ಮಂಡ್ಯ

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.

ಗ್ರಾಮದಲ್ಲಿ ಕಳೆದ ಡಿ.15ರಂದು ಅಂಬೇಡ್ಕರ್ ಪುತ್ಥಳಿ ನಿರ್ಮಾಣದ ಸ್ಥಳಕ್ಕೆ ಸಂಬಂಧಿಸಿದಂತೆ ಹಾಗೂ ಅಂಬೇಡ್ಕರ್ ಫ್ಲೆಕ್ಸ್ ಹರಿದಿದ್ದ ವಿಚಾರಕ್ಕೆ ಪರಿಶಿಷ್ಟರು, ಇತರೆ ಜನಾಂಗದ ನಡುವೆ ಘರ್ಷಣೆಯಾಗಿತ್ತು. ಇದಾದ ನಂತರ ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು, ಡಿವೈಎಸ್‌ಪಿ ಯಶವಂತ್‌ಕುಮಾರ್, ಸಿಪಿಐ ಅನಿಲ್ ಅವರ ನೇತೃತ್ವದಲ್ಲಿ ಜಿಲ್ಲಾ ಶಶಸ್ತ್ರ ಪಡೆ ನಿಯೋಜನೆಗೊಳಿಸಲಾಗಿತ್ತು.

ಈ ಮಧ್ಯೆ ಮದ್ದೂರಿನ ತಾಲ್ಲೂಕು ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಸಮ್ಮುಖದಲ್ಲಿ ಎರಡೂ ಕೋಮುಗಳ ಶಾಂತಿ ಸಭೆ ನಡೆಸಲಾಗಿತ್ತು. ಇಲ್ಲಿ ಪರಿಶಿಷ್ಟ ಜಾನಾಂಗದವರು ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಸ್ಥಳ ಕೊಡಿಸುವಂತೆ, ಬೊಮ್ಮಲಿಂಗೇಶ್ವರಸ್ವಾಮಿ ಸಮುದಾಯ ಭವನದಲ್ಲಿ ಶುಭ ಸಮಾರಂಭಗಳಿಗೆ ಅವಕಾಶ ಕೊಡಿಸುವಂತೆ, ಮತ್ತು ಟ್ರಸ್ಟ್‌ನಲ್ಲಿ ಸದಸ್ಯತ್ವ ನೀಡುವಂತೆ, ಮೇಲ್ವರ್ಗದವರ ದೇವಾಲಗಳಿಗೆ ಪ್ರವೇಶ ಕೊಡಿಸುವಂತೆ ಮನವಿ ಮಾಡಿದ್ದರು.

ಶಾಂತಿ ಸಭೆಯಲ್ಲಿ ಮಾಡಿದ್ದ ಮನವಿ ಮೇರೆಗೆ ದಿನಾಂಕ ನಿಗಧಿಗೊಳಿಸಿದ್ದು, ಅದರಂತೆ ಇಂದು ಪೊಲೀಸ್ ಭದ್ರತೆಯಲ್ಲಿ ಬೊಮ್ಮಲಿಂಗೇಶ್ವರಸ್ವಾಮಿ ದೇವಾಲಯ, ಚಾಮುಂಡೇಶ್ವರಿ, ಮಾರಮ್ಮ, ಕಾಲಭೈರವ, ತಿಮ್ಮಪ್ಪ ದೇವಾಲಯಗಳಿಗೆ ದಲಿತ ಮುಖಂಡ ಸಿ.ಎ.ಕೆರೆ ಮೂರ್ತಿ ನೇತೃತ್ವದಲ್ಲಿ ಪರಿಶಿಷ್ಟ ಜನರು ಪ್ರವೇಶಿಸಿದರು.

ಇದನ್ನೂ ಓದಿ:-ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಈ ಸಂದರ್ಭದಲ್ಲಿ ದಲಿತ ಮುಖಂಡ ಸಿ.ಎ.ಕೆರೆ ಮೂರ್ತಿ ಮಾತನಾಡಿ, ನಮ್ಮ ಜನಾಂಗದ ಮುಖಂಡರು 5 ಬೇಡಿಕೆಗಳನ್ನ ಶಾಂತಿ ಸಭೆಯಲ್ಲಿ ಮಂಡಿಸಿದ್ದು, ಅದರಲ್ಲಿ ಇಂದು ದೇವಾಲಯ ಪ್ರವೇಶಕ್ಕೆ ದಿನಾಂಕ ನಿಗಧಿಗೊಳಿಸಲಾಗಿತ್ತು. ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಹಕಾರದೊಂದಿಗೆ 5 ದೇವಾಲಯಗಳಿಗೆ ಪ್ರವೇಶಿಸಲಾಯಿತು. ಮುಂದಿನ ದಿನಗಳಲ್ಲಿ ಉಳಿದ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಜಿಲ್ಲಾಡಳಿತ, ತಾಲ್ಲೂಕು ಆಡಳಿತ ನೀಡಿದ್ದು, ಅಲ್ಲಿಯವರೆಗೆ ಶಾಂತಿಯಿಂದ ವರ್ತಿಸುವಂತೆ ನಮ್ಮ ಮುಖಂಡರಿಗೆ, ಜನರಿಗೆ ತಿಳಿಸಿದ್ದೇವೆ ಎಂದು ಹೇಳಿದರು.

ಈ ವೇಳೆ ಕೆ.ಎಂ.ದೊಡ್ಡಿ ಠಾಣಾ ಸಿಪಿಐ ಅನಿಲ್ ಅವರ ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ಗ್ರಾಮದಲ್ಲಿ ಪೊಲೀಸ್ ಬಿಗಿ ಭದ್ರತೆ ಏರ್ಪಿಸಿದ್ದು, ಇಂದೂ ಕೂಡ ಅನಿಲ್ ಅವರು ಸ್ಥಳದಲ್ಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ರವಿ, ಮೂರ್ತಿ, ಹನುಮಯ್ಯ, ಶಿವನಂಜಪ್ಪ, ವಸಂತ್ ಕುಮಾರ್, ಮಲ್ಲಯ್ಯ, ಬೊಮ್ಮಲಿಂಗಯ್ಯ ಸೇರಿದಂತೆ ಮತ್ತಿತರ ಪರಿಶಿಷ್ಟ ಮುಖಂಡರು ಇದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

5 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

5 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

5 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

5 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

5 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

8 hours ago