ಮಂಡ್ಯ

ಶಿಂಷ ನದಿ ಪಾತ್ರದ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ : ತಹಸೀಲ್ದಾರ್‌ ಪರಶುರಾಮ್‌

ಮದ್ದೂರು : ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಶಿಂಷಾ ನದಿಪಾತ್ರದಲ್ಲಿ ದಿನನಿತ್ಯ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿಬಂದಿದ್ದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳೊಟ್ಟಿಗೆ ಚರ್ಚಿಸಿ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕುವುದಾಗಿ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ಅಧಿಕಾರಿಗಳೇ ಮರಳೂ ಗಣಿಗಾರಿಕೆಯಲ್ಲಿ ಶಾಮೀಲಾಗಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಹಾಗೂ ಶಿಂಷಾ ನದಿ ಪಾತ್ರದಲ್ಲಿ 144 ಸೆಕ್ಸನ್ ಜಾರಿಯಲ್ಲಿದ್ದರೂ ಕೆಲವರು ನಿರಂತರವಾಗಿ ಮರಳು ಗಣಿಗಾರಿಕೆ ನಡೆಯುತ್ತಿರುವ ಸಂಬಂಧ ಯಾವುದೇ ಮುಲಾಜಿಗೆ ಒಳಗಾಗದೆ ಪ್ರಕರಣ ದಾಖಲು ಮಾಡಿ ದಂಡ ಹಾಕುವುದಾಗಿ ಎಚ್ಚರಿಕೆ ನೀಡಿದರು.

ಶಿಂಷಾ ನದಿ ಪಾತ್ರದಲ್ಲಿ ಅಕ್ರಮ ಮರಳುಗಾರಿಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಕ್ರಮ ಮರಳುಗಾರಿಕೆ ತಡೆಯುವ ಸಂಬಂಧ ಈಗಾಗಲೇ ಕಾರ್ಯತಂತ್ರ ರೂಪಿಸಿದ್ದು, ಮರಳು ಅಡ್ಡೆಯ ಮೇಲೆ ದೀಢೀರ್ ದಾಳಿ ಮಾಡಿ ಅಕ್ರಮ ಮರಳು ಸಾಗಾಣಿಕೆ ಮಾಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಾರ್ವಜನಿಕರು, ರೈತರು ಹಾಗೂ ಮಹಿಳೆಯರು ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಬೇಕೆಂಬ ಸದುದ್ದೇಶದಿಂದ ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ಲೆಕ್ಕಿಗರ ಕಚೇರಿಯನ್ನು ತೆರೆಯಲು ಕ್ರಮ ವಹಿಸಿರುವುದಾಗಿ ತಿಳಿಸಿದರು.
ಸರ್ಕಾರ ದ ಯೋಜನೆಗಳು ಪ್ರತಿ ಮನೆ ಬಾಗಿಲಿಗೆ ತಲುಪಿಸಬೇಕೆಂಬ ಉದ್ದೇಶ ಹೊಂದಿರುವ ಸರ್ಕಾರ ಹಲವು ಯೋಜನೆಗಳನ್ನು ಜಾರಿಗಳಿಸುವ ಜತೆಗೆ ರೈತರಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗಲೆಂಬ ನಿಟ್ಟಿನಲ್ಲಿ ಇ-ಪೌತಿಖಾತೆಯನ್ನು ಜಾರಿಗೊಳಿಸಿರುವುದಾಗಿ ತಿಳಿಸಿದರು.

ಅರ್ಹ ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಅಗತ್ಯ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಿದ್ದಲ್ಲಿ ಗ್ರಾಮ ಲೆಕ್ಕಿಗರು, ಕಂದಾಯ ರಾಜಸ್ವ ನಿರೀಕ್ಷಕರು ಪರಿಶೀಲನೆ ನಡೆಸಿ ಬಳಿಕ ತಹಸೋಲ್ದಾರ್ ರವರ ಅದೇಶದಂತೆ 15 ದಿನಗಳಲ್ಲಿ ಖಾತೆ ಮಾಡಿಕೊಡಲಿರುವುದಾಗಿ ಹೇಳಿದರು.

ಕಂದಾಯ ಇಲಾಖೆಗೆ ಸಂಬಂಧಿಸಿದ ದಾಖಲೆಗಳು ಸಕಾಲದಲ್ಲಿ ರೈತರಿಗೆ ದೊರಕಬೇಕೆಂಬ ಉದ್ದೇಶದೊಂದಿಗೆ ರೆಕಾರ್ಡ್ ಗಳ ನ್ನು ಡಿಜಿಟಲೀಕರಣ ಕೈಗೊಂಡು ಶೇ. 75ರಷ್ಟು ಪ್ರಗತಿ ಸಾಧಿಸಿದ್ದು ಮುಂದಿನ ದಿನಗಳಲ್ಲಿ ಕಾರ್ಯ ಪೂರ್ಣಗೊಳ್ಳಲಿದ್ದು ರೈತರು, ಸಾರ್ವಜನಿಕರು ತಾಲೂಕು ಕಚೇರಿಗೆ ಆಗಮಿಸಿದೆ ತಮ್ಮ ಗ್ರಾಮ ವ್ಯಾಪ್ತಿಯಲ್ಲೇ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಪಡೆಯಬಹುದೆಂದರು.

ಕರ್ತವ್ಯನಿರತ ಗ್ರಾಮ ಲೆಕ್ಕಿಗರು ಕೇಂದ್ರ ಸ್ಥಾನದಲ್ಲಿ ಇರಬೇಕೆಂಬ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು ಪಂಚಾಯಿತಿ ವ್ಯಾಪ್ತಿಯ ಪ್ರತಿ ಗ್ರಾಮಗಳಿಗೆ ತೆರಳಿ ರೈತರೊಂದಿಗೆ ಸಮಾಲೋಚನೆ ನಡೆಸಿ ಅಗತ್ಯ ಮಾಹಿತಿಗಳನ್ನು ಸ್ಥಳದಲ್ಲೇ ಒದಗಿಸಬೇಕೆಂದು ಈಗಾಗಲೇ ಸೂಚನೆ ನೀಡಿದ್ದು ಇದರಿಂದಾಗಿ ದೂರದ ಗ್ರಾಮಗಳಿಂದ ತಾಲೂಕು ಕಚೇರಿಗೆ ಅಲೆದಾಡಿಸುವುದನ್ನು ತಪ್ಪಿಸಿದಂತಾಗುತ್ತದೆಂದರು.

ಆಂದೋಲನ ಡೆಸ್ಕ್

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

1 hour ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

1 hour ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

3 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

3 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

5 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

6 hours ago