ಮಂಡ್ಯ

ಅಮೆರಿಕದಲ್ಲಿ ಮಂಡ್ಯದವರ ಸಾಂಸ್ಕೃತಿಕ ಕಲರವ

ಮಂಡ್ಯ : ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದಿ ಪದವಿ ಪಡೆದು ದೇಶದ ವಿವಿಧೆಡೆ ನೆಲೆಸಿರುವವರ ಬೃಹತ್ ಸಂಗಮ. ನೃತ್ಯ, ನಾಟಕ, ಫ್ಯಾಷನ್ ಶೋ ಕಾರ್ಯಕ್ರಮದಲ್ಲಿ ಎಲ್ಲರೂ ಸಂಭ್ರಮಿಸಿದರು. ಅಮೆರಿಕದ ಒಕ್ಕಲಿಗರ ಪರಿಷತ್ತಿನ 18ನೇ ಸಮಾವೇಶ ಹಾಗೂ ವಿಶ್ವ ಒಕ್ಕಲಿಗರ ಸಮ್ಮೇಳನ ಕ್ಯಾಲಿಫೋರ್ನಿಯಾದ ಸಾನ್ಹೋಸೆ ಕನ್ವೆನ್ಷನ್ ಸೆಂಟರ್‌ನಲ್ಲಿ ಕಂಡುಬಂದ ಕಾರ್ಯಕ್ರಮವಿದು.

ಈ ಆಚರಣೆಯ ಭಾಗವಾಗಿ ಒಕ್ಕಲಿಗರ ಪರಿಷತ್ ವತಿಯಿಂದ 1967 ರಿಂದ 2000ನೇ ಇಸವಿಯವರೆಗೆ ಮಂಡ್ಯದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪಡೆದವರಿಗಾಗಿ ಅಲ್ಯುಮ್ನಿ ಮೀಟ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಹಳೆಯ ಗೆಳೆಯರು ಪರಸ್ಪರ ಒಂದೇ ವೇದಿಕೆಯಲ್ಲಿ ಸಂಗಮಗೊಂಡರು. ತಮ್ಮ ಸಾಧನೆಗಳು ಮತ್ತು ಅನುಭವಗಳನ್ನು ಹಂಚಿಕೊಂಡು ಅಮೂಲ್ಯ ನೆನಪುಗಳನ್ನು ಮೆಲುಕು ಹಾಕಿದರು.

ಈ ಸಮಾವೇಶದಲ್ಲಿ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಸಚಿವರಾದ ಡಾ.ಕೆ.ಸುಧಾಕರ್, ಡಾ.ಸಿ.ಎನ್.ಅಶ್ವತ್ಥನಾರಾಯಣ, ಎಸ್.ಟಿ.ಸೋಮಶೇಖರ್, ಸಿ.ಎಸ್.ಪುಟ್ಟರಾಜು, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್, ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರವಿಶಂಕರ್‌ಗೌಡ, ಶ್ರೀ ಹರ್ಷ, ಹೇಮಂತ್‌ಕುಮಾರ್, ಹರಿಕೃಷ್ಣ ಮತ್ತು ಎಂ.ಡಿ.ಪಲ್ಲವಿ ಮೊದಲಾದ ಖ್ಯಾತ ನಟರು ಹಾಗೂ ಗಾಯಕರು ಭಾಗವಹಿಸಿದ್ದರು.

ಪ್ರಕೃತಿ ಸ್ವಾಮಿಗೌಡ, ಭಾಗ್ಯ, ಚೇತನ ಕುಮಾರ್, ಸಂಧ್ಯಾ, ಸಿಂಧು ಶಿವ, ಸಚಿನ್, ಎ.ಆರ್.ಮಮತಾ, ನಮಿತಾ, ಎಲ್.ಮಹೇಶ್, ಪ್ರವೀಣ್, ಮಾದೇಶ್, ಶಿವಾನಂದ, ರವಿ, ರಶ್ಮಿ, ರಮೇಶ್, ನವೀನ್, ವಿದ್ಯಾ, ಮಂಜುನಾಥ, ಮುರಳೀಧರ್, ವೆಂಕಟೇಶ್, ಶ್ರೀವಲ್ಲಿ, ಶೇಷಾದ್ರಿ, ಕೆ.ಎನ್.ಯದುಷ್, ಕೆ.ಎಸ್.ಮಮತಾ ಅವರೆಲ್ಲರೂ ಮಂಡ್ಯ ಪಿಇಎಸ್ ಕಾಲೇಜಿನಲ್ಲಿ ಓದಿದ ಹಳೆಯ ವಿದ್ಯಾರ್ಥಿಗಳಾಗಿ ಸವಿನೆನಪುಗಳನ್ನು ಹಂಚಿಕೊಂಡರು.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

2 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

2 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

3 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

6 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

6 hours ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

16 hours ago