ಮಂಡ್ಯ

ಮತ ಎಣಿಕೆ: ಲೋಪವಾಗದಂತೆ ಎಚ್ಚರವಹಿಸಲು ಜಿಲ್ಲಾ ಚುನಾವಣಾಧಿಕಾರಿ ಸೂಚನೆ

 ಮಂಡ್ಯ :  ಮಂಡ್ಯ  ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯವು ಮಂಡ್ಯ ವಿಶ್ವವಿದ್ಯಾಲಯದ ಕಟ್ಟಡದಲ್ಲಿ ಜೂನ್ 4 ರಂದು ನಡೆಯಲಿದೆ.  ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಗೆ ಕ್ರಮಗಳನ್ನು ವಹಿಸಬೇಕು ಎಂದು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ ಹೇಳಿದರು.

ಇಂದು(ಮೇ.೨೩) ನಗರದ ಅಂಬೇಡ್ಕರ್ ಭವನದಲ್ಲಿ ಲೋಕಸಭಾ  ಸಾರ್ವತ್ರಿಕ ಚುನಾವಣೆ 2024 ರ ಇವಿಎಂ ಮತ ಎಣಿಕೆ ಸಿಬ್ಬಂದಿಗಳಿಗೆ ಆಯೋಜಿಸಲಾದ ಚುನಾವಣಾ ತರಬೇತಿಯಲ್ಲಿ ಮಾತನಾಡಿದರು.

ಚುನಾವಣೆಯಲ್ಲಿ ಮತದಾನ ಕಾರ್ಯಗಳಿಗೆ ಸಂಬಂಧಿಸಿದಂತೆ ನೇಮಕಗೊಂಡಿದ್ದ ಸೆಕ್ಟರ್ ಅಧಿಕಾರಿಗಳು, ಎಆರ್ ಒ ಗಳು, ಪಿಆರ್ ಒಗಳು, ಮಾಸ್ಟರ್ ಟ್ರೇನರ್ ಗಳನ್ನೇ ಮತ ಎಣಿಕೆ ಸಿಬ್ಬಂದಿಗಳಾಗಿ ನೇಮಕ ಮಾಡಲಾಗಿದೆ. ಎಲ್ಲಾ ಮತ ಎಣಿಕೆ ಸಿಬ್ಬಂದಿಗಳಿಗೂ ಇವಿಎಂ ಬಳಕೆಯ ಅನುಭವವಿರುವುದರಿಂದ ಧೈರ್ಯ ಹಾಗೂ ಆತ್ಮ ವಿಶ್ವಾಸದಿಂದ ಕಾರ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.

ಮತ ಎಣಿಕೆಯ ದಿನ ಎಲ್ಲಾ ಸಿಬ್ಬಂದಿಗಳು ನಿಗದಿಪಡಿಸುವ ಸಮಯಕ್ಕೆ ಹಾಜರಿರಬೇಕು. ಮತ ಎಣಿಕೆ ಕೊಠಡಿಗೆ ಮೊಬೈಲ್ ಸಂಪೂರ್ಣವಾಗಿ ನಿಷೇಧಸಲಾಗಿದೆ. ಪ್ರತಿಯೊಂದು ಟೇಬಲ್ ಗಳ ಮೇಲೂ ಸಿ‌ಸಿ ಕ್ಯಾಮರಾ ಇದ್ದು, ಬಹಳ ಜಾಗರೂಕತೆಯಿಂದ ಮತ ಎಣಿಕೆ ನಡೆಸಿ ಎಂದರು.

ಮತ ಎಣಿಕೆಯ ಸಂದರ್ಭದಲ್ಲಿ ಇ.ವಿ.ಎಂ. ಗೆ ಸಂಬಂಧಿಸಿದಂತೆ ತಾಂತ್ರಿಕಾ ದೋಷ ಕಂಡು ಬಂದರೆ  ಅಥವಾ  ಕ್ಲೋಸ್ ಬಟನ್ ಉಪಯೋಗಿಸಿದರೂ ಕ್ಲೋಸ್ ಮಾಡದ ಪ್ರಕರಣ ಕಂಡು ಬಂದರೆ ಅಂತಹ ಸಂದರ್ಭದಲ್ಲಿ ಚುನಾವಣಾ ಆಯೋಗ ಸೂಚಿಸಿರುವ ನಿರ್ದೇಶನದಂತೆ  ಕ್ರಮಗಳನ್ನು ಅನುಸರಿಸಬೇಕು. ಸಮಸ್ಯೆ ಎದುರಾದಾಗ  ಸಹಾಯಕ ಚುನಾವಣಾಧಿಕಾರಿಗಳ ಬಳಿ ಪರಿಹಾರ ಕೇಳಿದರಾಯಿತು ಎನ್ನುವ ಮನೋಭಾವ ಬೇಡ ಎಂದರು.

ಮತ ಎಣಿಕೆಗೆ ಸಂಬಂಧಿಸಿದಂತೆ ನಿಯೋಜಿಸಲಾಗುವ ಎಜೆಂಟ್ ಗಳ  ಬಳಿ ಶಾಂತವಾಗಿ ವರ್ತಿಸಿ, ಅವರಿಗೆ ಸಂಶಯಗಳಿದ್ದಲ್ಲಿ ಅವುಗಳನ್ನು ಪರಿಹರಿಸಿ ಎಂದು ಹೇಳಿದರು.

ಮತ ಎಣಿಕೆ ಮೇಲ್ವಿಚಾರಕರ ಜವಾಬ್ದಾರಿಯು ಬಹಳ ಮುಖ್ಯವಾಗಿದ್ದು, ಮೇಲ್ವಿಚಾರಕರು ಪ್ರತಿ ಇ.ವಿ.ಎಂ ಗಳಲ್ಲಿ ಎಣಿಕೆಯಾದ ತಕ್ಷಣ ನಿಖರವಾಗಿ ಅಂಕಿಆಂಶಗಳನ್ನು ಬರೆದುಕೊಳ್ಳಬೇಕು. ಇದರಲ್ಲಿ ತಪ್ಪಾದರೆ ಎಣಿಕೆ ಕೆಲಸಗಳು ಕಷ್ಟಕರವಾಗುತ್ತದೆ. ಆದರಿಂದ ತರಬೇತಿಯ ಅವಧಿಯಲ್ಲಿ ಸ್ಪಷ್ಟವಾದ ಮಾಹಿತಿ ಹಾಗೂ ಮಾರ್ಗದರ್ಶನ ಪಡೆಯಿರಿ. ಯಾವುದೇ ಗೊಂದಲವಿದ್ದರೂ ಇಲ್ಲಿಯೇ ಬಗೆಹರಿಸಿಕೊಳ್ಳಿ ಎಂದು ನಿರ್ದೇಶಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ ಎಚ್. ಎಲ್ ನಾಗರಾಜು, ಸಹಾಯಕ ಚುನಾವಣಾಧಿಕಾರಿ ಮಹೇಶ್, ಆನಂದ್ ಕುಮಾರ್ , ಕೃಷ್ಣ ಕುಮಾರ್, ಲೋಕನಾಥ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ…

7 mins ago

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

2 hours ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

2 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

3 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

4 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago