ಮಂಡ್ಯ

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹರಿದು ಬಂದ ಜನಸಾಗರ

ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಸಮ್ಮೇಳನದ ವೀಕ್ಷಣೆಗೆ ರಾಜ್ಯಾದ್ಯಾಂತ ಜನಸಾಗರ ಹರಿದು ಬಂದಿದೆ.

ಮಂಡ್ಯ ಜಿಲ್ಲೆಯಲ್ಲಿ ಇಂದು(ಡಿಸೆಂಬರ್‌.20) ನಡೆಯುತ್ತಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅದ್ದೂರಿಯಾಗಿ ಚಾಲನೆ ನೀಡಿದ್ದು, ಸಾಹಿತ್ಯ ಸಮ್ಮೇಳನವನ್ನು ಕಣ್ತುಂಬಿಕೊಳ್ಳಲು ಸುಮಾರು ಬೆಳಿಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಸಾಹಿತಿಗಳು, ಸಾಹಿತ್ಯಾಸಕ್ತರು ಹಾಗೂ ಕನ್ನಡಾಭಿಮಾನಿಗಳು ಆಗಮಿಸಿದ್ದಾರೆ.

ಈ ಸಾಹಿತ್ಯ ಸಮ್ಮೇಳನಕ್ಕೆ ಅಪಾರ ಜನರ ನೀರಿಕ್ಷೆಯ ಆಧಾರದ ಮೇಲೆ ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಏರ್ಪಡಿಸಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಶಕ್ತಿ ಯೋಜನೆಯಿಂದ ಹಾಗೂ ಮಂಡ್ಯ ನಗರಕ್ಕೆ ಉಚಿತ ಬಸ್‌ ವ್ಯವಸ್ಥೆ ಮಾಡಿರುವುದರಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನಸಾಗರ ಹರಿದು ಬಂದಿದೆ. ಅಲ್ಲದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮತ್ತು ನಗರದ ಬಹುತೇಕ ವಿದ್ಯಾರ್ಥಿಗಳು, ಉಪನ್ಯಾಕರು ಹಾಗೂ ಶಿಕ್ಷಕರು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.

ಇನ್ನು ಸಾಹಿತ್ಯ ಸಮ್ಮೇಳನದ ಮುಖ್ಯ ವೇದಿಕೆಯಲ್ಲಿ ಜನಸಾಗರ ಜಮಾಯಿಸಿದ್ದ ಕಾರಣ ಹಾಗೂ ಸಮ್ಮೇಳನದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಬಾರದೆಂಬ ಕಾರಣಕ್ಕೆ ಮುನ್ನಚ್ಚೆರಿಕೆ ಕ್ರಮವಾಗಿ ಜಿಲ್ಲಾ ಪೊಲೀಸದ್‌ ಇಲಾಖೆ ಭಾರೀ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದ್ದು, ಸುಮಾರು 3,200 ಪೊಲೀಸ್‌ ಸಿಬ್ಬಂದಿಯನ್ನು ಈ ಸಾಹಿತ್ಯ ಸಮ್ಮೇಳನಕ್ಕಾಗಿ ನಿಯೋಜಿಸಲಾಗಿದೆ.

 

 

ಅರ್ಚನ ಎಸ್‌ ಎಸ್

Recent Posts

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

3 hours ago

ಕೊಡಗು ಜಿಲ್ಲೆಗೆ ಈ ಬಾರಿಯೂ ದೊರಕದ ಸಚಿವ ಸ್ಥಾನ

ನವೀನ್ ಡಿಸೋಜ ಶಾಸಕ ಎ.ಎಸ್.ಪೊನ್ನಣ್ಣಗೆ ಒಲಿದ ಡೆಪ್ಯೂಟಿ ಸ್ಪೀಕರ್ ಸ್ಥಾನ; ಕೊಡಗಿನ ಜನರ ಈ ಬಾರಿಯ ನಿರೀಕ್ಷೆಯೂ ಹುಸಿ ಮಡಿಕೇರಿ:…

3 hours ago

ಸಕ್ಕರೆ ನಾಡಿಗೆ ‘ಅಧಿಕಾರ’ದ ಸಿಹಿ, ಸಂಭ್ರಮ

ಬಿ.ಟಿ.ಮೋಹನ್ ಕುಮಾರ್ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿಗೆ ಸಚಿವ ಸ್ಥಾನ  ಮಂಡ್ಯ: ಡಿ.ಕೆ.ಶಿವಕುಮಾರ್ ನೇತೃತ್ವದ  ಸರ್ಕಾರದಲ್ಲಿ ಈ ಹಿಂದಿನ ಸಂಪುಟದಲ್ಲಿ ಸಚಿವರಾಗಿದ್ದ ಎನ್‌.ಚಲುವರಾಯಸ್ವಾಮಿ…

3 hours ago

ಡಿಕೆಶಿ ಸಂಪುಟ: ಕುಗ್ಗಿದ ಮೈಸೂರು ಜಿಲ್ಲೆ ಪ್ರಾಬಲ್ಯ

ಕೆ.ಬಿ. ರಮೇಶನಾಯಕ ಸಿದ್ದರಾಮಯ್ಯ ಸಂಪುಟದಲ್ಲಿ ೮ ವರ್ಷವೂ ಸಚಿವರಾಗಿದ್ದ ಡಾ.ಎಚ್‌ಸಿಎಂ ಹೊರಕ್ಕೆ ಪಿರಿಯಾಪಟ್ಟಣ ಕ್ಷೇತ್ರದ ಕೆ. ವೆಂಕಟೇಶ್‌ಗೂ ಕೊಕ್ ಮೈಸೂರು:…

3 hours ago

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

1 day ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

1 day ago