದ್ದು, ಭರ್ತಿಗೆ ಕೇವಲ ಇನ್ನು 2 ಅಡಿ ಬಾಕಿ ಮಾತ್ರ ಉಳಿದಿದೆ. ಹೀಗಾಗಿ ಜುಲೈ27 ರಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಸಂಸದರು ಹಾಗೂ ಶಾಸಕರು ಕಾವೇರಿ ನದಿಗೆ ಬಾಗಿನ ಅರ್ಪಿಸಲಿದ್ದಾರೆ.
ಕೆಆರ್ಎಸ್ ಡ್ಯಾಮ್ನ ಒಳ ಹರಿವಿನ ಪ್ರಮಾಣ ನೋಡಿಕೊಂಡು ಹೊರಹರಿವು ಹೆಚ್ಚು ಮಾಡಲು ಕಾವೇರಿ ನಿರಾವರಿ ನಿಗಮ ನಿರ್ಧಾರ ಮಾಡಿದ್ದು, ಇಂದು ಮತ್ತೆ 50ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ. ಈ ಹಿನ್ನೆಲೆ ಕಾವೇರಿ ಕೊಳ್ಳದ ಜಲಪಾತಗಳು ಭೋರ್ಗರೆಯುತ್ತಿವೆ.
ಕಾವೇರಿ ನದಿ ಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ ಸಂದೇಶವನ್ನು ಜಿಲ್ಲಾಡಳಿತ ರವಾನಿಸಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಆಗುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ತಗ್ಗು ಪ್ರದೇಶಗದ ಜನರು ಮುಂಜಾಗ್ರತಾ ಕ್ರಮವಾಗಿ ಜನಜಾನುವಾರುಗಳು ನದಿಗೆ ಇಳಿಸದಂತೆ ಆದೇಶ ನೀಡಲಾಗಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…