ಮಂಡ್ಯ

ಮತ ಎಣಿಕೆ: ಲೋಪವಾಗದಂತೆ ಎಚ್ಚರವಹಿಸಲು ಜಿಲ್ಲಾ ಚುನಾವಣಾಧಿಕಾರಿ ಸೂಚನೆ

 ಮಂಡ್ಯ :  ಮಂಡ್ಯ  ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯವು ಮಂಡ್ಯ ವಿಶ್ವವಿದ್ಯಾಲಯದ ಕಟ್ಟಡದಲ್ಲಿ ಜೂನ್ 4 ರಂದು ನಡೆಯಲಿದೆ.  ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಗೆ ಕ್ರಮಗಳನ್ನು ವಹಿಸಬೇಕು ಎಂದು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ ಹೇಳಿದರು.

ಇಂದು(ಮೇ.೨೩) ನಗರದ ಅಂಬೇಡ್ಕರ್ ಭವನದಲ್ಲಿ ಲೋಕಸಭಾ  ಸಾರ್ವತ್ರಿಕ ಚುನಾವಣೆ 2024 ರ ಇವಿಎಂ ಮತ ಎಣಿಕೆ ಸಿಬ್ಬಂದಿಗಳಿಗೆ ಆಯೋಜಿಸಲಾದ ಚುನಾವಣಾ ತರಬೇತಿಯಲ್ಲಿ ಮಾತನಾಡಿದರು.

ಚುನಾವಣೆಯಲ್ಲಿ ಮತದಾನ ಕಾರ್ಯಗಳಿಗೆ ಸಂಬಂಧಿಸಿದಂತೆ ನೇಮಕಗೊಂಡಿದ್ದ ಸೆಕ್ಟರ್ ಅಧಿಕಾರಿಗಳು, ಎಆರ್ ಒ ಗಳು, ಪಿಆರ್ ಒಗಳು, ಮಾಸ್ಟರ್ ಟ್ರೇನರ್ ಗಳನ್ನೇ ಮತ ಎಣಿಕೆ ಸಿಬ್ಬಂದಿಗಳಾಗಿ ನೇಮಕ ಮಾಡಲಾಗಿದೆ. ಎಲ್ಲಾ ಮತ ಎಣಿಕೆ ಸಿಬ್ಬಂದಿಗಳಿಗೂ ಇವಿಎಂ ಬಳಕೆಯ ಅನುಭವವಿರುವುದರಿಂದ ಧೈರ್ಯ ಹಾಗೂ ಆತ್ಮ ವಿಶ್ವಾಸದಿಂದ ಕಾರ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.

ಮತ ಎಣಿಕೆಯ ದಿನ ಎಲ್ಲಾ ಸಿಬ್ಬಂದಿಗಳು ನಿಗದಿಪಡಿಸುವ ಸಮಯಕ್ಕೆ ಹಾಜರಿರಬೇಕು. ಮತ ಎಣಿಕೆ ಕೊಠಡಿಗೆ ಮೊಬೈಲ್ ಸಂಪೂರ್ಣವಾಗಿ ನಿಷೇಧಸಲಾಗಿದೆ. ಪ್ರತಿಯೊಂದು ಟೇಬಲ್ ಗಳ ಮೇಲೂ ಸಿ‌ಸಿ ಕ್ಯಾಮರಾ ಇದ್ದು, ಬಹಳ ಜಾಗರೂಕತೆಯಿಂದ ಮತ ಎಣಿಕೆ ನಡೆಸಿ ಎಂದರು.

ಮತ ಎಣಿಕೆಯ ಸಂದರ್ಭದಲ್ಲಿ ಇ.ವಿ.ಎಂ. ಗೆ ಸಂಬಂಧಿಸಿದಂತೆ ತಾಂತ್ರಿಕಾ ದೋಷ ಕಂಡು ಬಂದರೆ  ಅಥವಾ  ಕ್ಲೋಸ್ ಬಟನ್ ಉಪಯೋಗಿಸಿದರೂ ಕ್ಲೋಸ್ ಮಾಡದ ಪ್ರಕರಣ ಕಂಡು ಬಂದರೆ ಅಂತಹ ಸಂದರ್ಭದಲ್ಲಿ ಚುನಾವಣಾ ಆಯೋಗ ಸೂಚಿಸಿರುವ ನಿರ್ದೇಶನದಂತೆ  ಕ್ರಮಗಳನ್ನು ಅನುಸರಿಸಬೇಕು. ಸಮಸ್ಯೆ ಎದುರಾದಾಗ  ಸಹಾಯಕ ಚುನಾವಣಾಧಿಕಾರಿಗಳ ಬಳಿ ಪರಿಹಾರ ಕೇಳಿದರಾಯಿತು ಎನ್ನುವ ಮನೋಭಾವ ಬೇಡ ಎಂದರು.

ಮತ ಎಣಿಕೆಗೆ ಸಂಬಂಧಿಸಿದಂತೆ ನಿಯೋಜಿಸಲಾಗುವ ಎಜೆಂಟ್ ಗಳ  ಬಳಿ ಶಾಂತವಾಗಿ ವರ್ತಿಸಿ, ಅವರಿಗೆ ಸಂಶಯಗಳಿದ್ದಲ್ಲಿ ಅವುಗಳನ್ನು ಪರಿಹರಿಸಿ ಎಂದು ಹೇಳಿದರು.

ಮತ ಎಣಿಕೆ ಮೇಲ್ವಿಚಾರಕರ ಜವಾಬ್ದಾರಿಯು ಬಹಳ ಮುಖ್ಯವಾಗಿದ್ದು, ಮೇಲ್ವಿಚಾರಕರು ಪ್ರತಿ ಇ.ವಿ.ಎಂ ಗಳಲ್ಲಿ ಎಣಿಕೆಯಾದ ತಕ್ಷಣ ನಿಖರವಾಗಿ ಅಂಕಿಆಂಶಗಳನ್ನು ಬರೆದುಕೊಳ್ಳಬೇಕು. ಇದರಲ್ಲಿ ತಪ್ಪಾದರೆ ಎಣಿಕೆ ಕೆಲಸಗಳು ಕಷ್ಟಕರವಾಗುತ್ತದೆ. ಆದರಿಂದ ತರಬೇತಿಯ ಅವಧಿಯಲ್ಲಿ ಸ್ಪಷ್ಟವಾದ ಮಾಹಿತಿ ಹಾಗೂ ಮಾರ್ಗದರ್ಶನ ಪಡೆಯಿರಿ. ಯಾವುದೇ ಗೊಂದಲವಿದ್ದರೂ ಇಲ್ಲಿಯೇ ಬಗೆಹರಿಸಿಕೊಳ್ಳಿ ಎಂದು ನಿರ್ದೇಶಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ ಎಚ್. ಎಲ್ ನಾಗರಾಜು, ಸಹಾಯಕ ಚುನಾವಣಾಧಿಕಾರಿ ಮಹೇಶ್, ಆನಂದ್ ಕುಮಾರ್ , ಕೃಷ್ಣ ಕುಮಾರ್, ಲೋಕನಾಥ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago