ಮಂಡ್ಯ

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.

ಗ್ರಾಮದಲ್ಲಿ ಕಳೆದ ಡಿ.15ರಂದು ಅಂಬೇಡ್ಕರ್ ಪುತ್ಥಳಿ ನಿರ್ಮಾಣದ ಸ್ಥಳಕ್ಕೆ ಸಂಬಂಧಿಸಿದಂತೆ ಹಾಗೂ ಅಂಬೇಡ್ಕರ್ ಫ್ಲೆಕ್ಸ್ ಹರಿದಿದ್ದ ವಿಚಾರಕ್ಕೆ ಪರಿಶಿಷ್ಟರು, ಇತರೆ ಜನಾಂಗದ ನಡುವೆ ಘರ್ಷಣೆಯಾಗಿತ್ತು. ಇದಾದ ನಂತರ ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು, ಡಿವೈಎಸ್‌ಪಿ ಯಶವಂತ್‌ಕುಮಾರ್, ಸಿಪಿಐ ಅನಿಲ್ ಅವರ ನೇತೃತ್ವದಲ್ಲಿ ಜಿಲ್ಲಾ ಶಶಸ್ತ್ರ ಪಡೆ ನಿಯೋಜನೆಗೊಳಿಸಲಾಗಿತ್ತು.

ಈ ಮಧ್ಯೆ ಮದ್ದೂರಿನ ತಾಲ್ಲೂಕು ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಸಮ್ಮುಖದಲ್ಲಿ ಎರಡೂ ಕೋಮುಗಳ ಶಾಂತಿ ಸಭೆ ನಡೆಸಲಾಗಿತ್ತು. ಇಲ್ಲಿ ಪರಿಶಿಷ್ಟ ಜಾನಾಂಗದವರು ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಸ್ಥಳ ಕೊಡಿಸುವಂತೆ, ಬೊಮ್ಮಲಿಂಗೇಶ್ವರಸ್ವಾಮಿ ಸಮುದಾಯ ಭವನದಲ್ಲಿ ಶುಭ ಸಮಾರಂಭಗಳಿಗೆ ಅವಕಾಶ ಕೊಡಿಸುವಂತೆ, ಮತ್ತು ಟ್ರಸ್ಟ್‌ನಲ್ಲಿ ಸದಸ್ಯತ್ವ ನೀಡುವಂತೆ, ಮೇಲ್ವರ್ಗದವರ ದೇವಾಲಗಳಿಗೆ ಪ್ರವೇಶ ಕೊಡಿಸುವಂತೆ ಮನವಿ ಮಾಡಿದ್ದರು.

ಶಾಂತಿ ಸಭೆಯಲ್ಲಿ ಮಾಡಿದ್ದ ಮನವಿ ಮೇರೆಗೆ ದಿನಾಂಕ ನಿಗಧಿಗೊಳಿಸಿದ್ದು, ಅದರಂತೆ ಇಂದು ಪೊಲೀಸ್ ಭದ್ರತೆಯಲ್ಲಿ ಬೊಮ್ಮಲಿಂಗೇಶ್ವರಸ್ವಾಮಿ ದೇವಾಲಯ, ಚಾಮುಂಡೇಶ್ವರಿ, ಮಾರಮ್ಮ, ಕಾಲಭೈರವ, ತಿಮ್ಮಪ್ಪ ದೇವಾಲಯಗಳಿಗೆ ದಲಿತ ಮುಖಂಡ ಸಿ.ಎ.ಕೆರೆ ಮೂರ್ತಿ ನೇತೃತ್ವದಲ್ಲಿ ಪರಿಶಿಷ್ಟ ಜನರು ಪ್ರವೇಶಿಸಿದರು.

ಇದನ್ನೂ ಓದಿ:-ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಈ ಸಂದರ್ಭದಲ್ಲಿ ದಲಿತ ಮುಖಂಡ ಸಿ.ಎ.ಕೆರೆ ಮೂರ್ತಿ ಮಾತನಾಡಿ, ನಮ್ಮ ಜನಾಂಗದ ಮುಖಂಡರು 5 ಬೇಡಿಕೆಗಳನ್ನ ಶಾಂತಿ ಸಭೆಯಲ್ಲಿ ಮಂಡಿಸಿದ್ದು, ಅದರಲ್ಲಿ ಇಂದು ದೇವಾಲಯ ಪ್ರವೇಶಕ್ಕೆ ದಿನಾಂಕ ನಿಗಧಿಗೊಳಿಸಲಾಗಿತ್ತು. ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಹಕಾರದೊಂದಿಗೆ 5 ದೇವಾಲಯಗಳಿಗೆ ಪ್ರವೇಶಿಸಲಾಯಿತು. ಮುಂದಿನ ದಿನಗಳಲ್ಲಿ ಉಳಿದ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಜಿಲ್ಲಾಡಳಿತ, ತಾಲ್ಲೂಕು ಆಡಳಿತ ನೀಡಿದ್ದು, ಅಲ್ಲಿಯವರೆಗೆ ಶಾಂತಿಯಿಂದ ವರ್ತಿಸುವಂತೆ ನಮ್ಮ ಮುಖಂಡರಿಗೆ, ಜನರಿಗೆ ತಿಳಿಸಿದ್ದೇವೆ ಎಂದು ಹೇಳಿದರು.

ಈ ವೇಳೆ ಕೆ.ಎಂ.ದೊಡ್ಡಿ ಠಾಣಾ ಸಿಪಿಐ ಅನಿಲ್ ಅವರ ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ಗ್ರಾಮದಲ್ಲಿ ಪೊಲೀಸ್ ಬಿಗಿ ಭದ್ರತೆ ಏರ್ಪಿಸಿದ್ದು, ಇಂದೂ ಕೂಡ ಅನಿಲ್ ಅವರು ಸ್ಥಳದಲ್ಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ರವಿ, ಮೂರ್ತಿ, ಹನುಮಯ್ಯ, ಶಿವನಂಜಪ್ಪ, ವಸಂತ್ ಕುಮಾರ್, ಮಲ್ಲಯ್ಯ, ಬೊಮ್ಮಲಿಂಗಯ್ಯ ಸೇರಿದಂತೆ ಮತ್ತಿತರ ಪರಿಶಿಷ್ಟ ಮುಖಂಡರು ಇದ್ದರು.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 mins ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

24 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

30 mins ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

37 mins ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

43 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

47 mins ago