. ಮಂಡ್ಯ : ಮತ್ತೊಮ್ಮೆ ಕ್ರೆಡಿಟ್ ಪಾಲಿಟಿಕ್ಸ್ ಆರಂಭಗೊಂಡಿದೆ. ಲೈಂಗಿಕ ದೌರ್ಜನ್ಯದಿಂದ ಮೃತಪಟ್ಟ ಮಳವಳ್ಳಿಯ ಬಾಲಕಿ ಕುಟುಂಬಕ್ಕೆ ನೆರವು ಕೊಡಿಸುವ ವಿಚಾರದ ಕ್ರೆಡಿಟ್ ತೆಗೆದುಕೊಳ್ಳಲು ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಶಾಸಕ ಅನ್ನದಾನಿ ಅವರ ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ. ನಾನು ಮನವಿ ಮಾಡಿಕೊಂಡಿದ್ದರಿಂದ ಸಿಎಂ ಬಸವರಾಜ್ ಬೊಮ್ಮಾಯಿ ಬಾಲಕಿಯ ಕುಟುಂಬಕ್ಕೆ ನೆರವು ನೀಡಿದ್ದಾರೆ ಎಂದು ಶಾಸಕ ಅನ್ನದಾನಿ ಹೇಳಿಕೊಂಡಿದ್ದಾರೆ. ಈ ಹೇಳಿಕೆಗೆ ಸುಮಲತಾ ಅಂಬರೀಶ್ ಬೆಂಬಲಿಗರು ಅಸಮಾಧಾನ ಹೊರ ಹಾಕಿದ್ದಾರೆ.
ಬಾಲಕಿ ಮೃತಪಟ್ಟ ದಿನದಿಂದಲೂ ಸುಮ್ಮನಿದ್ದ ಅನ್ನದಾನಿ ಈಗ ಕ್ರೆಡಿಟ್ ಪಡೆಯಲು ಮುಂದಾಗಿದ್ದಾರೆ. ಸುಮಲತಾ ಅಂಬರೀಶ್ ಅವರು ಸಿಎಂ ಬಳಿ ಮಾತನಾಡಿದ ಬಳಿಕ ಹತ್ತು ಲಕ್ಷ ಹಣ ನೀಡಲಾಗಿದೆ. ಶಾಸಕ ಅನ್ನದಾನಿ ಇದರ ಕ್ರೆಡಿಟ್ ಪಡೆಯಲು ಹೋಗಿ ಜನಗಳ ಮುಂದೆ ಮುಖಭಂಗ ಅನುಭವಿಸಿದ್ದಾರೆ ಎಂದು ಸಂಸದರ ಬೆಂಬಲಿಗ ಬೇಲೂರು ಸೋಮಶೇಖರ್ ಆಕ್ರೋಶ ಹೊರ ಹಾಕಿದ್ದಾರೆ.
ಬಾಲಕಿ ಮೃತಪಟ್ಟ ದಿನದಂದು 25 ಲಕ್ಷ ನೆರವು ನೀಡುವಂತೆ ಸಿಎಂ ಬಳಿ ಮನವಿ ಮಾಡಿದ್ದಾಗಿ ಅನ್ನದಾನಿ ಹೇಳಿದ್ದಾರೆ. ಇತ್ತ ಸುಮಲತಾ ಅಂಬರೀಶ್, ಸಿಎಂ ಬಳಿ ನಾನು ಮನವಿ ಮಾಡಿದ್ದರಿಂದ ತಕ್ಷಣ ನೆರವು ಘೋಷಣೆ ಮಾಡಿದರು ಎಂದು ಹೇಳುತ್ತಿದ್ದಾರೆ. ಹಾಗಾಗಿ ಇಬ್ಬರ ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…