ಮಂಡ್ಯ: ಶ್ರೀರಂಗಪಟ್ಟಣ ದಸರಾಗೆಂದು ಮೈಸೂರಿನಿಂದ ತೆರಳಿದ್ದ ಕುಮ್ಕಿ ಆನೆ ಲಕ್ಷ್ಮಿ ಕೆಲಕಾಲ ರಂಪಾಟ ನಡೆಸಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ದಸರಾ ಸಂಭ್ರಮ ಮನೆಮಾಡಿದ್ದು, ನಟ ಶಿವರಾಜ್ ಕುಮಾರ್ ಅವರಿಂದು ಜಂಬೂಸವಾರಿಯಲ್ಲಿ ಪುಷ್ಪಾರ್ಚನೆ ಮಾಡಲಿದ್ದಾರೆ.
ಶ್ರೀರಂಗಪಟ್ಟಣ ದಸರಾದಲ್ಲಿ ಮಹೇಂದ್ರ ಅಂಬಾರಿ ಹೊರುವ ಆನೆಯಾಗಿದ್ದು, ಹಿರಣ್ಯ ಮತ್ತು ಲಕ್ಷ್ಮೀ ಆನೆಗಳು ಕುಮ್ಕಿ ಆನೆಗಳಾಗಿವೆ.
ಇಂದು ಇದ್ದಕ್ಕಿದ್ದಂತೆ ಕುಮ್ಕಿ ಆನೆಯಾದ ಲಕ್ಷ್ಮಿ ಕೆಲಕಾಲ ರಂಪಾಟ ನಡೆಸಿದ್ದು, ಜನರನ್ನು ಭಯಭೀತರನ್ನಾಗಿಸಿತ್ತು. ಕೆಲಕಾಲ ದಿಕ್ಕಾಪಾಲಾಗಿ ಓಡಿದ ಲಕ್ಷ್ಮಿ ಆನೆಯನ್ನು ಶಾಂತಳನ್ನಾಗಿಸಲು ಮಾವುತರು ಹರಸಾಹಸ ಪಡುವಂತಾಯಿತು. ಬಳಿಕ ಮಾವುತರು ತಮ್ಮ ಸಮಯ ಪ್ರಜ್ಞೆಯಿಂದ ಮುಂದೆ ಆಗಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…