ಮಂಡ್ಯ

ಮತ ಎಣಿಕೆ: ಲೋಪವಾಗದಂತೆ ಎಚ್ಚರವಹಿಸಲು ಜಿಲ್ಲಾ ಚುನಾವಣಾಧಿಕಾರಿ ಸೂಚನೆ

 ಮಂಡ್ಯ :  ಮಂಡ್ಯ  ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯವು ಮಂಡ್ಯ ವಿಶ್ವವಿದ್ಯಾಲಯದ ಕಟ್ಟಡದಲ್ಲಿ ಜೂನ್ 4 ರಂದು ನಡೆಯಲಿದೆ.  ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಗೆ ಕ್ರಮಗಳನ್ನು ವಹಿಸಬೇಕು ಎಂದು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ ಹೇಳಿದರು.

ಇಂದು(ಮೇ.೨೩) ನಗರದ ಅಂಬೇಡ್ಕರ್ ಭವನದಲ್ಲಿ ಲೋಕಸಭಾ  ಸಾರ್ವತ್ರಿಕ ಚುನಾವಣೆ 2024 ರ ಇವಿಎಂ ಮತ ಎಣಿಕೆ ಸಿಬ್ಬಂದಿಗಳಿಗೆ ಆಯೋಜಿಸಲಾದ ಚುನಾವಣಾ ತರಬೇತಿಯಲ್ಲಿ ಮಾತನಾಡಿದರು.

ಚುನಾವಣೆಯಲ್ಲಿ ಮತದಾನ ಕಾರ್ಯಗಳಿಗೆ ಸಂಬಂಧಿಸಿದಂತೆ ನೇಮಕಗೊಂಡಿದ್ದ ಸೆಕ್ಟರ್ ಅಧಿಕಾರಿಗಳು, ಎಆರ್ ಒ ಗಳು, ಪಿಆರ್ ಒಗಳು, ಮಾಸ್ಟರ್ ಟ್ರೇನರ್ ಗಳನ್ನೇ ಮತ ಎಣಿಕೆ ಸಿಬ್ಬಂದಿಗಳಾಗಿ ನೇಮಕ ಮಾಡಲಾಗಿದೆ. ಎಲ್ಲಾ ಮತ ಎಣಿಕೆ ಸಿಬ್ಬಂದಿಗಳಿಗೂ ಇವಿಎಂ ಬಳಕೆಯ ಅನುಭವವಿರುವುದರಿಂದ ಧೈರ್ಯ ಹಾಗೂ ಆತ್ಮ ವಿಶ್ವಾಸದಿಂದ ಕಾರ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.

ಮತ ಎಣಿಕೆಯ ದಿನ ಎಲ್ಲಾ ಸಿಬ್ಬಂದಿಗಳು ನಿಗದಿಪಡಿಸುವ ಸಮಯಕ್ಕೆ ಹಾಜರಿರಬೇಕು. ಮತ ಎಣಿಕೆ ಕೊಠಡಿಗೆ ಮೊಬೈಲ್ ಸಂಪೂರ್ಣವಾಗಿ ನಿಷೇಧಸಲಾಗಿದೆ. ಪ್ರತಿಯೊಂದು ಟೇಬಲ್ ಗಳ ಮೇಲೂ ಸಿ‌ಸಿ ಕ್ಯಾಮರಾ ಇದ್ದು, ಬಹಳ ಜಾಗರೂಕತೆಯಿಂದ ಮತ ಎಣಿಕೆ ನಡೆಸಿ ಎಂದರು.

ಮತ ಎಣಿಕೆಯ ಸಂದರ್ಭದಲ್ಲಿ ಇ.ವಿ.ಎಂ. ಗೆ ಸಂಬಂಧಿಸಿದಂತೆ ತಾಂತ್ರಿಕಾ ದೋಷ ಕಂಡು ಬಂದರೆ  ಅಥವಾ  ಕ್ಲೋಸ್ ಬಟನ್ ಉಪಯೋಗಿಸಿದರೂ ಕ್ಲೋಸ್ ಮಾಡದ ಪ್ರಕರಣ ಕಂಡು ಬಂದರೆ ಅಂತಹ ಸಂದರ್ಭದಲ್ಲಿ ಚುನಾವಣಾ ಆಯೋಗ ಸೂಚಿಸಿರುವ ನಿರ್ದೇಶನದಂತೆ  ಕ್ರಮಗಳನ್ನು ಅನುಸರಿಸಬೇಕು. ಸಮಸ್ಯೆ ಎದುರಾದಾಗ  ಸಹಾಯಕ ಚುನಾವಣಾಧಿಕಾರಿಗಳ ಬಳಿ ಪರಿಹಾರ ಕೇಳಿದರಾಯಿತು ಎನ್ನುವ ಮನೋಭಾವ ಬೇಡ ಎಂದರು.

ಮತ ಎಣಿಕೆಗೆ ಸಂಬಂಧಿಸಿದಂತೆ ನಿಯೋಜಿಸಲಾಗುವ ಎಜೆಂಟ್ ಗಳ  ಬಳಿ ಶಾಂತವಾಗಿ ವರ್ತಿಸಿ, ಅವರಿಗೆ ಸಂಶಯಗಳಿದ್ದಲ್ಲಿ ಅವುಗಳನ್ನು ಪರಿಹರಿಸಿ ಎಂದು ಹೇಳಿದರು.

ಮತ ಎಣಿಕೆ ಮೇಲ್ವಿಚಾರಕರ ಜವಾಬ್ದಾರಿಯು ಬಹಳ ಮುಖ್ಯವಾಗಿದ್ದು, ಮೇಲ್ವಿಚಾರಕರು ಪ್ರತಿ ಇ.ವಿ.ಎಂ ಗಳಲ್ಲಿ ಎಣಿಕೆಯಾದ ತಕ್ಷಣ ನಿಖರವಾಗಿ ಅಂಕಿಆಂಶಗಳನ್ನು ಬರೆದುಕೊಳ್ಳಬೇಕು. ಇದರಲ್ಲಿ ತಪ್ಪಾದರೆ ಎಣಿಕೆ ಕೆಲಸಗಳು ಕಷ್ಟಕರವಾಗುತ್ತದೆ. ಆದರಿಂದ ತರಬೇತಿಯ ಅವಧಿಯಲ್ಲಿ ಸ್ಪಷ್ಟವಾದ ಮಾಹಿತಿ ಹಾಗೂ ಮಾರ್ಗದರ್ಶನ ಪಡೆಯಿರಿ. ಯಾವುದೇ ಗೊಂದಲವಿದ್ದರೂ ಇಲ್ಲಿಯೇ ಬಗೆಹರಿಸಿಕೊಳ್ಳಿ ಎಂದು ನಿರ್ದೇಶಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ ಎಚ್. ಎಲ್ ನಾಗರಾಜು, ಸಹಾಯಕ ಚುನಾವಣಾಧಿಕಾರಿ ಮಹೇಶ್, ಆನಂದ್ ಕುಮಾರ್ , ಕೃಷ್ಣ ಕುಮಾರ್, ಲೋಕನಾಥ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

1 hour ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

1 hour ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

1 hour ago

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

4 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

4 hours ago