ಮಂಡ್ಯ

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.

ಗ್ರಾಮದಲ್ಲಿ ಕಳೆದ ಡಿ.15ರಂದು ಅಂಬೇಡ್ಕರ್ ಪುತ್ಥಳಿ ನಿರ್ಮಾಣದ ಸ್ಥಳಕ್ಕೆ ಸಂಬಂಧಿಸಿದಂತೆ ಹಾಗೂ ಅಂಬೇಡ್ಕರ್ ಫ್ಲೆಕ್ಸ್ ಹರಿದಿದ್ದ ವಿಚಾರಕ್ಕೆ ಪರಿಶಿಷ್ಟರು, ಇತರೆ ಜನಾಂಗದ ನಡುವೆ ಘರ್ಷಣೆಯಾಗಿತ್ತು. ಇದಾದ ನಂತರ ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು, ಡಿವೈಎಸ್‌ಪಿ ಯಶವಂತ್‌ಕುಮಾರ್, ಸಿಪಿಐ ಅನಿಲ್ ಅವರ ನೇತೃತ್ವದಲ್ಲಿ ಜಿಲ್ಲಾ ಶಶಸ್ತ್ರ ಪಡೆ ನಿಯೋಜನೆಗೊಳಿಸಲಾಗಿತ್ತು.

ಈ ಮಧ್ಯೆ ಮದ್ದೂರಿನ ತಾಲ್ಲೂಕು ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಸಮ್ಮುಖದಲ್ಲಿ ಎರಡೂ ಕೋಮುಗಳ ಶಾಂತಿ ಸಭೆ ನಡೆಸಲಾಗಿತ್ತು. ಇಲ್ಲಿ ಪರಿಶಿಷ್ಟ ಜಾನಾಂಗದವರು ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಸ್ಥಳ ಕೊಡಿಸುವಂತೆ, ಬೊಮ್ಮಲಿಂಗೇಶ್ವರಸ್ವಾಮಿ ಸಮುದಾಯ ಭವನದಲ್ಲಿ ಶುಭ ಸಮಾರಂಭಗಳಿಗೆ ಅವಕಾಶ ಕೊಡಿಸುವಂತೆ, ಮತ್ತು ಟ್ರಸ್ಟ್‌ನಲ್ಲಿ ಸದಸ್ಯತ್ವ ನೀಡುವಂತೆ, ಮೇಲ್ವರ್ಗದವರ ದೇವಾಲಗಳಿಗೆ ಪ್ರವೇಶ ಕೊಡಿಸುವಂತೆ ಮನವಿ ಮಾಡಿದ್ದರು.

ಶಾಂತಿ ಸಭೆಯಲ್ಲಿ ಮಾಡಿದ್ದ ಮನವಿ ಮೇರೆಗೆ ದಿನಾಂಕ ನಿಗಧಿಗೊಳಿಸಿದ್ದು, ಅದರಂತೆ ಇಂದು ಪೊಲೀಸ್ ಭದ್ರತೆಯಲ್ಲಿ ಬೊಮ್ಮಲಿಂಗೇಶ್ವರಸ್ವಾಮಿ ದೇವಾಲಯ, ಚಾಮುಂಡೇಶ್ವರಿ, ಮಾರಮ್ಮ, ಕಾಲಭೈರವ, ತಿಮ್ಮಪ್ಪ ದೇವಾಲಯಗಳಿಗೆ ದಲಿತ ಮುಖಂಡ ಸಿ.ಎ.ಕೆರೆ ಮೂರ್ತಿ ನೇತೃತ್ವದಲ್ಲಿ ಪರಿಶಿಷ್ಟ ಜನರು ಪ್ರವೇಶಿಸಿದರು.

ಇದನ್ನೂ ಓದಿ:-ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಈ ಸಂದರ್ಭದಲ್ಲಿ ದಲಿತ ಮುಖಂಡ ಸಿ.ಎ.ಕೆರೆ ಮೂರ್ತಿ ಮಾತನಾಡಿ, ನಮ್ಮ ಜನಾಂಗದ ಮುಖಂಡರು 5 ಬೇಡಿಕೆಗಳನ್ನ ಶಾಂತಿ ಸಭೆಯಲ್ಲಿ ಮಂಡಿಸಿದ್ದು, ಅದರಲ್ಲಿ ಇಂದು ದೇವಾಲಯ ಪ್ರವೇಶಕ್ಕೆ ದಿನಾಂಕ ನಿಗಧಿಗೊಳಿಸಲಾಗಿತ್ತು. ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಹಕಾರದೊಂದಿಗೆ 5 ದೇವಾಲಯಗಳಿಗೆ ಪ್ರವೇಶಿಸಲಾಯಿತು. ಮುಂದಿನ ದಿನಗಳಲ್ಲಿ ಉಳಿದ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಜಿಲ್ಲಾಡಳಿತ, ತಾಲ್ಲೂಕು ಆಡಳಿತ ನೀಡಿದ್ದು, ಅಲ್ಲಿಯವರೆಗೆ ಶಾಂತಿಯಿಂದ ವರ್ತಿಸುವಂತೆ ನಮ್ಮ ಮುಖಂಡರಿಗೆ, ಜನರಿಗೆ ತಿಳಿಸಿದ್ದೇವೆ ಎಂದು ಹೇಳಿದರು.

ಈ ವೇಳೆ ಕೆ.ಎಂ.ದೊಡ್ಡಿ ಠಾಣಾ ಸಿಪಿಐ ಅನಿಲ್ ಅವರ ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ಗ್ರಾಮದಲ್ಲಿ ಪೊಲೀಸ್ ಬಿಗಿ ಭದ್ರತೆ ಏರ್ಪಿಸಿದ್ದು, ಇಂದೂ ಕೂಡ ಅನಿಲ್ ಅವರು ಸ್ಥಳದಲ್ಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ರವಿ, ಮೂರ್ತಿ, ಹನುಮಯ್ಯ, ಶಿವನಂಜಪ್ಪ, ವಸಂತ್ ಕುಮಾರ್, ಮಲ್ಲಯ್ಯ, ಬೊಮ್ಮಲಿಂಗಯ್ಯ ಸೇರಿದಂತೆ ಮತ್ತಿತರ ಪರಿಶಿಷ್ಟ ಮುಖಂಡರು ಇದ್ದರು.

ಆಂದೋಲನ ಡೆಸ್ಕ್

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

7 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

9 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

9 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

9 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

9 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

9 hours ago