ಮಂಡ್ಯ

ಶಿಂಷ ನದಿ ಪಾತ್ರದ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ : ತಹಸೀಲ್ದಾರ್‌ ಪರಶುರಾಮ್‌

ಮದ್ದೂರು : ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಶಿಂಷಾ ನದಿಪಾತ್ರದಲ್ಲಿ ದಿನನಿತ್ಯ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿಬಂದಿದ್ದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳೊಟ್ಟಿಗೆ ಚರ್ಚಿಸಿ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕುವುದಾಗಿ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ಅಧಿಕಾರಿಗಳೇ ಮರಳೂ ಗಣಿಗಾರಿಕೆಯಲ್ಲಿ ಶಾಮೀಲಾಗಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಹಾಗೂ ಶಿಂಷಾ ನದಿ ಪಾತ್ರದಲ್ಲಿ 144 ಸೆಕ್ಸನ್ ಜಾರಿಯಲ್ಲಿದ್ದರೂ ಕೆಲವರು ನಿರಂತರವಾಗಿ ಮರಳು ಗಣಿಗಾರಿಕೆ ನಡೆಯುತ್ತಿರುವ ಸಂಬಂಧ ಯಾವುದೇ ಮುಲಾಜಿಗೆ ಒಳಗಾಗದೆ ಪ್ರಕರಣ ದಾಖಲು ಮಾಡಿ ದಂಡ ಹಾಕುವುದಾಗಿ ಎಚ್ಚರಿಕೆ ನೀಡಿದರು.

ಶಿಂಷಾ ನದಿ ಪಾತ್ರದಲ್ಲಿ ಅಕ್ರಮ ಮರಳುಗಾರಿಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಕ್ರಮ ಮರಳುಗಾರಿಕೆ ತಡೆಯುವ ಸಂಬಂಧ ಈಗಾಗಲೇ ಕಾರ್ಯತಂತ್ರ ರೂಪಿಸಿದ್ದು, ಮರಳು ಅಡ್ಡೆಯ ಮೇಲೆ ದೀಢೀರ್ ದಾಳಿ ಮಾಡಿ ಅಕ್ರಮ ಮರಳು ಸಾಗಾಣಿಕೆ ಮಾಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಾರ್ವಜನಿಕರು, ರೈತರು ಹಾಗೂ ಮಹಿಳೆಯರು ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಬೇಕೆಂಬ ಸದುದ್ದೇಶದಿಂದ ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ಲೆಕ್ಕಿಗರ ಕಚೇರಿಯನ್ನು ತೆರೆಯಲು ಕ್ರಮ ವಹಿಸಿರುವುದಾಗಿ ತಿಳಿಸಿದರು.
ಸರ್ಕಾರ ದ ಯೋಜನೆಗಳು ಪ್ರತಿ ಮನೆ ಬಾಗಿಲಿಗೆ ತಲುಪಿಸಬೇಕೆಂಬ ಉದ್ದೇಶ ಹೊಂದಿರುವ ಸರ್ಕಾರ ಹಲವು ಯೋಜನೆಗಳನ್ನು ಜಾರಿಗಳಿಸುವ ಜತೆಗೆ ರೈತರಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗಲೆಂಬ ನಿಟ್ಟಿನಲ್ಲಿ ಇ-ಪೌತಿಖಾತೆಯನ್ನು ಜಾರಿಗೊಳಿಸಿರುವುದಾಗಿ ತಿಳಿಸಿದರು.

ಅರ್ಹ ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಅಗತ್ಯ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಿದ್ದಲ್ಲಿ ಗ್ರಾಮ ಲೆಕ್ಕಿಗರು, ಕಂದಾಯ ರಾಜಸ್ವ ನಿರೀಕ್ಷಕರು ಪರಿಶೀಲನೆ ನಡೆಸಿ ಬಳಿಕ ತಹಸೋಲ್ದಾರ್ ರವರ ಅದೇಶದಂತೆ 15 ದಿನಗಳಲ್ಲಿ ಖಾತೆ ಮಾಡಿಕೊಡಲಿರುವುದಾಗಿ ಹೇಳಿದರು.

ಕಂದಾಯ ಇಲಾಖೆಗೆ ಸಂಬಂಧಿಸಿದ ದಾಖಲೆಗಳು ಸಕಾಲದಲ್ಲಿ ರೈತರಿಗೆ ದೊರಕಬೇಕೆಂಬ ಉದ್ದೇಶದೊಂದಿಗೆ ರೆಕಾರ್ಡ್ ಗಳ ನ್ನು ಡಿಜಿಟಲೀಕರಣ ಕೈಗೊಂಡು ಶೇ. 75ರಷ್ಟು ಪ್ರಗತಿ ಸಾಧಿಸಿದ್ದು ಮುಂದಿನ ದಿನಗಳಲ್ಲಿ ಕಾರ್ಯ ಪೂರ್ಣಗೊಳ್ಳಲಿದ್ದು ರೈತರು, ಸಾರ್ವಜನಿಕರು ತಾಲೂಕು ಕಚೇರಿಗೆ ಆಗಮಿಸಿದೆ ತಮ್ಮ ಗ್ರಾಮ ವ್ಯಾಪ್ತಿಯಲ್ಲೇ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಪಡೆಯಬಹುದೆಂದರು.

ಕರ್ತವ್ಯನಿರತ ಗ್ರಾಮ ಲೆಕ್ಕಿಗರು ಕೇಂದ್ರ ಸ್ಥಾನದಲ್ಲಿ ಇರಬೇಕೆಂಬ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು ಪಂಚಾಯಿತಿ ವ್ಯಾಪ್ತಿಯ ಪ್ರತಿ ಗ್ರಾಮಗಳಿಗೆ ತೆರಳಿ ರೈತರೊಂದಿಗೆ ಸಮಾಲೋಚನೆ ನಡೆಸಿ ಅಗತ್ಯ ಮಾಹಿತಿಗಳನ್ನು ಸ್ಥಳದಲ್ಲೇ ಒದಗಿಸಬೇಕೆಂದು ಈಗಾಗಲೇ ಸೂಚನೆ ನೀಡಿದ್ದು ಇದರಿಂದಾಗಿ ದೂರದ ಗ್ರಾಮಗಳಿಂದ ತಾಲೂಕು ಕಚೇರಿಗೆ ಅಲೆದಾಡಿಸುವುದನ್ನು ತಪ್ಪಿಸಿದಂತಾಗುತ್ತದೆಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago