ಮಂಡ್ಯ

ಸಂಸದೆ ಮತ್ತು ಶಾಸಕ ಇಬ್ಬರ ನಡುವೆ ಕ್ರೆಡಿಟ್​ ವಾರ್..!

. ಮಂಡ್ಯ : ಮತ್ತೊಮ್ಮೆ ಕ್ರೆಡಿಟ್ ಪಾಲಿಟಿಕ್ಸ್ ಆರಂಭಗೊಂಡಿದೆ. ಲೈಂಗಿಕ ದೌರ್ಜನ್ಯದಿಂದ ಮೃತಪಟ್ಟ ಮಳವಳ್ಳಿಯ ಬಾಲಕಿ ಕುಟುಂಬಕ್ಕೆ ನೆರವು ಕೊಡಿಸುವ ವಿಚಾರದ ಕ್ರೆಡಿಟ್ ತೆಗೆದುಕೊಳ್ಳಲು ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಶಾಸಕ ಅನ್ನದಾನಿ ಅವರ ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ. ನಾನು ಮನವಿ ಮಾಡಿಕೊಂಡಿದ್ದರಿಂದ ಸಿಎಂ ಬಸವರಾಜ್ ಬೊಮ್ಮಾಯಿ ಬಾಲಕಿಯ ಕುಟುಂಬಕ್ಕೆ ನೆರವು ನೀಡಿದ್ದಾರೆ ಎಂದು ಶಾಸಕ ಅನ್ನದಾನಿ ಹೇಳಿಕೊಂಡಿದ್ದಾರೆ. ಹೇಳಿಕೆಗೆ ಸುಮಲತಾ ಅಂಬರೀಶ್ ಬೆಂಬಲಿಗರು ಅಸಮಾಧಾನ ಹೊರ ಹಾಕಿದ್ದಾರೆ.

ಬಾಲಕಿ ಮೃತಪಟ್ಟ ದಿನದಿಂದಲೂ ಸುಮ್ಮನಿದ್ದ ಅನ್ನದಾನಿ ಈಗ ಕ್ರೆಡಿಟ್ ಪಡೆಯಲು ಮುಂದಾಗಿದ್ದಾರೆ. ಸುಮಲತಾ ಅಂಬರೀಶ್ ಅವರು ಸಿಎಂ ಬಳಿ ಮಾತನಾಡಿದ ಬಳಿಕ ಹತ್ತು ಲಕ್ಷ ಹಣ ನೀಡಲಾಗಿದೆ. ಶಾಸಕ ಅನ್ನದಾನಿ ಇದರ ಕ್ರೆಡಿಟ್ ಪಡೆಯಲು ಹೋಗಿ ಜನಗಳ ಮುಂದೆ ಮುಖಭಂಗ ಅನುಭವಿಸಿದ್ದಾರೆ ಎಂದು ಸಂಸದರ ಬೆಂಬಲಿಗ ಬೇಲೂರು ಸೋಮಶೇಖರ್ ಆಕ್ರೋಶ ಹೊರ ಹಾಕಿದ್ದಾರೆ.‌

ಬಾಲಕಿ ಮೃತಪಟ್ಟ ದಿನದಂದು 25 ಲಕ್ಷ ನೆರವು ನೀಡುವಂತೆ ಸಿಎಂ ಬಳಿ ಮನವಿ ಮಾಡಿದ್ದಾಗಿ ಅನ್ನದಾನಿ ಹೇಳಿದ್ದಾರೆ. ಇತ್ತ ಸುಮಲತಾ ಅಂಬರೀಶ್, ಸಿಎಂ ಬಳಿ ನಾನು ಮನವಿ ಮಾಡಿದ್ದರಿಂದ ತಕ್ಷಣ ನೆರವು ಘೋಷಣೆ ಮಾಡಿದರು ಎಂದು ಹೇಳುತ್ತಿದ್ದಾರೆ. ಹಾಗಾಗಿ ಇಬ್ಬರ ನಡುವೆ ಕ್ರೆಡಿಟ್ ವಾರ್‌ ಶುರುವಾಗಿದೆ.

 

andolana

Recent Posts

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

7 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

8 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

8 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

13 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

14 hours ago

ಮಡಿಕೇರಿ: ಪೊನ್ನಂಪೇಟೆಯಲ್ಲಿ ವೈಭವ ಪೂರಿತ ಗಣೇಶ ಹಬ್ಬ

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ…

14 hours ago