ಮಂಡ್ಯ: ಮತ ಎಣಿಕೆ ದಿನದಂದು ಸಹಾಯಕ ಚುನಾವಣಾಧಿಕಾರಿ, ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು, ಮೈಕ್ರೋ ಅಬ್ಸರ್ವರ್ ಗಳು ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನಿಭಾಯಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ್ ಹೇಳಿದರು.
ಅವರು ಇಂದು ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಇವಿಎಂ-ಅಂಚೆ ಮತ ಏಣಿಕೆ ಸಿಬ್ಬಂದಿ ಗಾಗಿ ನಡೆದ ಚುನಾವಣಾ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಂಚೆ ಮತ ಎಣಿಕೆಯು ಬಹಳ ಮುಖ್ಯವಾಗಿರುವದರಿಂದ ಯಾವುದೇ ಲೋಪದೋಷವಾಗದಂತೆ ಮತ ಎಣಿಕೆಯನ್ನು ಜಾಗರೂಕತೆಯಿಂದ ನಿಭಾಯಿಸಬೇಕು, ಯಾವುದೇ ಗೊಂದಲಮಯ ವಾತಾವರಣ ಸೃಷ್ಟಿ ಆಗದಂತೆ ನೋಡಿಕೊಳ್ಳಬೇಕು ಎಂದರು.
ಮತ ಎಣಿಕೆ ದಿನದಂದು ಮತ ಎಣಿಕೆ ಸಿಬ್ಬಂದಿಗಳು ಸರಿಯಾಗಿ ಬೆಳಿಗ್ಗೆ 7 ಗಂಟೆ ಅಷ್ಟರಲ್ಲಿ ಕಡ್ಡಾಯವಾಗಿ ಎಲ್ಲರೂ ಇರಲೇಬೇಕು ಯಾರು ಕೂಡ ತಡವಾಗಿ ಬರಬಾರದು, ನಿಮಗೆ ನೀಡಿರುವಂತಹ ಗುರುತಿನ ಚೀಟಿಯನ್ನು ಪೊಲೀಸ್ ಅವರಿಗೆ ತೋರಿಸಿ ಒಳಗೆ ಬರಬೇಕು.
ಮತ ಎಣಿಕೆ ದಿನದಂದು ಬೇಕಾದ ಎಲ್ಲಾ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಚುನಾವಣಾ ಆಯೋಗ ನೀಡಿರುವ ಸೂಚನೆಗಳನ್ವಯ ನಿಗದಿತ ಕಾಲಾವಧಿಯಲ್ಲಿ ಯಾವುದೇ ಲೋಪಕ್ಕೆ ಅವಕಾಶ ಕೊಡದೆ ಚುನಾವಣಾ ಮತ ಎಣಿಕೆ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಎಲ್ಲಾ ಇವಿಎಂ-ಅಂಚೆ ಮತ ಏಣಿಕೆ ಸಿಬ್ಬಂದಿಗಳು ಹಾಗೂ ಇವಿಎಂ-ಅಂಚೆ ಮತ ಏಣಿಕೆ ಸಿಬ್ಬಂದಿಗಳಿಗೆ ತರಬೇತಿ ನೀಡಿದಂತಹ ಜಿಲ್ಲಾ ಮಟ್ಟದ ಚುನಾವಣಾ ತರಬೇತಿದಾರ ಹಾಗೂ ಸಹ ಶಿಕ್ಷಕರಾದ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…