ಮಂಡ್ಯ: ವಿಶ್ವ ಪರಿಸರ ದಿನದ ಅಂಗವಾಗಿ ಇಂದು(ಜೂನ್.೫) ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ್ ಸರ್ಕಾರಿ ಪದವಿ ಪೂರ್ವ ಕಾಲೇಜು (ಕಲ್ಲು ಕಟ್ಟಡ) ಆವರಣದಲ್ಲಿ ಸೈಕಲ್ ಜಾಥಾ ಗೆ ಚಾಲನೆ ನೀಡಿದರು.
ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸುವ ಸಲುವಾಗಿ ವಿಶ್ವ ಪರಿಸರದ ದಿನದ ಅಂಗವಾಗಿ ಎಲ್ಲಾ ಕಡೆಯಲ್ಲೂ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಯುವ ಜನತೆಗೆ ಪರಿಸರ ಸಂರಕ್ಷಣೆಯ ಬಗ್ಗೆ ಪ್ರೇರಣೆ ನೀಡುವ ಸಲುವಾಗಿ ಎಲ್ಲಾ ಕಡೆಯಲ್ಲಿಯೂ ಗಿಡಗಳನ್ನು ನೆಡಬೇಕು. ಸೈಕಲ್ ಜಾಥಾ ಮುಖಾಂತರ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುತ್ತಿದ್ದೇವೆ ಎಂದರು.
ಈ ವರ್ಷದ ಬಿಸಿಲಿಗೆ ಮಂಡ್ಯ ಜಿಲ್ಲೆಯ ಜನತೆಯು ಕೂಡ ತತ್ತರಿಸಿ ಹೋಗಿದ್ದಾರೆ. ಅದಕ್ಕೆ ಕಾರಣ ಮರ ಗಿಡಗಳ ಸಂಖ್ಯೆ ಕಡಿಮೆ ಆಗುತ್ತಿರುವುದು. ಆದ್ದರಿಂದ ಗಿಡಗಳನ್ನು ನೆಟ್ಟಿ ಬೆಳೆಸಬೇಕು ಎಂದರು.
ಆದಷ್ಟು ಪ್ಲಾಸ್ಟಿಕ್ ಕವರ್ ಬಳಕೆ ನಿಲ್ಲಿಸಿ ಬಟ್ಟೆ ಬ್ಯಾಗ್ ಗಳನ್ನು ಬಳಸಿ ಇದರಿಂದ ಪರಿಸರದ ಮಾಲಿನ್ಯವನ್ನು ಕೂಡ ಕಡಿಮೆ ಮಾಡಬಹುದು ಎಂದು ಹೇಳಿದರು.
ಜಾಥಾ ಕಾರ್ಯಕ್ರಮದಲ್ಲಿ ವಿಜ್ಞಾನ ಸಂವಹನಕಾರರಾದ ಎಸ್ ಲೋಕೇಶ್, ಉಪ ಪರಿಸರ ಅಧಿಕಾರಿಗಳಾದ ಭವ್ಯ, ಅಶ್ವಿನಿ, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರಾದ ಯೋಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…