ಮಂಡ್ಯ: ಶ್ರೀರಂಗಪಟ್ಟಣ ದಸರಾಗೆಂದು ಮೈಸೂರಿನಿಂದ ತೆರಳಿದ್ದ ಕುಮ್ಕಿ ಆನೆ ಲಕ್ಷ್ಮಿ ಕೆಲಕಾಲ ರಂಪಾಟ ನಡೆಸಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ದಸರಾ ಸಂಭ್ರಮ ಮನೆಮಾಡಿದ್ದು, ನಟ ಶಿವರಾಜ್ ಕುಮಾರ್ ಅವರಿಂದು ಜಂಬೂಸವಾರಿಯಲ್ಲಿ ಪುಷ್ಪಾರ್ಚನೆ ಮಾಡಲಿದ್ದಾರೆ.
ಶ್ರೀರಂಗಪಟ್ಟಣ ದಸರಾದಲ್ಲಿ ಮಹೇಂದ್ರ ಅಂಬಾರಿ ಹೊರುವ ಆನೆಯಾಗಿದ್ದು, ಹಿರಣ್ಯ ಮತ್ತು ಲಕ್ಷ್ಮೀ ಆನೆಗಳು ಕುಮ್ಕಿ ಆನೆಗಳಾಗಿವೆ.
ಇಂದು ಇದ್ದಕ್ಕಿದ್ದಂತೆ ಕುಮ್ಕಿ ಆನೆಯಾದ ಲಕ್ಷ್ಮಿ ಕೆಲಕಾಲ ರಂಪಾಟ ನಡೆಸಿದ್ದು, ಜನರನ್ನು ಭಯಭೀತರನ್ನಾಗಿಸಿತ್ತು. ಕೆಲಕಾಲ ದಿಕ್ಕಾಪಾಲಾಗಿ ಓಡಿದ ಲಕ್ಷ್ಮಿ ಆನೆಯನ್ನು ಶಾಂತಳನ್ನಾಗಿಸಲು ಮಾವುತರು ಹರಸಾಹಸ ಪಡುವಂತಾಯಿತು. ಬಳಿಕ ಮಾವುತರು ತಮ್ಮ ಸಮಯ ಪ್ರಜ್ಞೆಯಿಂದ ಮುಂದೆ ಆಗಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…