ಮಂಡ್ಯ

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.

ಗ್ರಾಮದಲ್ಲಿ ಕಳೆದ ಡಿ.15ರಂದು ಅಂಬೇಡ್ಕರ್ ಪುತ್ಥಳಿ ನಿರ್ಮಾಣದ ಸ್ಥಳಕ್ಕೆ ಸಂಬಂಧಿಸಿದಂತೆ ಹಾಗೂ ಅಂಬೇಡ್ಕರ್ ಫ್ಲೆಕ್ಸ್ ಹರಿದಿದ್ದ ವಿಚಾರಕ್ಕೆ ಪರಿಶಿಷ್ಟರು, ಇತರೆ ಜನಾಂಗದ ನಡುವೆ ಘರ್ಷಣೆಯಾಗಿತ್ತು. ಇದಾದ ನಂತರ ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು, ಡಿವೈಎಸ್‌ಪಿ ಯಶವಂತ್‌ಕುಮಾರ್, ಸಿಪಿಐ ಅನಿಲ್ ಅವರ ನೇತೃತ್ವದಲ್ಲಿ ಜಿಲ್ಲಾ ಶಶಸ್ತ್ರ ಪಡೆ ನಿಯೋಜನೆಗೊಳಿಸಲಾಗಿತ್ತು.

ಈ ಮಧ್ಯೆ ಮದ್ದೂರಿನ ತಾಲ್ಲೂಕು ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಸಮ್ಮುಖದಲ್ಲಿ ಎರಡೂ ಕೋಮುಗಳ ಶಾಂತಿ ಸಭೆ ನಡೆಸಲಾಗಿತ್ತು. ಇಲ್ಲಿ ಪರಿಶಿಷ್ಟ ಜಾನಾಂಗದವರು ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಸ್ಥಳ ಕೊಡಿಸುವಂತೆ, ಬೊಮ್ಮಲಿಂಗೇಶ್ವರಸ್ವಾಮಿ ಸಮುದಾಯ ಭವನದಲ್ಲಿ ಶುಭ ಸಮಾರಂಭಗಳಿಗೆ ಅವಕಾಶ ಕೊಡಿಸುವಂತೆ, ಮತ್ತು ಟ್ರಸ್ಟ್‌ನಲ್ಲಿ ಸದಸ್ಯತ್ವ ನೀಡುವಂತೆ, ಮೇಲ್ವರ್ಗದವರ ದೇವಾಲಗಳಿಗೆ ಪ್ರವೇಶ ಕೊಡಿಸುವಂತೆ ಮನವಿ ಮಾಡಿದ್ದರು.

ಶಾಂತಿ ಸಭೆಯಲ್ಲಿ ಮಾಡಿದ್ದ ಮನವಿ ಮೇರೆಗೆ ದಿನಾಂಕ ನಿಗಧಿಗೊಳಿಸಿದ್ದು, ಅದರಂತೆ ಇಂದು ಪೊಲೀಸ್ ಭದ್ರತೆಯಲ್ಲಿ ಬೊಮ್ಮಲಿಂಗೇಶ್ವರಸ್ವಾಮಿ ದೇವಾಲಯ, ಚಾಮುಂಡೇಶ್ವರಿ, ಮಾರಮ್ಮ, ಕಾಲಭೈರವ, ತಿಮ್ಮಪ್ಪ ದೇವಾಲಯಗಳಿಗೆ ದಲಿತ ಮುಖಂಡ ಸಿ.ಎ.ಕೆರೆ ಮೂರ್ತಿ ನೇತೃತ್ವದಲ್ಲಿ ಪರಿಶಿಷ್ಟ ಜನರು ಪ್ರವೇಶಿಸಿದರು.

ಇದನ್ನೂ ಓದಿ:-ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಈ ಸಂದರ್ಭದಲ್ಲಿ ದಲಿತ ಮುಖಂಡ ಸಿ.ಎ.ಕೆರೆ ಮೂರ್ತಿ ಮಾತನಾಡಿ, ನಮ್ಮ ಜನಾಂಗದ ಮುಖಂಡರು 5 ಬೇಡಿಕೆಗಳನ್ನ ಶಾಂತಿ ಸಭೆಯಲ್ಲಿ ಮಂಡಿಸಿದ್ದು, ಅದರಲ್ಲಿ ಇಂದು ದೇವಾಲಯ ಪ್ರವೇಶಕ್ಕೆ ದಿನಾಂಕ ನಿಗಧಿಗೊಳಿಸಲಾಗಿತ್ತು. ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಹಕಾರದೊಂದಿಗೆ 5 ದೇವಾಲಯಗಳಿಗೆ ಪ್ರವೇಶಿಸಲಾಯಿತು. ಮುಂದಿನ ದಿನಗಳಲ್ಲಿ ಉಳಿದ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಜಿಲ್ಲಾಡಳಿತ, ತಾಲ್ಲೂಕು ಆಡಳಿತ ನೀಡಿದ್ದು, ಅಲ್ಲಿಯವರೆಗೆ ಶಾಂತಿಯಿಂದ ವರ್ತಿಸುವಂತೆ ನಮ್ಮ ಮುಖಂಡರಿಗೆ, ಜನರಿಗೆ ತಿಳಿಸಿದ್ದೇವೆ ಎಂದು ಹೇಳಿದರು.

ಈ ವೇಳೆ ಕೆ.ಎಂ.ದೊಡ್ಡಿ ಠಾಣಾ ಸಿಪಿಐ ಅನಿಲ್ ಅವರ ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ಗ್ರಾಮದಲ್ಲಿ ಪೊಲೀಸ್ ಬಿಗಿ ಭದ್ರತೆ ಏರ್ಪಿಸಿದ್ದು, ಇಂದೂ ಕೂಡ ಅನಿಲ್ ಅವರು ಸ್ಥಳದಲ್ಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ರವಿ, ಮೂರ್ತಿ, ಹನುಮಯ್ಯ, ಶಿವನಂಜಪ್ಪ, ವಸಂತ್ ಕುಮಾರ್, ಮಲ್ಲಯ್ಯ, ಬೊಮ್ಮಲಿಂಗಯ್ಯ ಸೇರಿದಂತೆ ಮತ್ತಿತರ ಪರಿಶಿಷ್ಟ ಮುಖಂಡರು ಇದ್ದರು.

ಆಂದೋಲನ ಡೆಸ್ಕ್

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

8 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

9 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

9 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

9 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

9 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

10 hours ago