ಮಂಡ್ಯ

ಪರಿಸರ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾಗೆ ಚಾಲನೆ: ಡಾ ಎಚ್ ಎಲ್ ನಾಗರಾಜ್

ಮಂಡ್ಯ:  ವಿಶ್ವ ಪರಿಸರ ದಿನದ ಅಂಗವಾಗಿ ಇಂದು(ಜೂನ್.‌೫) ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ್ ಸರ್ಕಾರಿ ಪದವಿ ಪೂರ್ವ ಕಾಲೇಜು (ಕಲ್ಲು ಕಟ್ಟಡ) ಆವರಣದಲ್ಲಿ ಸೈಕಲ್ ಜಾಥಾ ಗೆ ಚಾಲನೆ ನೀಡಿದರು.

ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸುವ ಸಲುವಾಗಿ ವಿಶ್ವ ಪರಿಸರದ ದಿನದ ಅಂಗವಾಗಿ ಎಲ್ಲಾ ಕಡೆಯಲ್ಲೂ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಯುವ ಜನತೆಗೆ ಪರಿಸರ ಸಂರಕ್ಷಣೆಯ ಬಗ್ಗೆ ಪ್ರೇರಣೆ ನೀಡುವ ಸಲುವಾಗಿ ಎಲ್ಲಾ ಕಡೆಯಲ್ಲಿಯೂ ಗಿಡಗಳನ್ನು ನೆಡಬೇಕು. ಸೈಕಲ್ ಜಾಥಾ ಮುಖಾಂತರ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುತ್ತಿದ್ದೇವೆ ಎಂದರು.

ಈ ವರ್ಷದ ಬಿಸಿಲಿಗೆ ಮಂಡ್ಯ ಜಿಲ್ಲೆಯ ಜನತೆಯು ಕೂಡ ತತ್ತರಿಸಿ ಹೋಗಿದ್ದಾರೆ. ಅದಕ್ಕೆ ಕಾರಣ ಮರ ಗಿಡಗಳ ಸಂಖ್ಯೆ ಕಡಿಮೆ ಆಗುತ್ತಿರುವುದು. ಆದ್ದರಿಂದ ಗಿಡಗಳನ್ನು ನೆಟ್ಟಿ ಬೆಳೆಸಬೇಕು ಎಂದರು.

ಆದಷ್ಟು ಪ್ಲಾಸ್ಟಿಕ್ ಕವರ್ ಬಳಕೆ ನಿಲ್ಲಿಸಿ ಬಟ್ಟೆ ಬ್ಯಾಗ್ ಗಳನ್ನು ಬಳಸಿ ಇದರಿಂದ ಪರಿಸರದ ಮಾಲಿನ್ಯವನ್ನು ಕೂಡ ಕಡಿಮೆ ಮಾಡಬಹುದು ಎಂದು ಹೇಳಿದರು.

ಜಾಥಾ ಕಾರ್ಯಕ್ರಮದಲ್ಲಿ ವಿಜ್ಞಾನ ಸಂವಹನಕಾರರಾದ ಎಸ್ ಲೋಕೇಶ್, ಉಪ ಪರಿಸರ ಅಧಿಕಾರಿಗಳಾದ ಭವ್ಯ, ಅಶ್ವಿನಿ, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರಾದ ಯೋಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

2 hours ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

2 hours ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

2 hours ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

2 hours ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

13 hours ago