ಮಂಡ್ಯ

ಮತ ಎಣಿಕೆ: ಲೋಪವಾಗದಂತೆ ಎಚ್ಚರವಹಿಸಲು ಜಿಲ್ಲಾ ಚುನಾವಣಾಧಿಕಾರಿ ಸೂಚನೆ

 ಮಂಡ್ಯ :  ಮಂಡ್ಯ  ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯವು ಮಂಡ್ಯ ವಿಶ್ವವಿದ್ಯಾಲಯದ ಕಟ್ಟಡದಲ್ಲಿ ಜೂನ್ 4 ರಂದು ನಡೆಯಲಿದೆ.  ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಗೆ ಕ್ರಮಗಳನ್ನು ವಹಿಸಬೇಕು ಎಂದು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ ಹೇಳಿದರು.

ಇಂದು(ಮೇ.೨೩) ನಗರದ ಅಂಬೇಡ್ಕರ್ ಭವನದಲ್ಲಿ ಲೋಕಸಭಾ  ಸಾರ್ವತ್ರಿಕ ಚುನಾವಣೆ 2024 ರ ಇವಿಎಂ ಮತ ಎಣಿಕೆ ಸಿಬ್ಬಂದಿಗಳಿಗೆ ಆಯೋಜಿಸಲಾದ ಚುನಾವಣಾ ತರಬೇತಿಯಲ್ಲಿ ಮಾತನಾಡಿದರು.

ಚುನಾವಣೆಯಲ್ಲಿ ಮತದಾನ ಕಾರ್ಯಗಳಿಗೆ ಸಂಬಂಧಿಸಿದಂತೆ ನೇಮಕಗೊಂಡಿದ್ದ ಸೆಕ್ಟರ್ ಅಧಿಕಾರಿಗಳು, ಎಆರ್ ಒ ಗಳು, ಪಿಆರ್ ಒಗಳು, ಮಾಸ್ಟರ್ ಟ್ರೇನರ್ ಗಳನ್ನೇ ಮತ ಎಣಿಕೆ ಸಿಬ್ಬಂದಿಗಳಾಗಿ ನೇಮಕ ಮಾಡಲಾಗಿದೆ. ಎಲ್ಲಾ ಮತ ಎಣಿಕೆ ಸಿಬ್ಬಂದಿಗಳಿಗೂ ಇವಿಎಂ ಬಳಕೆಯ ಅನುಭವವಿರುವುದರಿಂದ ಧೈರ್ಯ ಹಾಗೂ ಆತ್ಮ ವಿಶ್ವಾಸದಿಂದ ಕಾರ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.

ಮತ ಎಣಿಕೆಯ ದಿನ ಎಲ್ಲಾ ಸಿಬ್ಬಂದಿಗಳು ನಿಗದಿಪಡಿಸುವ ಸಮಯಕ್ಕೆ ಹಾಜರಿರಬೇಕು. ಮತ ಎಣಿಕೆ ಕೊಠಡಿಗೆ ಮೊಬೈಲ್ ಸಂಪೂರ್ಣವಾಗಿ ನಿಷೇಧಸಲಾಗಿದೆ. ಪ್ರತಿಯೊಂದು ಟೇಬಲ್ ಗಳ ಮೇಲೂ ಸಿ‌ಸಿ ಕ್ಯಾಮರಾ ಇದ್ದು, ಬಹಳ ಜಾಗರೂಕತೆಯಿಂದ ಮತ ಎಣಿಕೆ ನಡೆಸಿ ಎಂದರು.

ಮತ ಎಣಿಕೆಯ ಸಂದರ್ಭದಲ್ಲಿ ಇ.ವಿ.ಎಂ. ಗೆ ಸಂಬಂಧಿಸಿದಂತೆ ತಾಂತ್ರಿಕಾ ದೋಷ ಕಂಡು ಬಂದರೆ  ಅಥವಾ  ಕ್ಲೋಸ್ ಬಟನ್ ಉಪಯೋಗಿಸಿದರೂ ಕ್ಲೋಸ್ ಮಾಡದ ಪ್ರಕರಣ ಕಂಡು ಬಂದರೆ ಅಂತಹ ಸಂದರ್ಭದಲ್ಲಿ ಚುನಾವಣಾ ಆಯೋಗ ಸೂಚಿಸಿರುವ ನಿರ್ದೇಶನದಂತೆ  ಕ್ರಮಗಳನ್ನು ಅನುಸರಿಸಬೇಕು. ಸಮಸ್ಯೆ ಎದುರಾದಾಗ  ಸಹಾಯಕ ಚುನಾವಣಾಧಿಕಾರಿಗಳ ಬಳಿ ಪರಿಹಾರ ಕೇಳಿದರಾಯಿತು ಎನ್ನುವ ಮನೋಭಾವ ಬೇಡ ಎಂದರು.

ಮತ ಎಣಿಕೆಗೆ ಸಂಬಂಧಿಸಿದಂತೆ ನಿಯೋಜಿಸಲಾಗುವ ಎಜೆಂಟ್ ಗಳ  ಬಳಿ ಶಾಂತವಾಗಿ ವರ್ತಿಸಿ, ಅವರಿಗೆ ಸಂಶಯಗಳಿದ್ದಲ್ಲಿ ಅವುಗಳನ್ನು ಪರಿಹರಿಸಿ ಎಂದು ಹೇಳಿದರು.

ಮತ ಎಣಿಕೆ ಮೇಲ್ವಿಚಾರಕರ ಜವಾಬ್ದಾರಿಯು ಬಹಳ ಮುಖ್ಯವಾಗಿದ್ದು, ಮೇಲ್ವಿಚಾರಕರು ಪ್ರತಿ ಇ.ವಿ.ಎಂ ಗಳಲ್ಲಿ ಎಣಿಕೆಯಾದ ತಕ್ಷಣ ನಿಖರವಾಗಿ ಅಂಕಿಆಂಶಗಳನ್ನು ಬರೆದುಕೊಳ್ಳಬೇಕು. ಇದರಲ್ಲಿ ತಪ್ಪಾದರೆ ಎಣಿಕೆ ಕೆಲಸಗಳು ಕಷ್ಟಕರವಾಗುತ್ತದೆ. ಆದರಿಂದ ತರಬೇತಿಯ ಅವಧಿಯಲ್ಲಿ ಸ್ಪಷ್ಟವಾದ ಮಾಹಿತಿ ಹಾಗೂ ಮಾರ್ಗದರ್ಶನ ಪಡೆಯಿರಿ. ಯಾವುದೇ ಗೊಂದಲವಿದ್ದರೂ ಇಲ್ಲಿಯೇ ಬಗೆಹರಿಸಿಕೊಳ್ಳಿ ಎಂದು ನಿರ್ದೇಶಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ ಎಚ್. ಎಲ್ ನಾಗರಾಜು, ಸಹಾಯಕ ಚುನಾವಣಾಧಿಕಾರಿ ಮಹೇಶ್, ಆನಂದ್ ಕುಮಾರ್ , ಕೃಷ್ಣ ಕುಮಾರ್, ಲೋಕನಾಥ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago