ಮಂಡ್ಯ

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು : ಡಿಕೆಶಿ ಪರ ನಿಶ್ಚಲಾನಂದನಾಥ ಸ್ವಾಮೀಜಿ ಬ್ಯಾಟಿಂಗ್

ಮಂಡ್ಯ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ ಹಂಬಲ ಬಹಳ ದಿನಗಳಿಂದ ಇದೆ. ಕೇವಲ ಒಕ್ಕಲಿಗರಲ್ಲದೆ ಅವರ ಇತರೆ ಅಭಿಮಾನಿಗಳ ಆಗ್ರಹವೂ ಆಗಿದೆ ಎಂದು ವಿಶ್ವ ಒಕ್ಕಲಿಗರ ಮಠದ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಡಿಕೆಶಿ ಪರ ಬ್ಯಾಟಿಂಗ್ ಬೀಸಿದ್ದಾರೆ.

ನಗರದ ಬಾಲಗಂಗಾಧರನಾಥ ಸಮುದಾಯ ಭವನದಲ್ಲಿ ಮಂಡ್ಯ ಜಿಲ್ಲಾ ಚುಂಚಶ್ರೀ ಮಹಿಳಾ ಒಕ್ಕಲಿಗರ ವೇದಿಕೆ ವತಿಯಿಂದ ಶುಕ್ರವಾರ ನಡೆದ ಸಾಮೂಹಿಕ ಮಹಾಲಕ್ಷ್ಮಿ ಆಷಾಡ ಮಾಸದ ಪೂಜಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ದುಡಿದಿದ್ದಾರೆ. ಅವರೊಬ್ಬ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಪಕ್ಷ 135 ಸ್ಥಾನ ಗಳಿಸಲು ಸಾಕಷ್ಟು ಶ್ರಮಿಸಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಈ ಮಟ್ಟಕ್ಕೆ ಬರಲು ಅವರು ಕಾರಣಕರ್ತರಾಗಿದ್ದಾರೆ. ಪಕ್ಷವನ್ನ ತಾಯಿ ರೀತಿ ಪ್ರೀತಿಸಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಬೇಕು. ಹೈಕಮಾಂಡ್ ಯಾವ ನಿರ್ಧಾರ ಮಾಡುತ್ತದೆ ಕಾದು ನೋಡೋಣ, ಡಿ.ಕೆ. ಶಿವಕುಮಾರ್ ಖಂಡಿತ ಸಿಎಂ ಆಗೇ ಆಗ್ತರೆ. ಅವರು ಸಂಯಮ ವರ್ತಿಗಳು, ಶಿಸ್ತಿನ ಸಿಪಾಯಿ. ಅವರು ತಾಳ್ಮೆಯಿಂದ ಕಾದು, ಹೈಕಮಾಂಡ್‌ನಿಂದ ಅಧಿಕಾರ ಪಡೆಯುತ್ತಾರೆ ಎಂಬ ನಂಬಿಕೆ ಇದೆ. ಹಳೇ ಮೈಸೂರು ಭಾಗದ ಒಕ್ಕಲಿಗರು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಾರೆ. ಈ ಭಾಗದಲ್ಲಿ ಡಿಕೆಶಿ ಪರ ಹೆಚ್ಚು ಒಲವು ತೋರಿದ್ದರಿಂದ 135 ಸ್ಥಾನ ಬರಲು ಕಾರಣವಾಯಿತು ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

5 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

5 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

5 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

5 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

5 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

5 hours ago